ಜಾತಿ ಮಠಗಳಿಂದ ಸಮಾಜ ಕಲುಷಿತ : ತಮ್ಮ ಹೇಳಿಕೆ ಬಗ್ಗೆ ರಂಭಾಪುರಿ ಶ್ರೀಗಳಿಂದ ವಿಷಾದ..!

1 Min Read

ಚಿಕ್ಕಮಗಳೂರು: ಇತ್ತೀಚೆಗಷ್ಟೇ ರಂಭಾಪುರಿ ಶ್ರೀಗಳು ಜಾತಿ ಮಠಗಳಿಂದ ಸಮಾಜ ಕಲುಷಿತವಾಗ್ತಿದೆ ಎಂಬ ಹೇಳಿಕೆಯನ್ನ ನೀಡಿದ್ದರು. ಈ ಹೇಳಿಕೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು.ಅಷ್ಟೇ ಅಲ್ಲ ಮಠಾಧೀಪತಿಗಳೇ ಇದಕ್ಕೆ ವಿರೋಧ ವ್ಯಕ್ತ ಪಡಿಸಿದ್ದರು. ಕನಕ, ವಾಲ್ಮೀಕಿ, ಮಾದರ, ಭೋವಿ ಹೀಗೆ ಹತ್ತಾರು ಗುರುಪೀಠಗಳ ಸ್ವಾಮೀಜಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈಗ ತಮ್ಮ ಹೇಳಿಕೆ ಸಂಬಂಧ ತಮ್ಮ ಹೇಳಿಕೆ ಇಷ್ಟೆಲ್ಲ ಅವಾಂತರ ಸೃಷ್ಟಿ‌ ಮಾಡಿದ್ದಕ್ಕೆ ರಂಭಾಪುರಿ ಶ್ರೀಗಳು ವಿಷಾದ ವ್ಯಕ್ತಪಡಿಸಿದ್ದಾರೆ.

ಇದು ನೋವಿನ ಸಂಗತಿಯಾಗಿದೆ ಎಂದು ಬೇಸರ ಹೊರ ಹಾಕಿದ್ದು, ಸುದ್ದಿಗೋಷ್ಟಿ ನಡೆಸಿದ್ದಕ್ಕರ ವಿಷಾದ ವ್ಯಕ್ತಪಡಿಸುತ್ತೇನೆ. ಇದು ನೋವಿನ ಸಂಗತಿ. ಅವರವರ ಸಮುದಾಯದ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪವಿಲ್ಲ. ಭದ್ರಾವತಿಯ ವೀರಶೈವ ಲಿಂಗಾಯತ ಕಾರ್ಯಕ್ರಮದಲ್ಲಿ ನಾವೂ ಧರ್ಮ ಪರಂಪರೆ, ಸಂಸ್ಕೃತಿ ಬಗ್ಗೆ ಮಾತನಾಡಿದ್ದೇನೆ. ಅನ್ಯ ಬೇರೆ ಯಾವುದೇ ಜಾತಿ ಕುರಿತು ಮಾತನಾಡಿಲ್ಲ. ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಠಿ ಮಾಡಿ ಕೆಲವು ಪತ್ರಿಕೆಗಳಲ್ಲಿ ಬಂದಿರುವ ವರದಿಯನ್ನು ಆಧರಿಸಿ ಭದ್ರಾವತಿಯಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು ಹೇಳಿದ್ದಾರೆಂಬ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ ರಂಭಾಪುರಿ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ.

ಭದ್ರಾವತಿಯಲ್ಲಿ ಅಖಿಲ ಭಾರತ ವೀರಶೈವ ಲಮಗಾಯತ ಮಹಾಸಭಾ ಭದ್ರಾವತಿ ತಾಲೂಕು ಘಟಕದಿಂದ ಜರುಗಿದ ಸಮಾರಂಭದಲ್ಲಿ ಜಾತಿಯ ಮಠಗಳಿಂದ ಕಲುಷಿತ ವಾತಾವರಣ ಈ ಹೇಳಿಕರ ಹಿನ್ನೆಲೆಯಲ್ಲಿ ದಲಿತ ಹಿಂದುಳಿದ ಮಠಾಧೀಶರರು ಸುದ್ದಿಗೋಷ್ಟಿ ಮಾಡಿರುವುದು ನೋವಿನ ಸಂಗತಿ. ವೀರಶೈವ ಲಿಂಗಾಯತ ಸಮುದಾಯದ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಆದರ್ಶಗಳ ಬಗೆಗೆ ಮಾತನಾಡಿದ್ದೇವೆ ಹೊರತು ಅನ್ಯ ಬೇರೆ ಯಾವುದೇ ಜಾತಿ ಕುರಿತು ಯಾವುದೇ ಹೇಳಿಕೆ ಕೊಟ್ಟಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks