Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೋಮಣ್ಣ ಸಿಎಂ ಆಗ್ತೀನಿ ಎಂಬ ಭ್ರಮೆಯಲ್ಲಿದ್ದರು : ರೇಣುಕಾಚಾರ್ಯ

Facebook
Twitter
Telegram
WhatsApp

ದಾವಣಗೆರೆ: ಬಿಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರನ್ನು ಯಾರಾದರೂ ಟೀಕಿಸಿದರೆ ಅದನ್ನು ರೇಣುಕಾಚಾರ್ಯ ತಡೆದುಕೊಳ್ಳುವುದಿಲ್ಲ. ಬೇಗನೇ ಪ್ರತಿಕ್ರಿಯೆ ನೀಡಿ ಬಿಡುತ್ತಾರೆ. ಅದರಲ್ಲೂ ಶಾಸಕ ಯತ್ನಾಳ್ ಹಾಗೂ ಸೋಮಣ್ಣ ಅವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಯಡಿಯೂರಪ್ಪ ಅವರ ವಿರುದ್ಧ ಹಾಗೂ ವಿಜಯೇಂದ್ರ ಅವರ ವಿರುದ್ಧ ಮಾತನಾಡಿದರೆ ಇನ್ಮುಂದೆ ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

 

ಬಿ ಎಸ್ ಯಡಿಯೂರಪ್ಪ ವಿರುದ್ಧ ಬೇರೆ ಪಕ್ಷದಿಂದ ಕರೆತಂದ ಯತ್ನಾಳ್ ಹಾಗೂ ಸೋಮಣ್ಣ ಇವರಿಬ್ಬರೇ ಮಾತನಾಡುತ್ತಿರುವುದು. ಬಿಎಸ್ವೈ ವಿರುದ್ಧ ಮಾತನಾಡುವುದಕ್ಕೆ ಯಾವ ನೈತಿಕತೆ ಇದೆ. ಯತ್ನಾಳ್ ಹಾಗೂ ಸೋಮಣ್ಣ ಎಲ್ಲಿಯವರೆಗೂ ಬಿಎಸ್ವೈ ಹಾಗೂ ವಿಜಯೇಂದ್ರ ಅವರ ವಿರುದ್ಧ ಮಾತನಾಡುತ್ತಾರೋ ಅಲ್ಲಿಯವರೆಗೂ ನಾವೂ ಮಾತನಾಡುತ್ತೇವೆ ಎಂದಿದ್ದಾರೆ.

 

ನಮಗೂ ತಾಳ್ಮೆ ಇದೆ. ಇದನ್ನೆಲ್ಲ ಸಹಿಸುವುದಕ್ಕೆ ಆಗುವುದಿಲ್ಲ. ಪ್ರತಿದಿನ ಇಬ್ಬರು ಮಾತನಾಡಿದರೆ ಯಡಿಯೂರಪ್ಪ ಅವರ ತೂಕ ಕಡಿಮೆ ಆಗುತ್ತದಾ..? ಯಡಿಯೂರಪ್ಪ ಅವರು ನಡೆದ ಹಾದಿಯ ಮಣ್ಣು ತೆಗೆದುಕೊಂಡು ಚಾಮರಾಜನಗರ ಹಾಗೂ ಮೈಸೂರು ಜನ ಹಣೆಗೆ ಇಟ್ಟುಕೊಳ್ಳುತ್ತಾರೆ. ಅಷ್ಟು ಹೋರಾಟದಿಂದ ಮೇಲೆ ಬಂದು ಜನರಿಗಾಗಿ ಜೀವ ಮುಡಿಪಿಟ್ಟ ನಾಯಕ ಅವರು. ಯತ್ನಾಳ್ ಹಾಗೂ ಸೋಮಣ್ಣ ಅವರ ಪಾಪದ ಕೊಡ ತುಂಬಿದೆ. ಅದಕ್ಕೆ ಆದಷ್ಟು ಬೇಗ ಅಂತ್ಯ ಕಾಣುತ್ತದೆ. ಅದಕ್ಕೆಂದೆ ಯಡಿಯೂರಪ್ಪ ಅವರನ್ನು ಜನರ ಮುಂದೆ ವಿಲನ್ ಮಾಡಲು ಹೊರಟಿದ್ದಾರೆ. ಟೀಕೆ ಮಾಡುವುದನ್ನು ಕೈಬಿಡಬೇಕು. ನಾವೆಲ್ಲರೂ ವಿಜಯೇಂದ್ರ ಅವರಿಗೆ ಸಾಥ್ ನೀಡುತ್ತೇವೆ. ಸಮಸ್ಯೆಗಳು ಇದ್ದರೆ ಹೈಕಮಾಂಡ್ ಬಳಿ ಹೇಳಿಕೊಳ್ಳಲಿ. ಇನ್ನು ಮುಂದೆಯಾದರೂ ತಿದ್ದಿಕೊಳ್ಳಲಿ ಇಲ್ಲವಾದರೆ ನಾವೂ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!