Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬರಗಾಲದಲ್ಲಿ ತಂಪೆರೆದ ಮಳೆ : ಖುಷಿ ಪಡುವುದಕ್ಕಿಂತ ಬೆಳೆ ಹೋಯ್ತಲ್ಲ ಅಂತ ನೋವು ಪಟ್ಟ ರೈತ

---Advertisement---

ಅಬ್ಬಬ್ಬ.. ದಿನೇ ದಿನೇ ಬೇಸಿಗೆಯ ಬಿಸಿ ಅದೆಷ್ಟು ಹೆಚ್ಚಾಗುತ್ತಿದೆ ಎಂದರೆ ತಂಪು ತಂಪು ಕೂಲ್ ಕೂಲ್ ಆಗುವುದಕ್ಕೆ ನಾನಾ ಪಾನೀಯಗಳ ಮೊರೆ ಹೋಗುತ್ತಿದ್ದಾರೆ ಜನ. ಆದರೂ ಏರುತ್ತಿರುವ ಉಷ್ಣಾಂಶವನ್ನು ತಡೆದುಕೊಳ್ಳುವುದಕ್ಕೆ ಆಗುತ್ತಿಲ್ಲ. ಬೇಗ ಮಳೆ ಬರಲ್ಲಪ್ಪ ಎಂದೇ ಜನ ಆಕಾಶ ನೋಡಿ ಬೇಡಿಕೊಂಡಿದ್ದಾರೆ.

 

ಯುಗಾದಿಯ ಬಳಿಕ ಹಲವೆಡೆ ಮಳೆಯಾಗಿದೆ. ಶಿವಮೊಗ್ಗ, ಧಾರವಾಡ, ಹುಬ್ಬಳ್ಳಿ ಕಡೆಗಳಲ್ಲೆಲ್ಲಾ ಅದ್ಭುತವಾಗಿಯೇ ವರುಣರಾಯ ತಂಪೆರೆದಿದ್ದಾನೆ. ಭೂಮಿ ತಂಪಾಯಿತಲ್ಲ ಎಂದು ಜನ ಖುಷಿ ಪಡುವಾಗಲೇ ಕಷ್ಟಪಟ್ಟು ಉಳಿಸಿಕೊಂಡಿದ್ದ ಬೆಳೆಯೂ ಹೋಯ್ತಲ್ಲ ಅಂತ ರೈತಾಪಿ ವರ್ಗ ಕಣ್ಣೀರು ಹಾಕುತ್ತಿದ್ದಾರೆ.

ಮೊದಲೇ ಈ ಬಾರಿ ಹಿಂಗಾರು ಹಾಗೂ ಮುಂಗಾರು ಎರಡು ಮಳೆಯೂ ಕೈಕೊಟ್ಟಿದೆ. ಹೀಗಾಗಿ ಜಿಲ್ಲೆಯಲ್ಲಿ ಬರ ತಾಂಡವವಾಡುತ್ತಿದೆ. ಬರದ ನಡುವೆ ಪರಿಹಾರಕ್ಕಾಗಿ ರೈತರು ಒದ್ದಾಡುತ್ತಿದ್ದಾರೆ. ಇದರ ನಡುವೆಯೂ ಹಾಗೋ ಹೀಗೋ ಕಷ್ಟಪಟ್ಟು ಕಾಪಾಡಿಕೊಂಡು ಬಂದಿದ್ದಂತ ಬಾಳೆ, ಅಡಿಕೆ ಬೆಳೆ ಇತ್ತಿಚೆಗಷ್ಟೇ ಬಂದ ಮಳೆಯಿಂದ ನೆಲ ಕಚ್ಚಿದೆ. ಕೆಲವೆಡೆ ವಿದ್ಯುತ್ ಕಂಬಗಳು ನೆಲಕಚ್ಚಿವೆ.

ಧಾರಾವಾಡ ಜಿಲ್ಲೆಯ ಕಲಘಟಗಿ ತಾಲೂಕು ಸೇರಿದಂತೆ ಹಲವು ಗ್ರಾಮಗಳಲ್ಲಿ ರಾತ್ರಿಯಿಡಿ ಸುರಿದ ಮಳೆಯಿಂದಾಗಿ ಮಾವು ಹಾಗೂ ಬಾಳೆ ಬೆಳೆಗೆ ಹಾನಿಯಾಗಿದೆ. ಇದರಿಂದ ರೈತಾಪಿ ವರ್ಗ ಮಳೆ ಬಂತು ಅಂತ ಖುಷಿ ಪಡಯವುದೋ ಅಥವಾ ಬಂದ ಮಳೆಯಿಂದ ಕಷ್ಟಪಟ್ಟು ಉಳಿಸಿಕೊಂಡಿದ್ದ ಬೆಳೆ ಮಣ್ಣು ಪಾಲಾಯಿತಲ್ಲ ಎಂದು ನೋವು ಪಡಬೇಕೋ ತಿಳಿಯದೆ ಕುಳಿತಿದ್ದಾನೆ. ಇನ್ನು ಕೆಲವು ಜಿಲ್ಲೆಯಲ್ಲಿ ಮಳೆಯೇ ಬಾರದೆ ಜನ ಬಿಸಿಲ ಧಗೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...