Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬರಗಾಲದಲ್ಲಿ ತಂಪೆರೆದ ಮಳೆ : ಖುಷಿ ಪಡುವುದಕ್ಕಿಂತ ಬೆಳೆ ಹೋಯ್ತಲ್ಲ ಅಂತ ನೋವು ಪಟ್ಟ ರೈತ

Facebook
Twitter
Telegram
WhatsApp

ಅಬ್ಬಬ್ಬ.. ದಿನೇ ದಿನೇ ಬೇಸಿಗೆಯ ಬಿಸಿ ಅದೆಷ್ಟು ಹೆಚ್ಚಾಗುತ್ತಿದೆ ಎಂದರೆ ತಂಪು ತಂಪು ಕೂಲ್ ಕೂಲ್ ಆಗುವುದಕ್ಕೆ ನಾನಾ ಪಾನೀಯಗಳ ಮೊರೆ ಹೋಗುತ್ತಿದ್ದಾರೆ ಜನ. ಆದರೂ ಏರುತ್ತಿರುವ ಉಷ್ಣಾಂಶವನ್ನು ತಡೆದುಕೊಳ್ಳುವುದಕ್ಕೆ ಆಗುತ್ತಿಲ್ಲ. ಬೇಗ ಮಳೆ ಬರಲ್ಲಪ್ಪ ಎಂದೇ ಜನ ಆಕಾಶ ನೋಡಿ ಬೇಡಿಕೊಂಡಿದ್ದಾರೆ.

 

ಯುಗಾದಿಯ ಬಳಿಕ ಹಲವೆಡೆ ಮಳೆಯಾಗಿದೆ. ಶಿವಮೊಗ್ಗ, ಧಾರವಾಡ, ಹುಬ್ಬಳ್ಳಿ ಕಡೆಗಳಲ್ಲೆಲ್ಲಾ ಅದ್ಭುತವಾಗಿಯೇ ವರುಣರಾಯ ತಂಪೆರೆದಿದ್ದಾನೆ. ಭೂಮಿ ತಂಪಾಯಿತಲ್ಲ ಎಂದು ಜನ ಖುಷಿ ಪಡುವಾಗಲೇ ಕಷ್ಟಪಟ್ಟು ಉಳಿಸಿಕೊಂಡಿದ್ದ ಬೆಳೆಯೂ ಹೋಯ್ತಲ್ಲ ಅಂತ ರೈತಾಪಿ ವರ್ಗ ಕಣ್ಣೀರು ಹಾಕುತ್ತಿದ್ದಾರೆ.

ಮೊದಲೇ ಈ ಬಾರಿ ಹಿಂಗಾರು ಹಾಗೂ ಮುಂಗಾರು ಎರಡು ಮಳೆಯೂ ಕೈಕೊಟ್ಟಿದೆ. ಹೀಗಾಗಿ ಜಿಲ್ಲೆಯಲ್ಲಿ ಬರ ತಾಂಡವವಾಡುತ್ತಿದೆ. ಬರದ ನಡುವೆ ಪರಿಹಾರಕ್ಕಾಗಿ ರೈತರು ಒದ್ದಾಡುತ್ತಿದ್ದಾರೆ. ಇದರ ನಡುವೆಯೂ ಹಾಗೋ ಹೀಗೋ ಕಷ್ಟಪಟ್ಟು ಕಾಪಾಡಿಕೊಂಡು ಬಂದಿದ್ದಂತ ಬಾಳೆ, ಅಡಿಕೆ ಬೆಳೆ ಇತ್ತಿಚೆಗಷ್ಟೇ ಬಂದ ಮಳೆಯಿಂದ ನೆಲ ಕಚ್ಚಿದೆ. ಕೆಲವೆಡೆ ವಿದ್ಯುತ್ ಕಂಬಗಳು ನೆಲಕಚ್ಚಿವೆ.

ಧಾರಾವಾಡ ಜಿಲ್ಲೆಯ ಕಲಘಟಗಿ ತಾಲೂಕು ಸೇರಿದಂತೆ ಹಲವು ಗ್ರಾಮಗಳಲ್ಲಿ ರಾತ್ರಿಯಿಡಿ ಸುರಿದ ಮಳೆಯಿಂದಾಗಿ ಮಾವು ಹಾಗೂ ಬಾಳೆ ಬೆಳೆಗೆ ಹಾನಿಯಾಗಿದೆ. ಇದರಿಂದ ರೈತಾಪಿ ವರ್ಗ ಮಳೆ ಬಂತು ಅಂತ ಖುಷಿ ಪಡಯವುದೋ ಅಥವಾ ಬಂದ ಮಳೆಯಿಂದ ಕಷ್ಟಪಟ್ಟು ಉಳಿಸಿಕೊಂಡಿದ್ದ ಬೆಳೆ ಮಣ್ಣು ಪಾಲಾಯಿತಲ್ಲ ಎಂದು ನೋವು ಪಡಬೇಕೋ ತಿಳಿಯದೆ ಕುಳಿತಿದ್ದಾನೆ. ಇನ್ನು ಕೆಲವು ಜಿಲ್ಲೆಯಲ್ಲಿ ಮಳೆಯೇ ಬಾರದೆ ಜನ ಬಿಸಿಲ ಧಗೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ : ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ಮತಯಾಚನೆ ನಡೆಸುತ್ತಿವೆ. ರಾಹುಲ್ ಗಾಂಧಿ ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಗೀತಾ ಶಿವ ರಾಜ್‍ಕುಮಾರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ

error: Content is protected !!