Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದ ಮೇಲೆ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ : ಪ್ರಭಂಜನ ಆರೋಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಏ.19 : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ದಿನದಿಂದ ನಿರಂತರವಾಗಿ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಬಜರಂಗದಳ ಕರ್ನಾಟಕ ದಕ್ಷಿಣದ ಪ್ರಾಂತ ಸಂಯೋಜಕ ಪ್ರಭಂಜನ ಆರೋಪಿಸಿದ್ದಾರೆ.

ಈ ಬಗ್ಗೆ ಹೇಳಿಕೆಯನ್ನು ನೀಡಿರುವವ ಅವರು, ಬೆಂಗಳೂರಿನ ನಗರ್ತಾರ್  ಪೇಟೆಯಲ್ಲಿ  ಹನುಮಾನ್ ಚಾಲೀಸಾ ಹಾಕಿದ್ದಾರೆಂದು ಕೆಲವು ಮುಸ್ಲಿಂ ಯುವಕರು ಅಂಗಡಿಗೆ ನುಗ್ಗಿ  ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ಅದೇ ರೀತಿ ಬೆಂಗಳೂರಿನ ಬನಶಂಕರಿಯ ಪ್ರಗತಿಪುರದಲ್ಲಿ ಕೆಲವು ಮುಸಲ್ಮಾನ ಯುವಕರು ಹಿಂದೂ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೊಟ ಮಾಡಿ 42 ದಿನಗಳ ಕಾಲ ತಲೆ ಮರಿಸಿಕೊಂಡು ಇದ್ದ ಭಯೋತ್ಪದಕರ ಬೆನ್ನಿಗೆ ನಿಂತವರು ಯಾರು ಎಂಬುದು ಯೋಚನೆ ಮಾಡಬೇಕು ಎಂದಿದ್ದಾರೆ.

ದಾವಣಗೆರೆಯ ಚೆನ್ನಗಿರಿ ತಾಲೂಕಿನಲ್ಲಿ ರಾಮನವಮಿ ಮಾಡಬೇಕಾದರೆ ಮುಸಲ್ಮಾನ ಯುವಕರು ವಿರೋಧ ಮಾಡಿ ಹಲ್ಲೆ  ಮಾಡಿದ್ದಾರೆ,ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಕಾರ್‍ನಲ್ಲಿ ಬರುತ್ತಿರುವವರು ಹಿಂದೂ ಅಂತ ಗೊತ್ತಾದ ತಕ್ಷಣ ಗಾಂಜಾ ಮತ್ತಿನಲ್ಲಿ ಇದ್ದ ಮುಸ್ಲಿಂ ಗುಂಡಾಗಳು ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಮೇಲಿನ ಎಲ್ಲಾ ಘಟನೆಗಳು  ನಡೆಯಲು ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆಯೇ ತುಷ್ಟಿಕರಣವೇ ಕಾರಣವಾಗಿದೆ ಎಂದು ದೂರಿದ್ದಾರೆ.

ಸರ್ಕಾರದ ಒತ್ತಡದ ಕಾರಣಕ್ಕೆ ಮಣಿದ ಆಡಳಿತ ವ್ಯವಸ್ಥೆ ವಿಶ್ವ ಹಿಂದೂ ಪರಿಷತ್  ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ರಘು ಸಕಲೇಶಪುರ, ಬಜರಂಗದಳ ಕಾರ್ಯಕರ್ತರಾದ  ಶಿವು, ಪುತ್ತೂರು ಸಂಯೋಜಕ ಭರತ್ ಕುಮ್ದೇಲ್ ಮತ್ತು ಸಂತೋಷ್ ತುಂಬೆ, ಮಂಗಳೂರಿನ ಜಯಪ್ರಕಾಶ್ ಚಿಕ್ಕಮಂಗಳೂರು ಜಿಲ್ಲೆಯ ಮಂಜು ತುಡುಕೂರ್  ಇನ್ನು ಮುಂತಾದ ಕಾರ್ಯಕರ್ತರ ಮೇಲೆಮೇಲೆ ಗೂಂಡಾ ಕಾಯ್ದೆ, ಗಡಿಪಾರು ಮಾಡಿ ಹತ್ತಿಕುವ ಕೆಲಸ ಮಾಡುತ್ತಿದೆ ಎಂದರು.

ನಾಚಿಕೆಗೇಡಿನ ಸರ್ಕಾರ ರಾಜ್ಯದ ಶಕ್ತಿ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದರೆ ಅದನ್ನ ಸಮರ್ಥಿಸಿಕೊಳ್ಳುವ ಸರ್ಕಾರಗಳಿಂದ ಏನು ನಿರೀಕ್ಷೆ ಮಾಡಲು ಸಾಧ್ಯ. ನಿನ್ನೆ ಚಿತ್ರದುರ್ಗ ನಗರದಲ್ಲಿ ಉಮೇಶ್ ನಾಯಕ್ ಎಂಬ ಯುವಕ ಜೊತೆಯಾಗಿ ಕೆಲಸ ಮಾಡುವ ಮುಸ್ಲಿಂ ಯುವತಿಯನ್ನು ಮನೆಗೆ ಬಿಡಲು ಬೈಕ್ ನಲ್ಲಿ ಹೋಗುವಾಗ ಮುಸ್ಲಿಂ ಯುವಕರು ಆ ಯುವಕನಿಗೆ ಹಲ್ಲೆ ಮಾಡಿದ್ದಾರೆ. ಎಚ್ಚರಗೊಳ್ಳಿ ಹಿಂದುಗಳೇ ಇಂದು ಕಾಂಗ್ರೆಸ್ ಮಯೆರ್ ಮಗಳಾದ ನೇಹಾ ಎಂಬ ಕಾಲೇಜು ಕಲಿಯುತ್ತಿದ್ದ ಯುವತಿಯನ್ನ ಲವ್ ಜಿಹಾದ್ ಗೆ ಬೀಳಲಿಲ್ಲ ಎಂದು ಸಾರ್ವಜನಿಕವಾಗಿ 9 ಬಾರಿ ಇರಿದು ಕೊಂದ ಫಯಾಜ್ ಯಾವ ಶಕ್ತಿ ಬೆನ್ನ ಹಿಂದೆ ಇದೆ ಎಂದು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಪ್ರಭಂಜನ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!