Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಧಾನಸಭೆಯಲ್ಲಿ ಶಿವಲಿಂಗೇಗೌಡ ಹಾಗೂ ಅಶ್ವತ್ಥ್ ನಾರಾಯಣ್ ನಡುವೆ ಮಾತಿನ ಚಕಮಕಿ : ಸವದಿ, ಸಿದ್ದರಾಮಯ್ಯರಿಂದ ಬೆಂಬಲ

---Advertisement---

 

 

ಬೆಂಗಳೂರು : ವಿಧಾನಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಮಾತಿಗೆ ಮಾತು ಬೆಳೆದಿದೆ. ಬಿಜೆಪಿ ನಾಯಕರ ವಿರುದ್ಧ ಅರಸೀಕೆರೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಲತಿರುಗಿ ಬಿದ್ದಿದ್ದಾರೆ. ರೀ..ರೀ ಡಾಕ್ಟ್ರೇ ನಿಮ್ಗೆ ತಾಕತ್ ಇದ್ರೆ ಮಲ್ಲೇಶ್ವರಂನಲ್ಲಿ ಕಾಂಗ್ರೆಸ್ ನಿಂದ ಗೆದ್ದು ತೋರಿಸ್ರಿ ನೋಡೋಣಾ. ನಾನು ನಿಮಗೆ ಸವಾಲು ಹಾಕ್ತೀನಿ. ಯಾಕೆ ಸುಮ್ಮನೆ ಮಾತನಾಡ್ತೀರಿ. ಬಡವೆಇಗೆ ನೀಡುವ ಅಕ್ಕಿಯನ್ನು ಕೇಂದ್ರ ಸರ್ಕಾರ ಯಾಕೆ ನೀಡುತ್ತಿಲ್ಲ. ಇದೇನಾ ಒಕ್ಕೂಟ ವ್ಯವಸ್ಥೆ..? ಕೊಟ್ಟು ತೆಗೆದುಕೊಳ್ಳೋದೆ ಒಕ್ಕೂಟ ವ್ಯವಸ್ಥೆ.

ಯಾಕೆ ಕೊರೊನಾ ಸಮಯದಲ್ಲಿ ನಾವೂ ನಿಮಗೆ ಸಹಕಾರ ನೀಡಲಿಲ್ವಾ. ಭಾರತ ಮಾತೆಗೆ ಜೈ ಅಂತ ಯಾಕೆ ಹೇಳ್ತೀವಿ ಹೇಳಿ. ಮೊದಲು ಅಕ್ಕಿ ಕೊಡುವುದಾಗಿ ಹೇಳಿ, ಆಮೇಲೆ ಯಾಕೆ ಕೊಡಲಿಲ್ಲ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ. ಲೋಕಸಭಾ ಚುನಾವಣೆಯ ತನಕ ಬಿಡಲ್ಲ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಶಿವಲಿಂಗೇಗೌಡರಿಗೆ ಬೆಂಬಲ ನೀಡಿ, ಅಶ್ವತ್ಥ್ ನಾರಾಯಣ್, ನೀವೂ ಸಚಿವರಾಗಿದ್ದವರು, ಡಿಸಿಎಂ ಆಗಿದ್ದವರು ಅವರು ಮಾತನಾಡುವಾಗ ಎದ್ದು ನಿಂತು ಡಿಸ್ಟರ್ಬ್ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಬಿಜೆಪಿ ನಾಯಕ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಇಷ್ಟು ದಿನ ಜೆಡಿಎಸ್ ನಲ್ಲಿ ಏನು ಹರಿದ್ರಿ. ಕಾಂಗ್ರೆಸ್ ಗೆ ಹೋಗಿ ಏನು ಹರಿದ್ರಿ ಅನ್ನೋದನ್ನ ಮೊದಲು ಹೇಳಿ ಎಂದಿದ್ದಾರೆ. ಇದೇ ವೇಳೆ ಮಧ್ಯಪ್ರವೇಶಿಸಿದ ಲಕ್ಷ್ಮಣ ಸವದಿ, ಪಾಪ ನೀವ್ಯಾಕೆ ಕೇಂದ್ರ ಸರ್ಕಾರದ ಬಗ್ಗೆ ಮಾತನಾಡ್ತೀರಿ. ಪಾಪ ಅವರೆಲ್ಲ ಕಾಂಪಿಟೇಷನ್ ಲೈನ್ ನಲ್ಲಿದ್ದಾರೆ. ಯಾರು ಹೆಚ್ಚು ಮಾತಾಡ್ತಾರೆ, ಕಡಿಮೆ ಮಾತಾಡ್ತಾರೆ ಅನ್ನೋದು ಅಲ್ಲಿ ಕೌಂಟ್ ಆಗುತ್ತೆ. ಅಲ್ಲಿ ಮಾರ್ಕ್ಸ್ ಬರುತ್ತೆ ಎಂದು ಗೇಲಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment