Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್‌ ಎಲ್‌ ವಿ ಪಿ.ಯು. ಕಾಲೇಜಿಗೆ ಉತ್ತಮ ಫಲಿತಾಂಶ

---Advertisement---

 

ಚಿತ್ರದುರ್ಗ, (ಏ.21) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ದೇವರಾಜ್‌ ಅರಸ್‌ ಶಿಕ್ಷಣ ಸಂಸ್ಥೆಯ ಅಂಗಸಂಸ್ಥೆಯಾದ ಎಸ್ ಎಲ್‌ ವಿ ಪಿ.ಯು. ಕಾಲೇಜು ಜಿಲ್ಲೆಯಲ್ಲಿ ಪದವಿಪೂರ್ವ ಶಿಕ್ಷಣಕ್ಕೆ ಹೆಸರುವಾಸಿಯಾದ ಕಾಲೇಜಾಗಿದ್ದು, 2023ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 96ರಷ್ಟು ಫಲಿತಾಂಶವನ್ನು ಪಡೆದುಕೊಂಡು ಅಭೂತಪೂರ್ವ ಸಾಧನೆಗೈದಿದೆ.

ಅತ್ಯುನ್ನತ ದರ್ಜೆಯಲ್ಲಿ 20 ವಿದ್ಯಾರ್ಥಿಗಳು ಹಾಗೂ ಪ್ರಥಮ ದರ್ಜೆಯಲ್ಲಿ 84 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಐಶ್ವರ್ಯ.ಕೆ., 582 ಅಂಕಗಳನ್ನು ಗಳಿಸಿಕೊಂಡು ಮೊದಲ ಸ್ಥಾನದಲ್ಲಿದ್ದಾರೆ.

ಭರತ್‌ ಸಾಗರ್‌ 560 ಅಂಕಗಳನ್ನು ಗಳಿಸಿ, ದ್ವಿತೀಯ ಸ್ಥಾನ, ಆದಿತ್ಯ ಡಿ. ಹಾಗೂ ನವ್ಯಾ ರೆಡ್ಡಿ ಇಬ್ಬರೂ ತಲಾ 545 ಅಂಕಗಳನ್ನು ಗಳಿಸಿ ತೃತೀಯ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಹೇಮಶ್ರೀ 568 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದರೆ, ಮೊಹಮ್ಮದ್‌ ಸುಹೇಲ್‌ 555 ಅಂಕಗಳು ಹಾಗೂ ಆಯೀಷಾ ಖಾನ್‌ 554 ಅಂಕಗಳನ್ನು ಗಳಿಸಿ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಗಳಿಸಿದ್ದಾರೆ.

ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಎಂ ಚಂದ್ರಪ್ಪ, ಆಡಳಿತಾಧಿಕಾರಿಗಳಾದ ಶ್ರೀಮತಿ ಚಂದ್ರಕಲಾ.ಹೆಚ್.‌, ಸಿ.ಇ.ಓ ಆದ ಎಂ.ಸಿ.ರಘುಚಂದನ್‌ ಹಾಗೂ ಪ್ರಾಚಾರ್ಯರಾದ ಬಿ.ಎ.ಕೊಟ್ರೇಶ್‌ ರವರು ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...