Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೆಲವರು ರಾತ್ರೋ ರಾತ್ರಿ ಬಂದು ಭೇಟಿಯಾಗುತ್ತಾರೆ : ಬಿಜೆಪಿ ನಾಯಕರ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಎಸ್ ಟಿ ಸೋಮಶೇಖರ್

Facebook
Twitter
Telegram
WhatsApp

ಬೆಂಗಳೂರು: ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಭೇಟಿ ನೀಡಿದ್ದರು. ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದಕ್ಕೂ ಮುನ್ನವೇ ಕಾಂಗ್ರೆಸ್ ನಾಯಕರ ಜೊತೆಗೆ ಎಸ್ ಟಿ ಸೋಮಶೇಖರ್ ಗುರುತಿಸಿಕೊಂಡಿದ್ದರು. ಹೀಗಾಗಿ ಮತ್ತೆ ಕಾಂಗ್ರೆಸ್ ಗಡ ಬರುತ್ತಾರಾ ಎಂಬ ಪ್ರಶ್ನೆಗಳು ಎದ್ದಿದ್ದವು. ಅದರ ನಡುವೆ ಇದೀಗ ಇಂದಿನ ಭೇಟಿ ಬಗ್ಗೆ ಸೋಮಶೇಖರ್ ಅವರೇ ಸ್ಪಷ್ಟನೆ ನೀಡಿದ್ದಾರೆ.

 

ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಎಸ್ ಟಿ ಸೋಮಶೇಖರ್ ಅವರು, ಬೆಂಗಳೂರು ನಿಮ್ಮ ನೇತೃತ್ವದಲ್ಲಿ ಅಭಿವೃದ್ಧಿ ಆಗುತ್ತಾ ಇದೆ. ನಮ್ಮ ಕ್ಷೇತ್ರದ ಕಡೆಗೂ ಸ್ವಲ್ಪ ಗಮನ ಕೊಡಿ ಎಂದು ಕೇಳಿದ್ದೇವೆ. ನಮ್ಮ ಕ್ಷೇತ್ರದ ಅಭಿವೃದ್ಧಿ ಆಗಬೇಕು ಎಂದಿದ್ದೇನೆ ಎಂದು ಮಾಹಿತಿ ನೀಡಿದರು.

 

ಇದೆ ವೇಳೆ ಬಿಜೆಪಿಯ ಬೇರೆ ನಾಯಕರು ಕೂಡ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗುತ್ತಾರಾ ಎಂಬ ಮಾತಿಗೆ ಉತ್ತರಿಸಿದ ಎಸ್ ಟಿ ಸೋಮಶೇಖರ್, ಬಿಜೆಪಿಯ ಕೆಲ ನಾಯಕರು ಕೂಡ ಡಿಕೆ ಶಿವಕುಮಾರ್ ಭೇಟಿ ಮಾಡಲು ಬರುತ್ತಾರೆ. ಕೆಲವರು ರಾತ್ರೋ ರಾತ್ರಿ ಬಂದು ಭೇಟಿಯಾಗುತ್ತಾರೆ. ಇನ್ನು ಕೆಲವರು ಮಾಧ್ಯಮದವರ ಕಣ್ಣು ತಪ್ಪಿಸಿ ಭೇಟಿಯಾಗುತ್ತಾರೆ. ಆದರೆ ನಮ್ಮದೇನು ಬ್ಲಾಕು, ವೈಟು ಇಲ್ಲ. ಹೀಗಾಗಿ ರಾಜಾರೋಷವಾಗಿ ಬರುತ್ತೀವಿ. ಕ್ಷೇತ್ರದ ವಿಚಾರಕ್ಕೆ ಬರುತ್ತೀವಿ. ಮಾತನಾಡಿ ಹೋಗುತ್ತೀವಿ‌ ಕೆಲವರು ನಾನು ಇದ್ದಾಗಲೇ ಸಾಕಷ್ಟು ಸಲ ಬಂದಿದ್ದಾರೆ. ನೀವೂ ಅವರನ್ನು ಗಮನಿಸುವುದಿಲ್ಲ.

 

ಬರೀ ಯಶವಂತಪುರ ಕ್ಷೇತ್ರದ ಶಾಸಕರನ್ನಷ್ಟೇ ಗುರುತಿಸುತ್ತೀರಿ ಎಂದು ಹೇಳಿದ ಎಸ್ ಟಿ ಸೋಮಶೇಖರ್, ಮಾಧ್ಯಮದವರಿಗೂ ಹಾಗೂ ನಾಡಿನ ಜನತೆಗೂ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ‌.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್ : ತುರ್ತು ಸುದ್ದಿಗೋಷ್ಠಿ ನಡೆಸಿ 15 ಪ್ರಶ್ನೆ ಕೇಳಿದ ಕುಮಾರಸ್ವಾಮಿ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ,

ತಂದೆ-ತಾಯಿಯ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ : ಕುಮಾರಸ್ವಾಮಿ ಆಕ್ರೋಶ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ನವರೇ ದೇವೇಗೌಡರಿಂದ ನೀವೂ ಬೆಳೆದಿದ್ದೀರಿ. ಅವರು ಏನಂತಾ ನನಗಿಂತ

ಸಂಸತ್ ಪ್ರವೇಶಿಸಿ, ಮೋದಿ ಪರ ಕೈ ಎತ್ತುತ್ತೇನೆ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಇಂದು ಲೋಕಸಭೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ಬಾರಿ ಹೆಚ್ಚು ಸದ್ದು ಮಾಡಿದ್ದು ಮಾತ್ರ ಶಿವಮೊಗ್ಗ ಕ್ಷೇತ್ರ. ಚುನಾವಣೆಯಲ್ಲಿ ಮಗನಿಗೆ ಟಿಕೆಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಎಷ್ಟೋ ವರ್ಷಗಳಿಂದ ಬಿಜೆಪಿಯಲ್ಲಿದ್ದ ಈಶ್ವರಪ್ಪ,

error: Content is protected !!