31ನೇ ವಯಸ್ಸಿಗೇನೆ ಶಾಸಕ ಮಾನಪ್ಪ ವಜ್ಜಲ್ ಪುತ್ರ ನಿಧನ..!

0 Min Read

 

ರಾಯಚೂರು: ಇತ್ತಿಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಅನ್ನೋದು ಬಹಳಷ್ಟು ಕಾಮನ್ ಆಗಿ ಹೋಗಿದೆ. ಅದರಲ್ಲೂ ಯುವಕರೇ ಹಾರ್ಟ್ ಅಟ್ಯಾಕ್ ಗೆ ಬಲಿಯಾಗುತ್ತಿದ್ದಾರೆ. ಇದೀಗ ಲಿಂಗಸಗೂರು ಶಾಸಕ ಮಾನಪ್ಪ ವಜ್ಜಲ್ ಅವರ ಪುತ್ರ ಕೂಡ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಶಾಸಕರ ಎರಡನೇ ಪುತ್ರ ಶ್ರೀಮಂತ ವಜ್ಜಲ್ 31ನೇ ವರ್ಷಕ್ಕೆ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ತೀವ್ರ ಹೃದಯಾಘಾತದಿಂದ ಸಂಭವಿಸಿದ ತಕ್ಷಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಲಿಂಗಸಗೂರಿಗೆ ಮೃತದೇಹವನ್ನು ರವಾನೆ ಮಾಡಲಾಗುತ್ತಿದೆ. ನಾಳೆ ತವರಿನಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *