Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೌಜನ್ಯ ಹತ್ಯೆ ಕೇಸ್ : ಹೋರಾಟದಿಂದ ಬಿಜೆಪಿ ಹಿಂದೆ ಸರಿಯಲ್ಲ ಎಂದ ಮಾಜಿ ಸಚಿವ

---Advertisement---

ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ನಡೆದು ಹತ್ತು ವರ್ಷಗಳೇ ನಡೆದಿವೆ. ಆದ್ರೆ ಇನ್ನು ಕೂಡ ನ್ಯಾಯ ಮಾತ್ರ ಸಿಕ್ಕಿಲ್ಲ. ಇತ್ತಿಚೆಗೆ ನ್ಯಾಯಕ್ಕಾಗಿ ಹೋರಾಟ ತೀವ್ರಗೊಂಡಿದೆ. ಇದೀಗ ಬಿಜೆಪಿ ನಾಯಕರು ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಸುನೀಲ್ ಕುಮಾರ್ ಮಾತನಾಡಿದ್ದಾರೆ. ನಾವೂ ನ್ಯಾಯಕ್ಕಾಗಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

2012ರ ಘಟನೆ ಇಂದು ತೀವ್ರತೆ ಪಡೆದುಕೊಳ್ತಿದೆ. ಸೌಜನ್ಯ ಹತ್ಯೆ, ಅತ್ಯಾಚಾರ ನಾಗರಿಕ ಸಮಾಜ ಒಪ್ಪಲ್ಲ. ಹೋರಾಟದಿಂದ ಬಿಜೆಪಿ ಎಂದಿಗೂ ಹಿಂದೆ ಸರಿಯಲ್ಲ. ಸೌಜನ್ಯ ಪ್ರಕರಣದ ಎಲ್ಲಾ ಹೋರಾಟಕ್ಕೂ ಬಿಜೆಪಿ ಬೆಂಬಲ ನೀಡುತ್ತದೆ.

ಕೆಲವರು ಹೋರಾಟದ ದಿಕ್ಕು ತಪ್ಪಿಸುತ್ತಿದ್ದಾರೆ. ಮಾಜಿ ಶಾಸಕ ವಸಂತ ಬಂಗೇರಾ ಏನು ಹೇಳಿದ್ರು..? ಪ್ರಕರಣದ ಹಿಂದೆ ಯಾರಿದ್ದಾರೆ ಎಂಬ ಸತ್ಯ ಗೊತ್ತಿದೆ ಎಂದಿದ್ದಾರೆ. ಸತ್ಯ ಹೇಳಿದರೆ ಜೀವಕ್ಕೆ ಆತಂಕ ಎಂದಿದ್ದಾರೆ. ವಸಂತ ಬಂಗೇರಾ ಸತ್ಯ ಹೇಳಿದರೆ ಬೆಂಬಲಿಸುತ್ತೇವೆ. ಸತ್ಯ ಗೊತ್ತಿದ್ದರೂ ಮುಚ್ಚಿಡುವುದು ಅಪರಾಧವೇ ಸರಿ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment