Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರ ಕೃಷಿ ಪಂಪ್‍ಸೆಟ್‍ಗೆ ಸೋಲಾರ್ ಅಳವಡಿಕೆ : ಕಂಪನಿಯವರಿಂದಲೆ ಸಿವಿಲ್ ಕಾಮಗಾರಿಗೆ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ರೈತರ ಕೃಷಿ ಪಂಪ್‍ಸೆಟ್‍ಗೆ ಸೋಲಾರ್ ಅಳವಡಿಕೆ ಕಾರ್ಯ ನಡೆಯುತ್ತಿದ್ದು, ಕಂಪನಿಯವರಿಂದಲೆ ಸಿವಿಲ್ ಕಾಮಗಾರಿ ಪೂರ್ಣಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದಿಂದ ಅಪರ ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಜಿಲ್ಲೆಯ ಕೃಷಿ ಪಂಪ್‍ಸೆಟ್‍ಗಳಿಗೆ ಸೋಲಾರ್ ಮೋಟಾರ್ ಹಾಗೂ ಪೆನಾಲ್ ಬೋರ್ಡ್ ಅಳವಡಿಕೆ ಕಾಮಗಾರಿಯನ್ನು ಟೆಂಡರ್ ಮೂಲಕ ಅನೇಕ ಕಂಪನಿಗಳಿಗೆ ನೀಡಲಾಗಿದೆ. ರೈತರ ವಂತಿಕೆ ಶೇ.20, ಸರ್ಕಾರದ್ದು, ಶೇ.80 ಪರ್ಸೆಂಟ್ ಹಣ ಬಳಸಬೇಕೆಂಬ ನಿಯಮವಿದೆ. ಶಕ್ತಿ, ಸಿ.ಆರ್.ಐ. ಆಸ್ಟ್ರೇಲಿಯನ್, ಮೆಗಾ, ಸ್ವಸ್ತಿಕ್ ಹಾಗೂ ಮತ್ತಿತರೆ ಕಂಪನಿಗಳು ಕಾಮಗಾರಿಯನ್ನು ನಿರ್ವಹಿಸುತ್ತಿದ್ದು, ಕೆಲ ಕಂಪನಿಯವರು ಸಿವಿಲ್ ಕಾಮಗಾರಿಯನ್ನು ರೈತರಿಂದಲೆ ಮಾಡಿಸಿಕೊಳ್ಳುತ್ತಿರುವುದು ರೈತರಿಗೆ ನಷ್ಟವುಂಟಾಗುತ್ತಿದೆ. ಒಬ್ಬ ರೈತ ಸುಮಾರು ಹದಿನೈದರಿಂದ ಇಪ್ಪತ್ತು ಸಾವಿರ ರೂ.ಗಳನ್ನು ಖರ್ಚು ಮಾಡಿಕೊಳ್ಳುವಂತಾಗಿದೆ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಬೆಸ್ಕಾಂ ಇಂಜಿನಿಯರ್‍ಗಳ ಹಾಗೂ ಕಂಪನಿಯವರ ಸಭೆ ನಡೆಸಿ ರೈತರಿಗೆ ಅನುಕೂಲವಾಗುವ ರೀತಿ ಕ್ರಮ ಕೈಗೊಂಡು ಇಲ್ಲಿಯವರೆಗೂ ರೈತರು ಕೈಯಿಂದ ಖರ್ಚು ಮಾಡಿರುವ ಹಣವನ್ನು ಹಿಂದಿರುಗಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ ಅಪರ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.

 

ಬಸ್ತಿಹಳ್ಳಿ ಜಿ.ಸುರೇಶ್‍ಬಾಬು, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಕೆ.ಎಂ.ಕಾಂತರಾಜು, ಮಾರುತಿ, ಜಿ.ಬಿ.ಪಾಪಣ್ಣ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...