Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನೀರು ಮುಕ್ತ ನಗರವಾದ ದಕ್ಷಿಣ ಆಫ್ರಿಕಾದ “ಕೇಪ್‍ಟೌನ್” : ಭಾರತಕ್ಕೂ ಎಚ್ಚರಿಕೆ : ನಮಗೂ ಕಾದಿದೆಯಾ ನೀರಿನ ಅಭಾವ..?

---Advertisement---

ವಿಶೇಷ ಲೇಖನ : ಜೆ. ಪರುಶುರಾಮ,                      ನಿವೃತ್ತ ಹಿರಿಯ ಭೂವಿಜ್ಞಾನಿ, ಚಿತ್ರದುರ್ಗ.                  ಮೊ : 944833882

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.16 :  ವಿಧಿ ಮತ್ತೆ ಕೊಪಿಸಿಗೊಂಡಿದೆ. ಕೊರೊನಾದಿಂದ ದೇಶ ಎರಡು ವರ್ಷ ತತ್ತರಿಸಿ ಹೋಗಿತ್ತು. ಮುಂದಿನ ದಿನಗಳಲ್ಲಿ ಇಡೀ ಜಗತ್ತು ನೀರಿಗಾಗಿ ಪರದಾಡುವ ದಿನಗಳೇನೂ ದೂರವಿಲ್ಲ. ಈಗಾಗಲೇ ನಾವು ನೀರಿನ ಅಭಾವ ಮತ್ತು ಅಂತರ್ಜಲದ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ನಾವು ಇನ್ನಾದರು ಎಚ್ಚರ ವಹಿಸಬೇಕು. ಇಲ್ಲವಾದರೆ ಕೊನೆಗೆ ಈ ಜಗತ್ತಿನ ದುಃಖದ ಪಯಣ ಬಹು ಬೇಗ ಬರುವುದರಲ್ಲಿ ಅನುಮಾನವೇ ಇಲ್ಲ ಎಂದು ಹಿರಿಯ ಭೂವಿಜ್ಞಾನಿ ಜೆ. ಪರುಶುರಾಮ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಬರಸಿಡಿಲಿನಿಂದ ತತ್ತರಿಸಿದ ದಕ್ಷಿಣ ಆಫ್ರಿಕಾದ ರಾಜಧಾನಿ ಕೇಪ್‍ಟೌನ್ ವಿಶ್ವದ ಮೊದಲ ನೀರು ಮುಕ್ತ ನಗರ ಎಂದು ಏಪ್ರ್ರಿಲ್ 14, 2023 ರಲ್ಲಿ ಅಲ್ಲಿನ ಸರ್ಕಾರ ಘೋಷಿಸಿದೆ.

ಇನ್ನಾದರೂ ಎಚ್ಚೆತ್ತುಕೊಂಡು ನಾವು ನೀರನ್ನು ಮಿತವಾಗಿ ಬಳಸಿ. ನೀರನ್ನು ವ್ಯರ್ಥ ಮಾಡುವುದನ್ನು ನಿಲ್ಲಿಸಿ, ಪ್ರಪಂಚದ ನೀರಿನಲ್ಲಿ ಕೇವಲ 2.7% ಮಾತ್ರ ಕುಡಿಯಲು ಯೋಗ್ಯವಾಗಿದೆ.  ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ ಕಡಿಮೆಯಾಗಿದೆ. ಜವಾಬ್ದಾರಿ ನಾಗರಿಕರಾಗಿ ನಾವು ನೀರನ್ನು ವ್ಯರ್ಥಮಾಡುವುದನ್ನು ನಿಲ್ಲಿಸಿ, ನೀರನ್ನು ಮಿತವಾಗಿ ಬಳಸಬೇಕು. ನಮ್ಮ ದೇಶದ ಹಲವಾರು ಪ್ರದೇಶಗಳು ಇಂತಹ ಪರಿಸ್ಥಿತಿಯನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾಗುವ ಸಂಭವ ಹೆಚ್ಚು. ಇದು ವೈಜ್ಞಾನಿಕವಾಗಿ ಸತ್ಯವಾಗಿದೆ.

ಚಿತ್ರದುರ್ಗ ಜಿಲ್ಲೆಯು ಈಗಾಗಲೇ ಬರಪೀಡಿತ ಪ್ರದೇಶ ಎಂದು ಗುರುತಿಸಿ ಕೊಂಡಿದೆ. ನೀರಿನ ಮೂಲ ಕಡಿಮೆ ಇರುವುದರಿಂದ ಅಂತರ್ಜಲ ಬಳಕೆ ಹೆಚ್ಚಾಗಿದೆ. ಆಂತರ್ಜಲದ ಮಟ್ಟ ಬಹಳ ಕೆಳಗೆ ಇಳಿಯುತ್ತಿದೆ. ಮುಂದಿನ ದಿನಗಳಲ್ಲಿ ಭದ್ರಾ ಮೇಲ್ಡಂಡೆ ಬಂದರೆ ಸುಮಾರು ಕೆರೆಗಳಿಗೆ ನೀರು ತುಂಬಿಸಿ, ಅಂತರ್ಜಲದ ವೃದ್ಧಿ ಮಾಡಬಹುದು.

ಅಲ್ಲಿಯವರೆಗೆ ಅಂತರ್ಜಲದ ಬಳಕೆಗಳನ್ನು ಮಿತವಾಗಿ ಉಪಯೋಗಿಸಬೇಕು ಹಾಗೂ ಮುಂದೆ ಬರುವ ಕುಡಿಯುವ ನೀರಿನ ಅಭಾವವನ್ನು ತಪ್ಪಿಸಲು ನಾವೆಲ್ಲಾ ಒಂದಾಗಿ ಅಂತರ್ಜಲದ ಉಳಿಸಲು ಪ್ರಾಮಾಣಿಕವಾಗಿ ಪ್ರಯತ್ನಸಬೇಕಾಗುತ್ತದೆ. ಇಲ್ಲವಾದರೆ ನಮ್ಮ ದೇಶವೂ ಕೇಪ್ ಟೌನ್ ಆಗುವುದು ದೂರವಿಲ್ಲ ಎಂದು ಹಿರಿಯ ಭೂವಿಜ್ಞಾನಿ ಜೆ. ಪರುಶುರಾಮ ಅವರು ಎಚ್ಚರಿಕೆ ಸಂದೇಶ ನೀಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...