Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರ ಧಾನ್ಯ ಒಂದೇ ಬಾರಿ ವಿತರಣೆ: 2 ಬಾರಿ ಬಯೋಮೆಟ್ರಿಕ್ ಕಡ್ಡಾಯ

---Advertisement---

ಬಳ್ಳಾರಿ.ಆಗಸ್ಟ್.7: ಅಂತ್ಯೋದಯ ಮತ್ತು ಬಿ.ಪಿ.ಎಲ್. ಪಡಿತರ ಚೀಟಿದಾರರಿಗೆ ಆಹಾರ ಆಗಸ್ಟ್ ಮಾಹೆಯಲ್ಲಿ ಧಾನ್ಯಗಳನ್ನು ಬಿಡುಗಡೆ ಮಾಡಲಾಗಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಆಗಸ್ಟ್ ಹಾಗೂ ಸೆಪ್ಟೆಂಬರ್ ರ ಎರಡು ತಿಂಗಳ ಹಂಚಿಕೆಯನ್ನು ಆಗಸ್ಟ್ ತಿಂಗಳಿನಲ್ಲೇ ಒಟ್ಟಿಗೆ ವಿತರಿಸಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಆಹಾರ ಧಾನ್ಯ ವಿತರಣೆಯ ಪ್ರಮಾಣ

ಅಂತ್ಯೋದಯ ಕಾರ್ಡುದಾರರಿಗೆ: ಪ್ರತಿ ಕಾರ್ಡಿಗೆ 21 ಕೆ.ಜಿ ಜೋಳ ಹಾಗೂ 14 ಕೆ.ಜಿ ಅಕ್ಕಿ.

ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ: ಪ್ರತಿ ಸದಸ್ಯರಿಗೆ 6 ಕೆ.ಜಿ ಜೋಳ ಹಾಗೂ 4 ಕೆ.ಜಿ ಅಕ್ಕಿ.

ಪಡಿತರ ಚೀಟಿದಾರರು 2 ತಿಂಗಳ ಆಹಾರ ಧಾನ್ಯವನ್ನು ಒಟ್ಟಿಗೆ ಪಡೆಯಲು ನ್ಯಾಯಬೆಲೆ ಅಂಗಡಿಗಳಲ್ಲಿ 2 ಬಾರಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯವಾಗಿದೆ. ಸಾರ್ವಜನಿಕರು ತಮಗೆ ನಿಗದಿತ ಪ್ರಮಾಣದಂತೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಧಾನ್ಯಗಳನ್ನು ಪಡೆದುಕೊಳ್ಳಬಹುದು. ಪಡಿತರ ಹಂಚಿಕೆಯಲ್ಲಿ ಯಾವುದೇ ರೀತಿಯ ದೂರುಗಳಿದ್ದಲ್ಲಿ 1967 ಉಚಿತ ಸಹಾಯವಾಣಿ (ಟೋಲ್ ಫ್ರೀ) ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Join WhatsApp

Join Now

Join Telegram

Join Now