Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೈನ ಮುನಿಗಳ ಹತ್ಯೆ ಖಂಡಿಸಿ ಚಿತ್ರದುರ್ಗದಲ್ಲಿ ಜೈನ ಸಮುದಾಯದಿಂದ ಮೌನ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, (ಜು.12) : ಜೈನ ಮುನಿಗಳ ಹತ್ಯೆಯನ್ನು ಖಂಡಿಸಿ ಜೈನ ಸಮುದಾಯದ ಒಕ್ಕೂಟದ ವತಿಯಿಂದ ಮೌನ ಪ್ರತಿಭಟನೆಯನ್ನು ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.

ನಗರದ ಲಕ್ಷ್ಮೀ ಬಜಾರದ ಜೈನ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೌನ ಮೆರವಣಿಗೆಯ ಮೂಲಕ ಬಂದು ಅಪರ ಜಿಲ್ಲಾಧಿಕಾರಿ ಕುಮಾರ ಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು.

ಬೆಳಗಾವಿ ಜಿಲ್ಲೆ, ಚಿಕ್ಕೋಡಿ ತಾಲ್ಲೂಕು, ಹಿರೇಕೋಡಿ ಗ್ರಾಮದಲ್ಲಿ ನಂದಿಪರ್ವತ ಎಂಬ ಆಶ್ರಮದಲ್ಲಿ ಜೈನ ಮಂದಿರವಿದ್ದು, ಅಲ್ಲಿ ಆಚಾರ್ಯ ಶ್ರೀ: 108 ಕಾಮ ಕುಮಾರನಂದಿ ಮುನಿ ಮಹಾರಾಜರನ್ನು ಅಪಹರಿಸಿ, ಬರ್ಬರವಾಗಿ ಹತ್ಯೆ ಮಾಡಿ, ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಮುನಿಶ್ರೀಗಳ ಶರೀರವನ್ನು ವಿಕೃತಗೊಳಿಸಿ ಕೊಲೆ ಮಾಡಿರುವುದು ಅತ್ಯಂತ ಖಂಡನೀಯ. ಇಂತಹ ಕೃತ್ಯವನ್ನು ಸಕಲ ಜೈನ ಸಮಾಜ ಮತ್ತು ಜೈನ ಮಠಗಳು ಎಲ್ಲಾ ಮಠಾಧೀಶರು ಖಂಡನೆ ವ್ಯಕ್ತಪಡಿಸುತ್ತೇವೆ.

ಸರ್ಕಾರ ಮತ್ತು ಸರ್ಕಾರಿ ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆಯಿಂದ ಹಂತಕರನ್ನು ಬಂಧಿಸಿ, ಕಾನೂನಾತ್ಮಕವಾದಂತಹ ಕಾರ್ಯಚರಣೆಯನ್ನು ಮುಂದುವರೆಸಿದ್ದಾರೆ. ಆದರೆ, ಸಂವಿಧಾನ ಹಂತಕರಿಗೆ ಅತ್ಯಂತ ಕಠಿಣ ಮತ್ತು ಅತ್ಯಧಿಕ ಶಿಕ್ಷೆಯನ್ನು ವಿಧಿಸಬೇಕು. ಯಾವುದೇ ರೀತಿಯಾದಂತಹ ಕರುಣೆಯನ್ನು ತೋರಬಾರದು ಪಡಿಸುತ್ತೇವೆ. ಎಂದು ಚಿತ್ರದುರ್ಗ ತಾಲ್ಲೂಕು ಜೈನ ಸಮುದಾಯ ಅಸಂಘಟಿತ ವಲಯದಿಂದ ಆಗ್ರಹಿಸಿದೆ.

“ಮುನಿ ಹತ್ಯಾ ದೋಷ ಮಹಾ ಪಾಪವಾಗುರುತ್ತದೆ” ಯಾವ ರೀತಿಯಾಗಿ ದಯವೇ ಮೂಲ ಧರ್ಮವೆಂದು ಲೋಕದ ಎಲ್ಲಾ ಜೀವಿಗಳಲ್ಲಿಯೂ ಸಮತಾ ಭಾವನೆಯನ್ನು ಹೊಂದಿದ ಭಗವಾನ್‌ ಶ್ರೀ ಮಹಾವೀರಸ್ವಾಮಿಯ ಮೂಲ ಸಂದೇಶವಾದ ಬದುಕು-ಬದುಕಲು ಬಿಡು, ಮತ್ತು ಜೀವಿಗೆ ಜೀವಿಯೇ ನೆರವು ಎಂಬ ತತ್ವ ಸಿದ್ಧಾಂತವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕುತ್ತಿರುವವರು ಜೈನ ಧರ್ಮಮದ ಅನುಯಾಯಿಗಳು, ಅದರಲ್ಲಿಯೂ ಧರ್ಮಪ್ರವರ್ತಕರಾಗಿ ಆಧ್ಯಾತ್ಮ, ಪ್ರವರ್ತಕರಾಗಿ, ಶಾಂತಿ ಪ್ರಿಯರಾಗಿ ಅಹಿಂಸೆಯನ್ನು ಪ್ರತಿಪಾದನೆ ಮಾಡುವಂತಹ ಜೈನ ಮುನಿಗಳಿಗೆ ಆಗಿರುವ ಈ ಅಹಿತಕರ ಘಟನೆಗೆ ಸರ್ಕಾರ ಮತ್ತು ಸರ್ಕಾರಿ ಅಧಿಕಾರಿಗಳು ಕಾನೂನಾತ್ಮಕವಾಗಿ ಅತ್ಯಂತ ಕಠಿಣವಾದ ಸೂಕ್ತ ದಂಡನೆಯನ್ನು ನೀಡುವುದರೊಂದಿಗೆ ಮುಂಬರುವ ದಿನಗಳಲ್ಲಿ ಅಲ್ಪಸಂಖ್ಯಾತರಲ್ಲಿ ಅಲ್ಪಸಂಖ್ಯಾತರಾದಂತಹ ಜೈನ ಧರ್ಮ ಸಾಧು ಸಂತರಿಗೆ ಇಂತಹ ಈ ಭೂಮಿಯ ಮೇಲೆ ಈ ಮನುಕುಲ ಬಂದಾಗಿನಿಂದ ಎಂದೂ ಕೇಳರಿಯದ ಘನಘೋರ ಕಠೋರ ಮೃಗಗಳಿಗಿಂತಲೂ ಕೀಳಾಗಿ ವರ್ತಿಸಿದ ಆ ಕೊಲೆ ಕಟುಕರು ತಮ್ಮ ಕ್ರೌರ್ಯ ಮೆರೆದಿದ್ದಾರೆ. ಮುಂದಿನ ಭವಿಷ್ಯದಲ್ಲಿ ಇಂತಹ ಯೋಜನೆ ಕನಸಿನಲ್ಲಿಯೂ ಬರಬಾರದು ಅಂತಹ ಕಠೋರ ಶಿಕ್ಷೆಗೆ ಅವರನ್ನು ಗುರಿಪಡಿಸಬೇಕು ಮತ್ತು ಎಂದೂ ಇಂತಹ ಹಿಂಸಾತ್ಮಕ ಘಟನೆಗಳು ನಡೆಯದಂತೆ ಸೂಕ್ತ ಮುಂಜಾಗ್ರತಾ ಕ್ರಮವನ್ನು ಕೈಗೊಂಡು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದರೊಂದಿಗೆ ಸಕಲ ಜೈನ ಸಮಾಜಕ್ಕೆ ನ್ಯಾಯ ಮತ್ತು ರಕ್ಷಣೆ ಒದಗಿಸಿಕೊಡಿರೆಂದು ಸರ್ಕಾರಕ್ಕೆ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಜೈನ ಸಮುದಾಯದ ಮುಖಂಡ ರಾದ ಅಜಿತ್ ಜೈನ್, ಪ್ರೇಮಚಂದ್,ಆಶೋಕ್ ಜೈನ್, ರಜಿತ್ ಜೈನ್,ವಿಕ್ರಾಂತ್ ಜೈನ್, ಶ್ರೇಣಿಕ್ ಜೈನ್ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!
Fatal error: Out of memory (allocated 46137344) (tried to allocate 655360 bytes) in /home/nagendra/public_html/wp-includes/option.php on line 617