ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಅತ್ಯಾ*ಆರೋಪದಲ್ಲಿ ಜೈಲು ಸೇರಿ, ಈಗ ಜಾಮೀನಿನ ಮೇಲೆ ಹೊರ ಬಂದಿರುವ ಮನು, ಕನ್ನಡ ಚಿತ್ರರಂಗದ ದಿಗ್ಗಜರ ಬಳಿ ಕ್ಷಮೆ ಕೇಳ್ತಾ ಇದ್ದಾರೆ. ಜೈಲು ಸೇರಿದ್ದಾಗ ಆಡಿಯೋ ಒಂದು ವೈರಲ್ ಆಗಿತ್ತು. ಅದರಲ್ಲಿ ಸ್ಯಾಂಡಲ್ ವುಡ್ ನ ದಿಗ್ಗಜರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಶಿವಣ್ಣನ ಸಾವಿನ ಬಗ್ಗೆ ಮಾತನಾಡಿದ್ದರು. ದರ್ಶನ್ ಕ್ರೇಜ್ ಮುಗಿದಂತೆ ಎಂದಿದ್ದರು. ಈಗ ಜೈಲಿಂದ ಹೊರ ಬಂದಿದ್ದಾರೆ. ಈಗಾಗಲೇ ಧ್ರುವ ಸರ್ಜಾ ಅವರ ಬಳಿ ಕ್ಷಮೆ ಕೇಳಿದ್ದಾರೆ. ಶಿವಣ್ಣ ಅವರ ಮನೆ ಬಳಿಯೂ ಹೋಗಿ ನಿಂತಿದ್ದರು. ಇದೀಗ ದರ್ಶನ್ ಅವರ ಬಳಿಯೂ ಕ್ಷಮೆ ಕೇಳಿದ್ದಾರೆ.
ದರ್ಶನ್ ಅವರ ಬಳಿ ಮಡೆನೂರು ಮನು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ದರ್ಶನ್ ಅಭಿಮಾನಿಗಳು ನನಗೆ ಕಾಲ್ ಮತ್ತು ಮೆಸೇಜ್ ಗಳನ್ನ ಮಾಡಿದ್ದರು. ಅವರನ್ನು ಭೇಟಿಯಾದ್ರಾ..? ಕ್ಷಮೆ ಕೇಳಿದ್ರಾ ಅಂತ. ಒಂದು ಸಲ ಭೇಟಿಯಾಗಿ ಅಂತ ಸುಮಾರು ಜನ ಹೇಳಿದ್ರು. ಆದರೆ ದರ್ಶನ್ ಅವರು ಬ್ಯುಸಿಯಾಗಿದ್ದಾರೆ ಅಂತ ಗೊತ್ತಾಯ್ತು. ಡಿ ಬಾಸ್ ನಾನೊಬ್ಬ ಸಣ್ಣ ಕಲಾವಿದ. ಜೊತೆಗಿರುವವರನ್ನು ನಂಬಿ ಆ ಆಡಿಯೋದಿಂದ ಬಲಿಯಾಗಿದ್ದೇನೆ. ದಯವಿಟ್ಟು ನನ್ನ ಕ್ಷಮಿಸಿ ಕ್ಷಮಿಸಿ ಕ್ಷಮಿಸಿ ಎಂದು ವಿಡಿಯೋ ಮೂಲಕ ಬಹಿರಂಗವಾಗಿ ಕೇಳಿದ್ದಾರೆ.
ಇಡೀ ಡಿ ಬಾಸ್ ಅಭಿಮಾನಿಗಳು, ಕರುನಾಡ ಜನತೆಗೆ ನನಗೆ ಒಂದು ಜೀವದಾನ ಕೊಟ್ಟಿದ್ದೀರಿ. ನಮ್ಮ ಉಸಿರು ಇರುವವರೆಗೂ ಇದನ್ನು ಮರೆಯುವುದಿಲ್ಲ. ಈ ಪುಟ್ಟ ಕಲಾವಿದನನ್ನು ಕ್ಷಮಿಸಿ ಎಂದು ವಿಡಿಯೋ ಮಾಡಿದ್ದಾರೆ. ಈಗಾಗಲೇ ಫಿಲ್ಮ್ ಚೇಂಬರ್ ಬಳಿಯೂ ಹೋಗಿ ಕ್ಷಮೆ ಕೇಳಿ ಬಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್