ಚಿತ್ರದುರ್ಗ | ರಾ.ವೆಂಕಟೇಶ ಶೆಟ್ಟಿಯವರ ಧರ್ಮಪತ್ನಿ ಶ್ರೀಮತಿ ಸುಕನ್ಯಾ ನಿಧನ

1 Min Read

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.02 : ನಗರದ ಜೆ.ಎಂ.ಐ.ಟಿ ಹಿಂಭಾಗದ ನಿವಾಸಿ ರಾ.ವೆಂಕಟೇಶ ಶೆಟ್ಟಿಯವರ ಧರ್ಮಪತ್ನಿ ಶ್ರೀಮತಿ  ಸುಕನ್ಯಾ (67) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾದರು.

ಮೃತರು ಪತಿ ರಾ. ವೆಂಕಟೇಶ ಶೆಟ್ಟಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಮಧ್ಯಾಹ್ನ 2.30 ಕ್ಕೆ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ : ಮೃತರ ನಿಧನಕ್ಕೆ ಆರ್ಯವೈಶ್ಯ ಸಮಾಜದ ಮುಖಂಡರು ರಾ. ವೆಂಕಟೇಶ ಶೆಟ್ಟಿ ಮತ್ತು ಅವರ ಕುಟುಂಬದ ಸದಸ್ಯರಿಗೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ತೀವ್ರ ಕಂಬನಿ ಮಿಡಿದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *