Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭವಾನಿ ರೇವಣ್ಣನಿಗೆ ಎಸ್ಐಟಿ ಹುಡುಕಾಟ : ತಗಲಾಕಿಕೊಂಡ ಕಾರು ಡ್ರೈವರ್..!

Facebook
Twitter
Telegram
WhatsApp

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರನ್ನು ಅರೆಸ್ಟ್ ಮಾಡಿರುವ ಎಸ್ಐಟಿ, ಈಗಾಗಲೇ ಎಲ್ಲಾ ಆಯಾಮದಿಂದಾನೂ ತನಿಖೆ ನಡೆಸುವುದಕ್ಕೆ ಸಿದ್ಧತೆ ನಡೆಸಿದೆ. ಇದರ ಬೆನ್ನಲ್ಲೇ ಭವಾನಿ ರೇವಣ್ಣನಿಗಾಗಿಯೂ ಹುಡುಕಾಟ ಶುರು ಮಾಡಿದೆ. ಕೋರ್ಟ್ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿ ವಜಾ ಮಾಡಿದೆ. ತನಿಖೆಗಾಗಿ ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನು ಹುಡುಕುತ್ತಿದ್ದಾರೆ. ಗಂಡನ ಮನೆಯಲ್ಲೂ ಇಲ್ಲ ತವರು ಮನೆಯನ್ನು ಖಾಲಿ ಮಾಡಿಕೊಂಡು ಹೊರಟಿರುವ ಭವಾನಿ ಅವರಿಗಾಗಿ ಹುಡುಕಾಟ ನಡೆಯುತ್ತಿದೆ.

ರೇವಣ್ಣ ಅವರು ಮಹಿಳೆಯನ್ನು ಅಪಹರಣ ಮಾಡಿದ್ದ ಪ್ರಕರಣದಲ್ಲಿ ಭವನಾಇ ರೇವಣ್ಣ ಅವರಿಗೂ ನೋಟೀಸ್ ನೀಡಲಾಗಿತ್ತು. ಈ ಸಂಬಂಧ ಭವಾನಿ ರೇವಣ್ಣ ಅವರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ಆ ಜಾಮೀನು ಅರ್ಜಿ ನಿರಾಕರಣೆಯಾಗಿದೆ. ಭವಾನಿ ಅವರು ಸಿಕ್ಕಿಲ್ಲ. ಅವರ ಕಾರು ಚಾಲಕ ಇದೀಗ ಎಸ್ಐಟಿ ಪೊಲೀಸರ ವಶಕ್ಕೆ ಸಿಕ್ಕಿದ್ದಾರೆ.

ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್, ತನ್ನ ಅತ್ತೆ ಮನೆಗೆ ಹೋಗಿದ್ದರು. ಮಾಹಿತಿ ತಿಳಿದಿದ್ದ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಅಜಿತ್ ಮೂಲಕ ಭವಾನಿ ರೇವಣ್ಣ ಅವರು ಎಲ್ಲಿದ್ದಾರೆ ಹೇಗೆ ಎಂಬ ಮಾಹಿತಿಯನ್ನು ಕಲೆ ಹಾಕಲಿದ್ದಾರೆ.

 

ಪ್ರಜ್ವಲ್ ರೇವಣ್ಣ ಅವರು ಅರೆಸ್ಟ್ ಆದ ಮೇಲೆ ಭವಾನಿ ರೇವಣ್ಣ ಅವರಿಗೂ ಬಂಧನದ ಭೀತಿ ಎದುರಾಗಿತ್ತು. ಹೀಗಾಗಿ ಮೊದಲೇ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಕೋರ್ಟ್ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿ ವಜಾಗೊಳಿಸಿದೆ. ಇನ್ನು ರೇವಣ್ಣ ಅವರು ದೇವಸ್ಥಾನಗಳಿಗೆ ಸುತ್ತುತ್ತಾ, ವಿಶೇಷ ಪೂಜೆ ಪುನಸ್ಕಾರ ಮಾಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

120 ವರ್ಷಗಳ ಇತಿಹಾಸ ಇರುವ ರೋಟರಿ ಸಂಸ್ಥೆಯ ಮೂಲ ಉದ್ದೇಶ ಸೇವೆ : ರೊ.ಪಿ.ಹೆಚ್.ಎಫ್. ಎಂ.ಕೆ.ರವೀಂದ್ರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜುಲೈ.03 : : ಕೇವಲ ನಾಲ್ಕು ಸದಸ್ಯರಿಂದ 1905 ರಲ್ಲಿ ಆರಂಭಗೊಂಡ ರೋಟರಿ ಸಂಸ್ಥೆ 119

ಶಾಸಕ ಎನ್.ವೈ.ಗೋಪಾಕೃಷ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ : ಶುಭಕೋರಿದ ಕಾಂಗ್ರೆಸ್ ಮುಖಂಡರು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜುಲೈ.03 : ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಕೃಷ್ಣರವರಿಗೆ ಬೃಹದಾಕಾರವಾದ ಹಾರ ಹಾಕಿ ಕಾಂಗ್ರೆಸ್‍ನಿಂದ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಲಾಯಿತು.

ತುರುವನೂರು ರಸ್ತೆಯಲ್ಲಿ ಡಿವೈಡರ್ ತೆರವು, ಚಳ್ಳಕೆರೆ ಗೇಟ್ ನಲ್ಲಿ ಹೊಸ ಸಂಚಾರಿ ವೃತ್ತ ನಿರ್ಮಾಣ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಜು. 03:   ನಗರದ ಸಂಚಾರ ದಟ್ಟಣೆ ಹಾಗೂ ಸಮಸ್ಯೆ ಕುರಿತು ಸಂಚಾರ ಠಾಣೆ ಪೊಲೀಸರು ಸಮೀಕ್ಷೆ ನಡೆಸಿ,  ಪರಿಹಾರಕ್ಕಾಗಿ ಸೂಕ್ತ ವರದಿ ಸಿದ್ಧಪಡಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿ, ಸಾಧಕ

error: Content is protected !!