ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕರ್ನಾಟಕದ ಮೊಟ್ಟ ಮೊದಲ ಜ್ಯೋತಿಷಿ ಎಂದು ಖ್ಯಾತಿ ಪಡೆದಿದ್ದ ಎಸ್ ಕೆ ಜೈನ್ ನಿಧನರಾಗಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಜೈನ್ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದರು. ಪತ್ನಿ ಮತ್ತು ಮಕ್ಕಳು ಅಗಲಿದ್ದಾರೆ.
ಇವರ ತಂದೆ ಬಿ ಜಿ ಶಶಿಕಾಂತ್ ಜೈನ್ ಹೆಸರಾಂತ ಜ್ಯೋತಿಷಿಗಳಾಗಿದ್ದವರು. ಜ್ಯೋತಿರ್ವಿದ್ಯೆಯಲ್ಲಿ ಇಡೀ ದೇಶದಲ್ಲಿ ಹೆಸರು ಮಾಡಿದ್ದ ದಿವಂಗತ ಬಿ ಜಿ ಶಶಿಕಾಂತ್ ಜೈನ್ ರ ಪುತ್ರ ಎಸ್ ಕೆ ಜೈನ್ ಮೊದಲಿಗೆ ಇಂಜಿನಿಯರ್ ಆಗಬೇಕೆಂದುಕೊಂಡವರು. ಆದರೆ ಅದನ್ನ ಕೈಬಿಟ್ಟು ತಂದೆಯ ಬಳಿಯಲ್ಲಿ ಜ್ಯೋತಿಷ್ಯವನ್ನೇ ರೂಢಿಸಿಕೊಂಡರು. ಉದಯ ವಾಹಿನಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮವನ್ನ ನೆಡೆಸಿಕೊಡುವುದರ ಮೂಲಕ ಕನ್ನಡ ವಿದ್ಯುನ್ಮಾನ ಮಾಧ್ಯಮದ ಮೊಟ್ಟಮೊದಲ ಜ್ಯೋತಿಷಿ ಎಂಬ ಹೆಸರಿನೊಂದಿಗೆ ಖ್ಯಾತಿಯನ್ನ ಹೊಂದಿದ್ದರು.
ಬಳಿಕ ಖಾಸಗಿ ವಾಹಿನಿಯಲ್ಲೂ ಜ್ಯೋತಿಷ್ಯ ಶಾಸ್ತ್ರವನ್ನು ಹೇಳುತ್ತಿದ್ದರು. ಹಬ್ಬ-ಹರಿದಿನ, ಗ್ರಹಣ ಸೇರಿದಂತೆ ವಿಶೇಷ ದಿನಗಳಂದು ವಾಹಿನಿಗಳಲ್ಲಿ ರಾಶಿ ಫಲಾಫಲ ಸೇರಿದಂತೆ ದಿನದ ವಿಶೇಷತೆಗಳ ಬಗ್ಗೆ ಜ್ಯೋತಿಷ್ಯ ಹೇಳುತ್ತಿದ್ದರು. ಆದರೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್