ಕರ್ನಾಟಕ ಸರ್ಕಾರ ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ. ಇದೀಗ ಕರ್ನಾಟಕ ಕಾಂಗ್ರೆಸ್ ಸರ್ಕಾರ ಆರನೇ ಗ್ಯಾರಂಟಿ ಘೋಷಿಸಲು ಮುಂದಾಗಿದೆ. ಆರನೇ ಗ್ಯಾರಂಟಿ ಬಗ್ಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ.
ನಮ್ಮ ಸರ್ಕಾರಕ್ಕೆ 1000 ನೇ ದಿನ ಪೂರೈಸಿದ ದಿನ ಆರನೇ ಗ್ಯಾರಂಟಿ ಘೋಷಿಸುವುದಾಗಿ ಹೇಳಿದ್ದಾರೆ. ಇದು ಸಾರ್ವಜನಿಕರಿಗೆ ನಿವೇಶನಿಗಳಿಗೆ ಭೂಮಿ ಒದಗಿಸುವ ಗ್ಯಾರಂಟಿಯಾಗಿರಲಿದೆ. ಭೂಮಿ ಹಕ್ಕುಗಳಿಲ್ಲದ ಸಾಕಷ್ಟು ಜನರಿಗೆ ಖಾತೆ ಮತ್ತು ಹಕ್ಕುಪತ್ರ ನೀಡುವ ಭೂಮಿ ಗ್ಯಾರಂಟಿ ಯೋಜನೆ ಸದ್ಯದಲ್ಲೇ ಜಾರಿಗೆ ಬರಲಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇದೇ ವೇಳೆ ಅಧಿಕಾರ ಹಂಚಿಕೆಯ ಬಗ್ಗೆ ಮಾತನಾಡಿದ ಅವರು,ನಾವು ಬಹಿರಂಗವಾಗಿ ಅಧಿಕಾರ ಹಂಚಿಕೆಯ ವಿಚಾರವಾಗಿ ಚರ್ಚೆ ಮಾಡಿಲ್ಲ. ಪಕ್ಷ ತನ್ನದೇ ಆದ ಗುರಿ ಹೊಂದಿದ್ದು, , ಕರ್ನಾಟಕ ಹಾಗೂ ದೇಶದ ಹಿತದೃಷ್ಟಿ ಆಧಾರದ ಮೇಲೆ ನಮ್ಮ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಸೂಕ್ತ ಸಮಯದಲ್ಲಿ ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ


