ಬೆಂಗಳೂರು: ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆ 3 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಮನೆಗಳಿಗೆ ನಿರಂತರ ಜ್ಯೋತಿ ಫೀಡರ್ ಮೂಲಕ ದಿನದ 24 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ.
ಇದನ್ನು ಹೊರತುಪಡಿಸಿ ನೀರಾವರಿ ಫೀಡರ್ ಗಳ ಮೂಲಕ ತೋಟದ ಮನೆಗಳಿಗೆ ಗೃಹೊಪಯೋಗಿ ಬಳಕೆಗೆ ಮಾತ್ರ ಹಾಗೂ ಅಲ್ಲಿ ವಾಸಿಸುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿ ಯನ್ನು ಗಮನದಲ್ಲಿರಿಸಿಕೊಂಡು ಸಿಂಗಲ್ ಫೇಸ್ ವಿದ್ಯುತ್ ಅನ್ನು ಸಂಜೆ 6 ರಿಂದ ಬೆಳಗ್ಗೆ 6ರವರೆಗೆ (ಮೂರು ಗಂಟೆಗಳ ಮೂರು ಫೇಸ್ ವಿದ್ಯುತ್ ಹೊರತಾಗಿ ) ಫೀಡರ್ ಗಳಿಗೆ ಓಪನ್ ಡೆಲ್ಟಾ ಮೂಲಕ ನೀಡಲಾಗುವುದು.
ಆದರೆ ರಾತ್ರಿ ವೇಳೆ ಕೆಲವರು ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್ ಗಳನ್ನು ನೀರಾವರಿ ಫೀಡರ್ ಗಳ ಮೂಲಕ ಬಳಸುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ.
ಆದ್ದರಿಂದ ಈ ಸಮಯದಲ್ಲಿ (ಸಂಜೆ 6 ರಿಂದ ಬೆಳಗ್ಗೆ 6ರವರೆಗೆ) ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್ ಗಳನ್ನು ಬಳಸದಂತೆ ರೈತರಿಗೆ ಬೆಸ್ಕಾಂ ಮನವಿ ಮಾಡಿದೆ .
ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ, ಈ ರಾಶಿಯವರು ಸೋಲಿಲ್ಲದ ಸರದಾರನಾಗಿ ಮುಟ್ಟಿದ್ದೆಲ್ಲ ಚಿನ್ನ. ಶನಿವಾರದ ರಾಶಿ ಭವಿಷ್ಯ…
ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು…
ಸುದ್ದಿಒನ್, ಜಗಳೂರು, ಮಾರ್ಚ್. 14 : ಶ್ರೀ ಶರಣ ಬಸವೇಶ್ವರ ದಾಸೋಹ ಮಠ, ದೊಣ್ಣೆಹಳ್ಳಿ, ಸರ್ಕಾರಿ ದಂತ ಕಾಲೇಜು…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಚಿತ್ರದುರ್ಗ. ಮಾ.14: ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಇದೇ ಮಾರ್ಚ್ 16 ರಂದು ಭಾನುವಾರ…