Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇನ್ನರ್ ವ್ಹೀಲ್ ಕ್ಲಬ್ ಚಿತ್ರದುರ್ಗ ಅಧ್ಯಕ್ಷರಾಗಿ ಶ್ರೀಮತಿ ಮೋಕ್ಷರುದ್ರಸ್ವಾಮಿ ಕಾರ್ಯದರ್ಶಿಯಾಗಿ ರೇಷ್ಮಖಾನಂ ಅಧಿಕಾರ ಸ್ವೀಕಾರ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.09) : ಇನ್ನರ್‍ವೀಲ್ ಕ್ಲಬ್ ಚಿತ್ರದುರ್ಗ ಇದರ 2023-24 ನೇ ಸಾಲಿಗೆ ಅಧ್ಯಕ್ಷರಾಗಿ ಶ್ರೀಮತಿ ಮೋಕ್ಷ ರುದ್ರಸ್ವಾಮಿ ಹಾಗೂ ಕಾರ್ಯದರ್ಶಿಯಾಗಿ ರೇಷ್ಮಖಾನಂ ಇವರುಗಳ ಪದಗ್ರಹಣ ಸ್ವೀಕಾರ ಸಮಾರಂಭ ದವಳಗಿರಿ ಬಡಾವಣೆಯಲ್ಲಿರುವ ಗಾಯತ್ರಿ ಶಿವರಾಂ ಇನ್ನರ್‍ವೀಲ್ ಭವನದಲ್ಲಿ ಶುಕ್ರವಾರ ನಡೆಯಿತು.

ಅಧಿಕಾರ ಸ್ವೀಕರಿಸಿ ಮಾತನಾಡಿದ ಇನ್ನರ್‍ವೀಲ್ ಕ್ಲಬ್ ಚಿತ್ರದುರ್ಗ ಅಧ್ಯಕ್ಷೆ ಶ್ರೀಮತಿ ಮೋಕ್ಷ ರುದ್ರಸ್ವಾಮಿ ಒಂದು ವರ್ಷದ ನನ್ನ ಅಧಿಕಾರವಧಿಯಲ್ಲಿ ಬಡವರು, ನಿರ್ಗತಿಕರು, ಅನಾಥರು, ವೃದ್ದರು, ಅಂಗವಿಕಲರಿಗೆ ನೆರವಾಗುವ ರೀತಿಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಇದಕ್ಕೆ ಇನ್ನರ್‍ವೀಲ್ ಕ್ಲಬ್‍ನ ಎಲ್ಲರ ಸಹಕಾರ ಬೇಕು ಎಂದು ವಿನಂತಿಸಿದರು.

ಶಿಕ್ಷಣದಿಂದ ವಂಚಿತರಾದ ಅನಾಥ ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡಲಾಗುವುದು. ವಿಶೇಷವಾಗಿ ಮಹಿಳೆಯರು ಸ್ವಾವಲಂಭಿಯಾಗಿ ಬದುಕಬೇಕಾಗಿರುವುದರಿಂದ ಬಡ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಹಿಳೆಯರಲ್ಲಿ ಆತ್ಮಸ್ಥೈರ್ಯ ತುಂಬಿ ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಮಹಿಳೆಯರಲ್ಲಿ ಅರಿವು ಮೂಡಿಸೋಣ. ಒಂದು ವರ್ಷದ ಅವಧಿಯಲ್ಲಿ ನೆನಪಿನಲ್ಲಿ ಉಳಿಯುವಂತಹ ಯೋಜನೆಗಳನ್ನು ಹಾಕಿಕೊಳ್ಳುತ್ತೇನೆಂದು ಹೇಳಿದರು.

ಪಾಸ್ಟ್ ನ್ಯಾಷನಲ್ ಎಡಿಟರ್ ವೀಣ ಸ್ವಾಮಿ ಪದಗ್ರಹಣ ಸಮಾರಂಭ ನೆರವೇರಿಸಿದರು. ಪಾಸ್ಟ್ ಡಿಸ್ಟ್ರಿಕ್ಟ್ ಚೇರ್ಮನ್ ಜ್ಯೋತಿ ಲಕ್ಷ್ಮಣ್ ಬಿಲೆಟಿನ್ ಬಿಡುಗಡೆಗೊಳಿಸಿದರು. ಹಿಂದಿನ ಅಧ್ಯಕ್ಷೆ ಮಾಲಾ ನಾಗರಾಜ್, ಕಾರ್ಯದರ್ಶಿ ವಿಜಯ ಕಿರಣ್ ವೇದಿಕೆಯಲ್ಲಿದ್ದರು.

2023-24 ನೇ ಸಾಲಿನ ಉಪಾಧ್ಯಕ್ಷೆ ಜ್ಯೋತಿ ದೇವೇಂದ್ರಪ್ಪ, ಆಫೀಸ್ ಬೇರರ್ಸ್‍ಗಳಾಗಿ ಐ.ಪಿ.ಪಿ.ಮಾಲಾ ನಾಗರಾಜ್, ಖಜಾಂಚಿ ದೀಪ ದತ್ತ, ಐ.ಎಸ್.ಓ. ಶೈಲ ವಿಶ್ವನಾಥ್, ಎಡಿಟರ್ ನಂದಿನಿ ಟಿ.ಎಸ್. ಜಂಟಿ ಕಾರ್ಯದರ್ಶಿ ವೀಣ ಜಯರಾಂ, ನಿರ್ದೇಶಕರುಗಳಾಗಿ ಸುಜಾತ ಪ್ರಕಾಶ್, ನಾಗರತ್ನ ವಿಶ್ವನಾಥ್, ಶೈಲಜಾರೆಡ್ಡಿ, ರೂಪ ವಿಶ್ವನಾಥ್, ವಿಜಯ ಕಿರಣ್, ಶಾಲಿನಿ ಪ್ರದೀಪ್, ಅಮೃತ ಸಂತೋಷ್, ರುದ್ರಾಣಿ ಗಂಗಾಧರ್, ಶಾಂತರೆಡ್ಡಿ, ಪೂಜ ದೀಪಕ್, ನಮ್ರತ, ಸುಮ ರಾಜಶೇಖರ್, ರಮ್ಯ ರಾಜ್‍ಕುಮಾರ್, ಪುಷ್ಪ ದಯಾನಂದ್, ಗೌರಮ್ಮ ಇವರುಗಳು ಪದಗ್ರಹಣ ಸ್ವೀಕಾರ ಸಮಾರಂಭದಲ್ಲಿದ್ದರು.

ಇದೇ ಸಂದರ್ಭದಲ್ಲಿ ಬಡ ಮಹಿಳೆಗೆ ಹೊಲಿಗೆ ಯಂತ್ರ ವಿತರಿಸಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment