‘ಮಗಳು ಜಾನಕಿ’ಯ ಚಂದು ಭಾರ್ಗಿ ಇನ್ನಿಲ್ಲ : ಎಂಎ, ಎಲ್ಎಲ್ಬಿ ಮಾಡಿ ನಟನೆಗೆ ಬಂದಿದ್ದೇಗೆ..?

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿಯೇ ಮಂಡ್ಯದ ರವಿ ಅಂತ ಖ್ಯಾತಿ ಪಡೆದವರು. ಅನಾರೋಗ್ಯದ ಕಾರಣದಿಂದ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.ಕನ್ನಡದ ಹೆಸರಾಂತ ನಿರ್ದೇಶಕ ಟಿ ಎನ್ ಸೀತರಾಮ್ ಅವರ ಇತ್ತಿಚಿನ ಧಾರವಾಹಿ ಮಗಳು ಜಾನಕಿ ಧಾರಾವಾಹಿಯಲ್ಲಿ ಖಡಕ್ ವಿಲನ್ ಆಗಿ ಎಲ್ಲರ ಗಮನ ಸೆಳೆದಿದ್ದರು. ಅದಾದ ಬಳಿಕ ಹಲವು ಧಾರಾವಾಹಿಯಲ್ಲಿ ಪಾತ್ರಗಳನ್ನು ಮಾಡಿದ್ದರು.

ನಟ ಮಂಡ್ಯ ರವಿ ಅನಾರೋಗ್ಯದಿಂದ ಬಳಲುತ್ತಿದ್ದರು. ಜಾಂಡೀಸ್ ಕಾಡುತ್ತಿದ್ದು, ಜೊತೆಗೆ ಕಿಡ್ನಿ ಸಮಸ್ಯೆಯೂ ಎದುರಾಗಿತ್ತು. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿಯ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮಂಡ್ಯಗೆ ಪಾರ್ಥಿವ ಶರೀರ ತೆಗೆದುಕೊಂಡು ಹೋಗಿದ್ದು, ಅಂತ್ಯ ಸಂಸ್ಕಾರವನ್ನು ಹುಟ್ಟೂರಿನಲ್ಲಿಯೇ ನಡೆಸಲಾಗುತ್ತದೆ.

ಮಂಡ್ಯ ರವಿಗೆ ಇನ್ನು 42 ವರ್ಷ. ಓದುತ್ತಿರುವಾಗಲೇ ನಟನೆ ಮೇಲೆ ಆಸಕ್ತಿ ಬೆಳೆಸಿಕೊಂಡಿದ್ದವರು. ಎಂಎ ಇಂಗ್ಲೀಷ್ ಹಾಗೂ ಎಲ್ಎಲ್ಬಿ ಮಾಡಿ ನಟನೆಯತ್ತ ಮುಖ ಮಾಡಿದರು. ನಾಟಕಗಳಲ್ಲಿಯೇ ಹೆಚ್ಚು ಪಾಲ್ಗೊಳ್ಳುತ್ತಿದ್ದ ನಟ ರವಿ, ಬಳಿಕ ಧಾರಾವಾಹಿಯ ಮೂಲಕ ಎಂಟ್ರಿಯಾಗಿದ್ದರು. ನಂತರ ಸಿನಿಮಾಗಳಲ್ಲೂ ಗುರುತಿಸಿಕೊಂಡಿದ್ದರು. ರವಿ ಅವರ ಅಕಾಲಿಕ ನಿಧನಕ್ಕೆ ಕಲಾವಿದರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

3 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago