Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಭಾರತೀಯ ಬೌಲರ್ ಗಳ ಅಬ್ಬರಕ್ಕೆ ತತ್ತರಿಸಿದ ದಕ್ಷಿಣ ಆಫ್ರಿಕಾ, 116 ರನ್ ಗಳಿಗೆ ಆಲೌಟ್

---Advertisement---

 

ಸುದ್ದಿಒನ್ : ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಟೀಂ ಇಂಡಿಯಾ ಯುವ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದಾರೆ. ಟಿ20 ಸರಣಿಯನ್ನು 1-1 ರಿಂದ ಸಮಬಲ ಮಾಡಿಕೊಂಡಿರುವ ಟೀಂ ಇಂಡಿಯಾ ಏಕದಿನ ಸರಣಿಯಲ್ಲೂ ಶುಭಾರಂಭ ಮಾಡಿದೆ. ಭಾರತದ ಯುವ ವೇಗಿಗಳ ಅಬ್ಬರದ ಬೌಲಿಂಗ್ ಗೆ ದಕ್ಷಿಣ ಆಫ್ರಿಕಾ ಅಲ್ಪ ಮೊತ್ತಕ್ಕೆ ಸೀಮಿತವಾಯಿತು.

ಅರ್ಷದೀಪ್ ಸಿಂಗ್ 5 ವಿಕೆಟ್ ಮತ್ತು ಅವೇಶ್ ಖಾನ್  4 ವಿಕೆಟ್ ಕಬಳಿಸಿ ತಮ್ಮ ಶಕ್ತಿ ಪ್ರದರ್ಶನದೊಂದಿಗೆ ಎದುರಾಳಿ ತಂಡವನ್ನು 27.3 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್ ಮಾಡಿದ್ದಾರೆ.  ದಕ್ಷಿಣ ಆಫ್ರಿಕಾ 78 ರನ್‌ಗಳಿಗೆ 8 ವಿಕೆಟ್ ಕಳೆದುಕೊಂಡಿತು. ಕೊನೆಯಲ್ಲಿ ಆಂಡಿಲೆ ಪೆಹ್ಲುವಾಲಿಯೊ (33 ರನ್,  49 ಎಸೆತ) ಸ್ವಲ್ಪ ಹೊತ್ತು ತಾಳ್ಮೆಯ ಆಟವಾಡಿ ತಂಡದ ಮೊತ್ತವನ್ನು ನೂರು ರನ್‌ಗಳ ಗಡಿ ದಾಟಿಸಿದರು.

ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಏಡೆನ್ ಮಾರ್ಕ್‌ರಾಮ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಪಿಚ್‌ ಬ್ಯಾಟಿಂಗ್‌ಗೆ ಅನುಕೂಲವಾಗಲಿದೆ ಎಂಬ ನಿರೀಕ್ಷೆಯೊಂದಿಗೆ ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ ಈ ನಿರ್ಧಾರ ಎಷ್ಟು ತಪ್ಪಾಗಿದೆ ಎಂಬುದು ಪಂದ್ಯ ಆರಂಭವಾದ ಸ್ವಲ್ಪ ಹೊತ್ತಿಗೆ ಅರಿವಾಯಿತು.

ಮುಖೇಶ್ ಭಾರತದ ಬೌಲಿಂಗ್ ದಾಳಿ ಆರಂಭಿಸಿದರು. ಮೊದಲ ಓವರ್‌ನಲ್ಲಿ ಕೇವಲ ಒಂದು ರನ್ ಗಳಿಸಲಾಯಿತು ಮತ್ತು ಅದು ಕೂಡ ವೈಡ್ ಆಗಿತ್ತು. ಎರಡನೇ ಓವರ್‌ನಲ್ಲಿ ಅರ್ಷದೀಪ್ ಸಿಂಗ್ ಎಸೆದ ಈ ಓವರ್ ನ ನಾಲ್ಕನೇ ಎಸೆತದಲ್ಲಿ ರೀಜಾ ಹೆಂಡ್ರಿಕ್ಸ್ ಕ್ಲೀನ್ ಬೌಲ್ಡ್ ಆದರು. ಆ ನಂತರ ಬಂದ ವ್ಯಾನ್ ಡೆರ್ ಡ್ಯುಸೆನ್ ಕೂಡ ವಿಕೆಟ್‌ ಪತನವಾಯಿತು. ಇದರಿಂದಾಗಿ ದಕ್ಷಿಣ ಆಫ್ರಿಕಾ ಸತತ ಎಸೆತಗಳಲ್ಲಿ 2 ವಿಕೆಟ್ ಕಳೆದುಕೊಂಡಿತು.

ಈ ಹಂತದಲ್ಲಿ ಟೋನಿ ಡಿ.ಜಾರ್ಜ್ (28) ಮತ್ತು ಏಡೆನ್ ಮಾರ್ಕ್ರಾಮ್ (12) ವಿಕೆಟ್ ಪತನವಾಗದಂತೆ ಸ್ವಲ್ಪ ಹೊತ್ತು ಆಡಿದರು. ಅರ್ಷದೀಪ್ 8ನೇ ಓವರ್ ನಲ್ಲಿ ಜಾರ್ಜ್ ಅವರನ್ನು ಔಟ್ ಮಾಡಿದರು. ಅಲ್ಲಿಂದ ದಕ್ಷಿಣ ಆಫ್ರಿಕಾ ತಂಡದ ಕುಸಿತ ಮುಂದುವರೆಯಿತು. ಬಂದವರು ಬಂದಂತೆ ಪೆವಿಲಿಯನ್ ಸೇರಿದರು. ಹೆನ್ರಿಚ್ ಕ್ಲಾಸೆನ್ (6) ಮತ್ತು ಡೇವಿಡ್ ಮಿಲ್ಲರ್ (2) ಗಳಿಸಿ ಔಟಾದರು.

ಇದರಿಂದಾಗಿ ದಕ್ಷಿಣ ಆಫ್ರಿಕಾ 58 ರನ್ ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ದಕ್ಷಿಣ ಆಫ್ರಿಕಾ ಕನಿಷ್ಠ ನೂರು ರನ್ ಗಳಿಸುವ ಸ್ಥಿತಿಯಲ್ಲಿ ಇರಲಿಲ್ಲ. ಆದರೆ ಫೆಲುಕ್ವಾಯೊ (33) ತಂಡದ ಸ್ಕೋರ್ ಅನ್ನು ಮೂರು ಅಂಕಿಗಳನ್ನು ದಾಟಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 116 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಬೌಲರ್‌ಗಳಲ್ಲಿ ಅರ್ಷದೀಪ್ ಸಿಂಗ್ 5 ವಿಕೆಟ್, ಅವೇಶ್ ಖಾನ್ 4 ವಿಕೆಟ್, ಕುಲದೀಪ್ ಯಾದವ್ ಒಂದು ವಿಕೆಟ್ ಪಡೆದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...