ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್ : ಲೋಕಸಭಾ ಚುನಾವಣಾ ಸಮೀಪಿಸುತ್ತಿದೆ. ಸಾಮಾನ್ಯ ವ್ಯಕ್ತಿಗಳಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಕುಖ್ಯಾತ ದಂತಚೋರ ಕಾಡುಗಳ್ಳ ವೀರಪ್ಪನ್ (ಕೂಸೆ ಮುನಿಸ್ವಾಮಿ ವೀರಪ್ಪನ್ ಗೌಂಡರ್) ಪುತ್ರಿ ಕೂಡ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
ವೀರಪ್ಪನ್ ಪುತ್ರಿ ವಿದ್ಯಾ ವೀರಪ್ಪನ್ ಅವರನ್ನು ಕೃಷ್ಣಗಿರಿ ಕ್ಷೇತ್ರದ ಅಭ್ಯರ್ಥಿ ಎಂದು ಎನ್ ಟಿಕೆ ಪಕ್ಷದ ಅಧ್ಯಕ್ಷ ಸೀಮಾನ್ ಘೋಷಿಸಿದ್ದಾರೆ. ವೀರಪ್ಪನ್ ಪುತ್ರಿ ವಿದ್ಯಾ ವೀರಪ್ಪನ್ ಕೃಷ್ಣಗಿರಿಯಲ್ಲಿ ಭಾರಿ ಬಹುಮತದಿಂದ ಗೆದ್ದು ಜನಸೇವೆ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವೀರಪ್ಪನ್ ಪತ್ನಿ ಮುತ್ತುಲಕ್ಷ್ಮಿ ಕಳೆದ ಸಂಸತ್ ಚುನಾವಣೆಯಲ್ಲಿ ಡಿಎಂಕೆಗೆ ಬೆಂಬಲ ನೀಡಿದ್ದರು.
ಧರ್ಮಪುರಿ ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ ಪರವಾಗಿ ಪ್ರಚಾರ ಮಾಡಿದ್ದರು.
ಆದರೆ, ನಟ್ಟಮೇಡು ಗ್ರಾಮದಲ್ಲಿ ಸ್ಥಳೀಯರ ವಿರೋಧದಿಂದ ಮುತ್ತುಲಕ್ಷ್ಮಿ ಪ್ರಚಾರ ನಿಲ್ಲಿಸಿದರು. ಒಂದು ಹಂತದಲ್ಲಿ ಮುತ್ತುಲಕ್ಷ್ಮಿ ರಾಜಕೀಯ ಪಕ್ಷ ಸ್ಥಾಪಿಸುವ ಪ್ರಯತ್ನ ಮಾಡಿದ್ದರು. ಆದರೆ ಅವು ವ್ಯರ್ಥವಾದವು.
ಮುತ್ತುಲಕ್ಷ್ಮಿ ರಾಜಕೀಯಕ್ಕೆ ಬರದಿದ್ದರೂ ಆಕೆಯ ಮಗಳು ವಿದ್ಯಾ ವೀರಪ್ಪನ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಯ ವಿಷಯವಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್