Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಹಾರದ ಛಾಪ್ರಾದಲ್ಲಿ ಮನೆ ಕುಸಿದು ಆರು ಮಂದಿ ಸಾವು..!

Facebook
Twitter
Telegram
WhatsApp

ಛಾಪ್ರಾ: ಬಿಹಾರದ ಛಾಪ್ರಾದಲ್ಲಿ ಸ್ಫೋಟದಿಂದಾಗಿ ಮನೆ ಕುಸಿದು ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿರುವ ಜನರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಸ್ಫೋಟದ ಹಿಂದಿನ ಕಾರಣವನ್ನು ನಾವು ತನಿಖೆ ಮಾಡುತ್ತಿದ್ದೇವೆ. ವಿಧಿವಿಜ್ಞಾನ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳವನ್ನು ಸಹ ಕರೆಯಲಾಗಿದೆ ಎಂದು ಸರನ್ ಎಸ್ಪಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.

ಖೈರಾ ಪೊಲೀಸ್ ಠಾಣಾ ವ್ಯಾಪ್ತಿಯ ಖೋಡೈಬಾಗ್ ಗ್ರಾಮದಲ್ಲಿ ರಿಯಾಜ್ ಮಿಯಾನ್ ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಹೆಚ್ಚಿನ ಪ್ರಮಾಣದಲ್ಲಿ ಪಟಾಕಿಗಳನ್ನು ಇಡಲಾಗಿತ್ತು. ರಿಯಾಜ್ ಮಿಯಾನ್ ಪಟಾಕಿ ವ್ಯಾಪಾರಿಯಾಗಿದ್ದು, ಮದುವೆ ಸಂದರ್ಭದಲ್ಲಿ ಅಕ್ರಮವಾಗಿ ಪಟಾಕಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಅವರ ಮನೆ ಸಂಪೂರ್ಣವಾಗಿ ನಾಶವಾಗಿದ್ದು, ಆರಕ್ಕೂ ಹೆಚ್ಚು ಅಕ್ಕಪಕ್ಕದ ಮನೆಗಳು ಕೂಡ ಬಿರುಕು ಮೂಡಿವೆ. ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಅವಶೇಷಗಳಡಿ ಸಿಲುಕಿದ್ದ ಮೂರು ಶವಗಳನ್ನು ಹೊರತೆಗೆದಿದ್ದಾರೆ. ಇದರಲ್ಲಿ ಮಹಿಳೆ ಮತ್ತು ಮಗು ಕೂಡ ಇದ್ದಾರೆ ಎನ್ನಲಾಗಿದ್ರು, ಯಾರು ಎಂಬುದನ್ನು ಇನ್ನೂ ಗುರುತಿಸಲಾಗಿಲ್ಲ ಎಂದು ವರದಿಯಾಗಿದೆ.

ಸ್ಥಳೀಯ ಪೊಲೀಸರ ಪ್ರಕಾರ, ಇನ್ನೂ ಐದು ಜನರು ಅವಶೇಷಗಳೊಳಗೆ ಸಿಲುಕಿಕೊಂಡಿದ್ದಾರೆ, ಇದು ಸಾವಿನ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು. ಗಾಯಾಳುಗಳನ್ನು ಛಾಪ್ರಾದ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!