Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಡಿಯೂರಪ್ಪ, ಶ್ರೀರಾಮುಲುಗೆ ಎಸ್ಐಟಿ ಸಂಕಷ್ಟ..!

---Advertisement---

ಬೆಂಗಳೂರು: ಬಿಜೆಪಿ ಸರ್ಕಾರವಿದ್ದಾಗ ಕೋವಿಡ್ ಕಾಲದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಎಸ್ಐಟಿ ತನಿಖೆಗೆ ಒಪ್ಪಿಸಿದೆ. ನಿವೃತ್ತ ನ್ಯಾಯಮೂರ್ತಿ ಮೂಲಕ ಈ ಹಗರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದು ಯಡಿಯೂರಪ್ಪ ಹಾಗೂ ಶ್ರೀರಾಮುಲು ಅವರಿಗೆ ಸಂಕಷ್ಟ ತಂದೊಡ್ಡಲಿದೆ. ಇಬ್ಬರು ಈಗ ಎಸ್ಐಟಿ ತನಿಖೆ ಎದುರಿಸಬೇಕಾಗಿದೆ.

ಈ ಸಂಬಂಧ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕೋವಿಡ್ ಸಮಯದಲ್ಲಿ ಸರ್ಕಾರದ ಅಧಿಕಾರಿಗಳು ಅಧಖಾರಸ್ಥ ರಾಜಕಾರಣಿಗಳ ಅಪವಿತ್ರ ಮೈತ್ರಿಯ ಫಲವಾಗಿ ನಡೆದ ಭ್ರಷ್ಟಾಚಾರ, ಹಗರಣಗಳ ಕುರಿತು ಸತ್ಯಾಂಶಗಳು ಲಭ್ಯವಾಗಿದ್ದವು. ಕೋವಿಡ್ ನಿಂದ ಜಗತ್ತಿನಲ್ಲಿ ಅಲ್ಲೋಲ ಕಲ್ಲೋಲವಾಗಿತ್ತು. ಕರ್ನಾಟಕ ಆ ಸಂದರ್ಭದಲ್ಲಿ ದುರಂತವನ್ನು ಅನುಭವಿಸಿತ್ತು. ಜನರನ್ನು ರಕ್ಷಣೆ ಮಾಡಬೇಕಿದ್ದಂತ ಸಂದರ್ಭದಲ್ಲಿ ಬೇಜವಾಬ್ದಾರಿತನ, ಜನರಿಗೆ ಮೋಸ, ಭ್ರಷ್ಟಾಚಾರವನ್ನೆಲ್ಲ ಬಚ್ಚಿಟ್ಟುಕೊಳ್ಳುವ ಪ್ರಯತ್ನ ಹಾಗೂ ಸರ್ಕಾರದ ಯಾವುದೇ ಮಾಹಿತಿ ಜನರಿಗೆ ಸಿಗದಂತೆ ಅಂದಿನ ಸರ್ಕಾರ ಮಾಡಿತ್ತು. ಸಾರ್ವಜನಿಕರ ಲೆಕ್ಕಪತ್ರ ಸಮಿತಿಯಂತಹ ಮಹತ್ವದ ಸಮಿತಿಗಳ ಕಾರ್ಯನಿರ್ವಹಣೆಗೆ ಅಡ್ಡಿಯುಂಟು ಮಾಡಿದ ಮಹತ್ವದ ಘಟನೆಗಳು ನಡೆದು ಹೋದವು. ಶಾಸನಬದ್ಧ ಸಮಿತಿಗಳ ಕಾರ್ಯನಿರ್ವಹಣೆಯನ್ನು ಅಸಾಧ್ಯವೆನ್ನುವ ರೀತಿಯಲ್ಲಿ ವಾತಾವರಣ ನಿರ್ಮಾಣ ಮಾಡಲಾಯಿತು ಮತ್ತು ಕಡಿವಾಣ ಹಾಕಲಾಗಿತ್ತು. ಸಮಿತಿಗಳ ಕಾರ್ಯನಿರ್ವಹಣೆಯನ್ನು ತಡೆದು ಭ್ರಷ್ಟಾಚಾರವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿತ್ತು.

ಕೋರೋನಾ ಸಂದರ್ಭದಲ್ಲಿ 330 ರಿಂದ 400 ರೂ ಗಳಿಗೆ ಲಭ್ಯವಿದ್ದ ಪಿಪಿಇ ಕಿಟ್ ಗಳನ್ನು 2117 ರೂ.ಗೆ ಖರೀದಿಸಲಾಯಿತು. 3 ಲಕ್ಷ ಕಿಟ್ ಖರಿದಿಸಲಾಯಿತು. ಆಮದು ಸಾಗಣೆ ವೆಚ್ಚ ನೀಡಿ ಅನುಮಾನಾಸ್ಪದ ವೆಚ್ಚ ಮಾಡಲಾಯಿತು. ಚೀನಾ ಕಂಪನಿಗಳಿಗೆ ಲಾಭ ಮಾಡಿಕೊಡಲಾಯಿತು. ಒಂದೇ ದಿನ ಎರಡು ದರಗಳಲ್ಲಿ 2117.53 ಹಾಗು 2104 ರೂ ಗೆ ಖರೀದಿ ಮಾಡಲಾಯಿತು. ಅದೇ ದಿನ 2049 ರೂ ಗಳಂತೆ ಇನ್ನೊಂದು ಕಂಪನಿಯಿಂದ ಖರೀದಿಸಲಾಯಿತು ಎಂಬ ಮಾಹಿತಿಯನ್ನು ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...