Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಲ್ಲೂ ಬದಲಾಗಿಲ್ಲ ಕೆಲವರ ಮನಸ್ಥಿತಿ : ದಲಿತ ಮಹಿಳೆಯ ದೇವಸ್ಥಾನ ಪ್ರವೇಶಿಸಿದ್ದಕ್ಕೆ ಥಳಿತ..!

Facebook
Twitter
Telegram
WhatsApp

 

ಬೆಂಗಳೂರು: ಶತಮಾನಗಳು ಉರುಳುತ್ತಿವೆ. ಜಾತಿಯನ್ನು ಅಳಿಸಿ, ಮನುಷ್ಯತ್ವವನ್ನು ಎತ್ತಿ ಹಿಡಿಯಬೇಕೆಂಬ ಕನಸು ಕನಸಾಗಿಯೇ ಉಳಿಯುತ್ತಿದೆ. ಜಾತಿ ಜಾತಿ ಎಂಬ ಘೋಷ ವಾಕ್ಯ ಜೋರಾಗಿದೆ. ಇದೀಗ ಬೆಂಗಳೂರಿನಂತ ಮಹಾನಗರದಲ್ಲೂ ಜಾತಿ ವಾದ ಜೋರಾಗಿದೆ.

ದಲಿತ ಮಹಿಳೆಯೊಬ್ಬರು ದೇವಸ್ಥನ ಪ್ರವೇಶಿಸಿದರೆಂದು ದೇಗುಲದ ಧರ್ಮದರ್ಶಿಯೇ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಅಮೃತಹಳ್ಳಿಯ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ನಡೆದಿದೆ. ಮಹಿಳೆ ಕಪ್ಪಗಿದ್ದ ಕಾರಣ ಹೀಗೆ ಥಳಿಸಿದ್ದಾರೆ ಎನ್ನಲಾಗಿದೆ.

ಮಹಿಳೆ ದೇವಾಲಯದೊಳಗೆ ಭಕ್ತಿಯಿಂದ ದೇವರಿಗೆ ಕೈ ಮುಗಿದು ನಿಂತಿದ್ದರು. ಈ ವೇಳೆ ಆ ಮಹಿಳೆ ಬಳಿ ಬಂದ ಅರ್ಚಕರು, ದೇವಸ್ಥಾನಕ್ಕೆ ಯಾಕೆ ಬಂದೆ ಎಂದು ಮಹಿಳೆಯ ಜುಟ್ಟನ್ನು ಹಿಡಿದು ಧರಧರನೆ ಎಳೆದುಕೊಂಡು ಹೋಗಿದ್ದಾನೆ. ಮಹಿಳೆ ಏನೋ ಹೇಳಲು ಬಂದರೂ ಕೇಳುವ ತಾಳ್ಮೆ ಅವನಲ್ಲಿ ಕಾಣಲೆ ಇಲ್ಲ.

ಬಳಿಕ ಮುನಿಕೃಷ್ಣ ದೇಗುಲದ ಆವರಣಕ್ಕೆ ಎಳೆದೊಯ್ದು ಮನಬಂದಂತೆ ಥಳಿಸಿದ್ದಾನೆ. ಕಪಾಳಕ್ಕೆ ಹೊಡೆದಿದ್ದಾನೆ, ರಾಡ್ ನಲ್ಲಿ ಪೆಟ್ಟು ಕೊಟ್ಟಿದ್ದಾನೆ. ಇಷ್ಟೆ ಅಲ್ಲದೆ ಈ ವಿಚಾರವನ್ನು ಯಾರಿಗೂ ಹೇಳಬಾರದೆಂದು ಧಮ್ಕಿ ಕೂಡ ಹಾಕಿದ್ದಾನೆ. ಡಿಸೆಂಬರ್ 21 ರಂದು ನಡೆದ ಘಟನೆ ಇದಾಗಿದೆ. ಮಹಿಳೆಯ ಪತಿ ಧೈರ್ಯ ತುಂಬಿದ ಮೇಲೆ ಅಮೃತಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

ಚಿತ್ರದುರ್ಗ | ಕಣಿವೆಯಿಂದ ಠಾಣೆಗೆ ಬಂದ ಮಾರಮ್ಮನ ರೋಚಕ ಕಥೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 :  ಚಿತ್ರದುರ್ಗ ನಗರ ಪೊಲೀಸ್ ಠಾಣೆ ಆವರಣದಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ಬಹು ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ, ತಾಯಿ. ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

error: Content is protected !!