Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಜಿ ಸಚಿವ ಹೆಚ್.ಆಂಜನೇಯರ ಅವರಿಗೆ  ಸಚಿವ ಸ್ಥಾನ ನೀಡಿ : ಸಾಮಾಜಿಕ ಸಂಘರ್ಷ ಸಮಿತಿ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಮೇ.19) : ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿರುವ ಮಾಜಿ ಸಚಿವ ಹೆಚ್.ಆಂಜನೇಯರವರನ್ನು ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಎಂ.ಎಲ್.ಸಿ.ಯನ್ನಾಗಿ ನೇಮಕ ಮಾಡಿಕೊಂಡು ಸಚಿವ ಸ್ಥಾನ ನೀಡುವಂತೆ ಸಾಮಾಜಿಕ ಸಂಘರ್ಷ ಸಮಿತಿ ಹಾಗೂ ವಿವಿಧ ಸಮುದಾಯಗಳ ಮುಖಂಡರುಗಳು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಿದ್ದರಾಮಯ್ಯನವರನ್ನು ಒತ್ತಾಯಿಸಿದ್ದಾರೆ.

ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಮಾಜಿಕ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಸಿ.ಕೆ.ಮಹೇಶ್ ಮಾತನಾಡಿ ಐದು ವರ್ಷಗಳ ಕಾಲ ರಾಜ್ಯದಲ್ಲಿ ಆಡಳಿತ ನಡೆಸಿದ ಕೋಮುವಾದಿ ಬಿಜೆಪಿ ಯಿಂದ ಬೇಸತ್ತು ರಾಜ್ಯದ ಜನ ಈ ಬಾರಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬಹುಮತ ನೀಡಿದ್ದಾರೆ. ಆದರೆ ಹೊಳಲ್ಕೆರೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಹೆಚ್.ಆಂಜನೇಯ ಗೆಲ್ಲಬೇಕಿತ್ತು. ಪಕ್ಷದಲ್ಲಿನ ಕೆಲವು ಕುತಂತ್ರಿಗಳಿಂದ ಸೋತರು. ಹಾಗಾಗಿ ದಲಿತ ಸಮಾಜಕ್ಕೆ ಸಾಮಾಜಿಕ ನ್ಯಾಯ ನೀಡಬೇಕಾಗಿರುವುದರಿಂದ ಹೆಚ್.ಆಂಜನೇಯರವರನ್ನು ಎಂ.ಎಲ್.ಸಿ.ಯನ್ನಾಗಿ ನೇಮಿಸಿಕೊಂಡು ನಂತರ ಮಂತ್ರಿಯನ್ನಾಗಿ ಮಾಡಬೇಕೆಂದು ಕಾಂಗ್ರೆಸ್ ವರಿಷ್ಠರುಗಳಲ್ಲಿ ಆಗ್ರಹಿಸಿದರು.

ಲೇಖಕ ಹೆಚ್.ಆನಂದ್‍ಕುಮಾರ್ ಮಾತನಾಡುತ್ತ ಹೆಚ್.ಆಂಜನೇಯ ಹೊಳಲ್ಕೆರೆ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದಾರೆ. ಆದರೂ ದೊಡ್ಡ ಸಮುದಾಯ ದಲಿತರಿಗೆ ಫಲ ಸಿಗಬೇಕಾದರೆ ಅವರನ್ನು ಎಂ.ಎಲ್.ಸಿ.ಯನ್ನಾಗಿ ಮಾಡಿ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ವಿನಂತಿಸಿದರು.

ಬೈಲಮ್ಮ ಮಾತನಾಡಿ ಸಣ್ಣ ಸಣ್ಣ ಸಮುದಾಯಗಳಿಗೆ ಸ್ಪೂರ್ತಿಧಾಯಕರಾಗಿದ್ದ ಹೆಚ್.ಆಂಜನೇಯರವರ ಸೋಲು ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. ಯಾರೂ ನಿರೀಕ್ಷಿಸಿರಲಿಲ್ಲ. ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು. ಹಾಗಾಗಿ ಹೆಚ್.ಆಂಜನೇಯರವರಿಗೆ ಸಿದ್ದರಾಮಯ್ಯನವರ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ನಾಯಕರುಗಳನ್ನು ಕೋರಿದರು.
ಕೆ.ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!