Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್ ಎಂ ಕೃಷ್ಣ ಅವರು ಕೂಡ ಇದೆ ರೀತಿ ಮಾಡಿದ್ದರು.. ಆದ್ರೆ ಅವರ ಸ್ಥಿತಿ ಏನಾಯ್ತು : ಕುಮಾರಸ್ವಾಮಿ ಪ್ರಶ್ನೆ

Facebook
Twitter
Telegram
WhatsApp

ಹಾಸನ: ರಾಜ್ಯದಲ್ಲಿ ಆಪರೇಷನ್ ಹಸ್ತದ ಸದ್ದು ಜೋರಾಗಿದೆ. ಲೋಕಸಭಾ ಚುನಾವಣೆಯನ್ನು ಟಾರ್ಗೆಟ್ ಇಟ್ಟುಕೊಂಡಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಲವರನ್ನು ಕರೆ ತರುವ ಪ್ಲ್ಯಾನ್ ನಲ್ಲಿದೆ. ಈ ಆಪರೇಷನ್ ಹಸ್ತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್ ಡಿ ಕುಮಾರಸ್ವಾಮಿ, ಈ ಹಿಂದೆ ಎಸ್ ಎಂ ಕೃಷ್ಣ ಅವರ ಕಾಲದಲ್ಲೂ ಹೀಗೆ ಆಗಿತ್ತು. ಆದ್ರೆ ಈಗ ಅವರ ಪರಿಸ್ಥಿತಿ ಎಲ್ಲಿಗೆ ಬಂತು ನೋಡಿದ್ದೀರ ಅಲ್ವಾ ಎಂದಿದ್ದಾರೆ.

1990ರಿಂದಲೂ ಎಸ್ ಎಂ ಕೃಷ್ಣ ಅವರು ನಮ್ಮಿಂದ ಐದು ಜನ, ಬಿಜೆಪಿಯಿಂದ ಎಂಟತ್ತು ಜನರನ್ನು ಕರೆದುಕೊಂಡು ಹೋಗಿದ್ದರು. ನಂತರ ಅವರ ಸ್ಥಿತಿ ಎಲ್ಲಿಗೆ ಬಂತು. ನಂತರ ಬಿಜೆಪಿಯವರು ಆಪರೇಷನ್ ಕಮಲ ಮಾಡಿ 40 ಸೀಟ್ ಗೆ ತೃಪ್ತಿ ಪಡಬೇಕಾಯ್ತು. 2013-14ರಲ್ಲಿ ಸಿದ್ದರಾಮಯ್ಯ ಆಪರೇಷನ್ ಆಟವಾಡಿ 2018ರಲ್ಲಿ 78 ಕ್ಕೆ ಬಂದು ನಿಂತಿದ್ದರು. ಇತ್ತಿಚೀಗೆ ನಿಷ್ಠೆ ಎನ್ನುವುದು ಯಾವುದೇ ಪಕ್ಷಕ್ಕೂ ಉಳಿದಿಲ್ಲ. ಕೇವಲ ತಕ್ಷಣ ಸಿಗುವ ಅಧಿಕಾರಕ್ಕೆ ಮರುಳಾಗುತ್ತಾರೆ.

ಇನ್ಮು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿ, ಗ್ಯಾರಂಟಿ ಯೋಜನೆಯಿಂದ ಅದೆಷ್ಟು ಜನರಿಗೆ ಉಪಯೋಗವಾಗಿದೆ ಎಂದು ತಿಳಿಯುತ್ತಿಲ್ಲ. ಸಿಎಂ ಅದಾನಿ, ಅಂಬಾನಿಯವರ ಹಣವನ್ನು ಜನರಿಗೆ ಹಂಚುತ್ತೇನೆ ಎಂದಿದ್ದಾರೆ, ಆದರೆ ಗೃಹ ಜ್ಯೋತಿ ಹೆಸರಿನಲ್ಲಿ ಈಗಲೇ ಅನೇಕರಿಗೆ ಪಟ್ಟು ಬಿದ್ದಿದೆ. ಆಗಸ್ಟ್ ನಲ್ಲೇ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ಯಾವುದೇ ಸಿದ್ಧತೆಗಳಿಲ್ಲದೆ ಅಘೊಷಿತವಾಗಿ ಲೋಡ್ ಶೆಡ್ಡಿಂಗ್ ಮಾಡುತ್ತಿದ್ದರೆ. 120 ತಾಲೂಕಿನಲ್ಲಿ ಬರ ಪರಿಸ್ಥಿತಿ ಇದೆ ಎಂದ ಸರ್ಕಾರ ಗ್ಯಾರಂಟಿ ಯೋಜನೆಯ ವಿಜೃಂಭಣೆ ಬಿಟ್ಟು ರೈತರ ಬಗ್ಗೆ ಯೋಚನೆ ಮಾಡಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!