Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪುರಾತನ ಕಾಲದಿಂದಲೂ ರಂಗಭೂಮಿ ಮತ್ತು ರಂಗ ಕಲೆಗೆ ಹೆಚ್ಚು ಮಹತ್ವವಿದೆ : ಡಾ. ಯಶೋಧರ ಜಿ.ಎನ್

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.06 : ಪರಿಣಾಮಕಾರಿ ಶಿಕ್ಷಣದ ಕಲಿಕೆಗೆ ರಂಗಕಲೆ ಸಹಕಾರಿಯಾಗಿದೆ, ರಂಗ ಶಿಕ್ಷಣ ಮನುಷ್ಯನ ಹುಟ್ಟಿನಿಂದಲೇ ಪ್ರಾರಂಭವಾಗುತ್ತದೆ. ಭಾರತದಲ್ಲಿ ಪುರಾತನ ಕಾಲದಿಂದಲೂ ರಂಗಭೂಮಿಗೆ ಮತ್ತು ರಂಗ ಕಲೆಗೆ ಹೆಚ್ಚು ಮಹತ್ವವನ್ನು ನೀಡಲಾಗಿದೆ ಎಂದು ಸರ್ಕಾರಿ ಕಲಾ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಯಶೋಧರ ಜಿ.ಎನ್ ಅಭಿಪ್ರಾಯಪಟ್ಟರು.

ನಗರದ ಪಿಳ್ಳೆಕೆರೆನಗಳ್ಳಿಯ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಶಿಕ್ಷಣದಲ್ಲಿ ರಂಗಕಲೆ ಕುರಿತು ಒಂದು ದಿನದ ಕಾರ್ಯಾಗಾರ ಉದ್ಧಾಟಿಸಿ ಮಾತನಾಡಿದರು.

ಭಾರತದಲ್ಲಿ ಪುರಾತನ ಕಾಲದಿಂದಲೂ ರಂಗ ಕಲೆಗೆ ಹೆಚ್ಚಿನ ಮಹತ್ವವಿದೆ. ರಾಮಾಯಣ ಮಹಾಭಾರತದಂತಹ ಮಹಾಕಾವ್ಯಗಳನ್ನು ಜನರಿಗೆ ಮನಮುಟ್ಟುವಂತೆ ಅಭಿನಯದ ಮೂಲಕ ಅಲ್ಲಿಯ ಪಾತ್ರ ಸೃಷ್ಟಿಯನ್ನು ಜನಸಾಮಾನ್ಯರಿಗೆ ಹತ್ತಿರವಾಗುವ ಹಾಗೆ ನಿರ್ಮಿಸಿ ನಿರ್ದೇಶಿಸಿದ ಅನೇಕ ಕಂಪನಿಗಳು ಕರ್ನಾಟಕದಲ್ಲಿ ಇವೇ. ಟಿವಿ, ಕಂಪ್ಯೂಟರ್, ಮೊಬೈಲ್‍ಗಳ ಅತಿ ಹೆಚ್ಚಿನ ಬಳಕೆಯಿಂದಾಗಿ ಮನೋರಂಜನೆ ಮಾಧ್ಯಮವಾಗಿದ್ದ ರಂಗಕಲೆಗಳು ಇಂದು ಮೂಲೆ ಗುಂಪಾಗುತ್ತಿರುವುದು ವಿಷಾದನೀಯ.

ಶಿಕ್ಷಕ ಪಾಠವನ್ನು ಬೋಧಿಸಿದರೆ ಮಾತ್ರ ಸಾಕಾಗುವುದಿಲ್ಲ ಅದಕ್ಕೆ ಪೂರಕವಾದ ಅಭಿವ್ಯಕ್ತಿಯು ಬೇಕಾಗುತ್ತದೆ. ಆದ್ದರಿಂದ  ಕಲಿಕಾರ್ತಿಯ ಕಲಿಕೆಯು ಪೂರ್ಣಗೊಳ್ಳಬೇಕಾದರೆ ರಂಗಕಲೆಯ ಅಗತ್ಯತೆ ಹೆಚ್ಚಾಗಿದೆ. ಈ ದೃಷ್ಟಿಯಿಂದ ಶಿಕ್ಷಕ ಪರಿಪೂರ್ಣ ಮತ್ತು ಪರಿಣಾಮಕಾರಿ ಬೋಧಕನಾಗಬೇಕೆಂದರೆ ರಂಗ ಕಲೆಯನ್ನು ತನ್ನ ಬೋಧನೆಯಲ್ಲಿ ಅಳವಡಿಸಿಕೊಳ್ಳುವುದು ಸೂಕ್ತವಾದುದು ಎಂದು ತಿಳಿಸಿದರು.

ಉಪನ್ಯಾಸಕ ಹಾಗೂ ರಂಗಕರ್ಮಿ ಸಿ.ಪಿ.ಜ್ಞಾನದೇವ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ರಂಗ ಕಲೆ ಅವಶ್ಯವಾಗಿದೆ. ಶಿಕ್ಷಕರು ಹಾಗೂ ಉಪನ್ಯಾಸಕರು ರಂಗಕಲೆಯನ್ನು ಮೈಗೂಡಿಸಿಕೊಂಡು ಪಾಠ ಮಾಡುವುದರಿಂದ ಮಕ್ಕಳಲ್ಲಿ ಶಿಕ್ಷಣದ ಒಲವು ಹೆಚ್ಚುವುದರ ಜೊತೆಗೆ ಜ್ಞಾಪಕ ಶಕ್ತಿ ಹೆಚ್ಚು ಮಾಡಲು ಸಹಾಕಾರಿಯಾಗುತ್ತದೆ.

ಪ್ರತಿ ಪ್ರಾಣಿ ಸಂಕುಲವು ಭೂಮಿಗೆ ಬಂದು ಜೀವಿಸುವುದು ಒಂದು ಕಲೆ, ಹಾಗಾಗಿಯೇ ಪ್ರತಿ ಜೀವನದ ಘಟ್ಟಗಳನ್ನು ನಮ್ಮ ಪರ್ವಿಕರು ರಂಗಭೂಮಿ, ಯುದ್ಧಭೂಮಿ, ರುದ್ರಭೂಮಿ ಎಂದು ಮೂರು ಭಾಗ ಮಾಡಿ ಅದರ ಮಹತ್ವ ಸಾರಿದ್ದಾರೆ. ರಂಗಭೂಮಿಯಲ್ಲಿ ದೃಶ್ಯ ಮತ್ತು ಶ್ರವಣ ಮಾಧ್ಯಮ ಎರಡು ಮೇಳಯಿಸಿ ವಿದ್ಯರ್ಥಿಗಳ ಮೇಲೆ ಒಂದು ಗಟ್ಟಿಯಾದ ಪ್ರಭಾವ ಬೀರಬಲ್ಲ ಮಾಧ್ಯಮವಾಗಿದೆ.

ದ್ವನಿ ಏರಿಳೀತಾ, ಬಾವಭಿನಯಗಳ ಮೂಲಕ ಪ್ರಸ್ತುತ ಸಾಮಾಜಿಕ ಸನ್ನಿವೇಶಗಳನ್ನು ಅರ್ಥ ಗರ್ಭಿತವಾಗಿ ಹೇಳುವುದರಿಂದ ಮಕ್ಕಳಲ್ಲಿ ಸಾಮಾಜಿಕ ಕಳಕಳಿಯ ಜೊತೆಗೆ ಉತ್ತಮ ಮೌಲ್ಯಗಳನ್ನು ಬೆಳೆಸುವಲ್ಲಿ ಸಹಕರಿಯಾಗುತ್ತದೆ. ರಂಗಭೂಮಿಯಿಂದ ಮಕ್ಕಳಲ್ಲಿ ಮುಕ್ತ ಮನಸ್ಥಿತಿಯೊಂದಿಗೆ ಅವರ ಆತ್ಮವಿಶ್ವಾಸ ಬೆಳೆಸಬಹುದಾಗಿದೆ ಎಂದರು.

ಬಾದರದಿನ್ನಿ ಆರ್ಟ್ಸ್ ಅಕಾಡೆಮಿಯ ಕಾರ್ಯದರ್ಶಿ ಪ್ರಕಾಶ್ ಬಾದರದಿನ್ನಿ, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಎಂ.ಆರ್.ಜಯಲಕ್ಷ್ಮೀ, ಉಪಪ್ರಾಚಾರ್ಯ ಎಚ್.ಎನ್.ಶಿವಕುಮರ, ಉಪನ್ಯಾಸಕರಾದ ಪದ್ಮಾಶ್ರೀ, ಓ.ಎಂ.ಮಂಜುನಾಥ್, ಮಂಜುನಾಥಪ್ಪ, ಪಲ್ಲವಿ, ಗೀತಾ, ಕಲಾವಿದರಾದ ರಚನ ಮಂಜುನಾಥ್, ಗುರುಕಿರಣ, ರಾಘವೇಂದ್ರ ಮತ್ತಿತರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!