Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

Facebook
Twitter
Telegram
WhatsApp

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಈಶ್ವರಪ್ಪ ಅವರು ಬಂಡಾಯವೆದ್ದು, ಬಿಜೆಪಿ ವಿರುದ್ಧವೇ ಸ್ಪರ್ಧೆ ನಡೆಸಿದ್ದರು. ಇದೀಗ ರಘುಪತಿ ಭಟ್ ಸಮಯ.

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗಿವೆ. ಬಿಜೆಪಿಯಲ್ಲಿ ನೈರುತ್ಯ ಪದವಿಧರ ಕ್ಷೇತ್ರದಿಂದ ಸ್ಪರ್ಧಿಸುವ ಹೆಬ್ಬಯಕೆಯನ್ನು ಮಾಜಿ ಶಾಸಕ ರಘುಪತಿ ಭಟ್ ಇಟ್ಟುಕೊಂಡಿದ್ದರು. ಟಿಕೆಟ್ ಸಿಗುವ ನಿರೀಕ್ಷೆಯೂ ಇತ್ತು. ಆದರೆ ಇದೀಗ ಅವರ ಲೆಕ್ಕಚಾರ ಉಲ್ಟಾ ಆಗಿದೆ. ಬಿಜೆಪಿ ಬೇರೆಯವರಿಗೆ ಮಣೆ ಹಾಕಿದೆ. ಧನಂಜಯ ಅವರಿಗೆ ಟಿಕೆಟ್ ಕೊಟ್ಟಿದೆ. ಇದರಿಂದ ರಘುಪತಿ ಭಟ್ ಕೋಪಗೊಂಡಿದ್ದು, ಬೇಸರ ಹೊರ ಹಾಕಿದ್ದಾರೆ.

ನನಗೆ ಟಿಕೆಟ್ ವಂಚಿಸಿದ್ದು ಭೌಗೋಳಿಕ ಅನ್ಯಾಯ ಮತ್ತು ಕಾರ್ಯಕರ್ತರಿಗೆ ಆಗಿರುವ ದ್ರೋಹ. ತನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದರು ಸ್ಪರ್ಧೆಯಿಂದ ಸರಿಯುವುದಿಲ್ಲ. ಯಾರಾದರೂ ಹಿರಿಯ ನಾಯಕರಿಗೆ ಕೊಟ್ಟರು ನನಗೆ ಬೇಸರವಿಲ್ಲ ಎಂದಿದ್ದಾರೆ.

 

ಬಾಲ್ಯದಿಂದ ಸ್ವಯಂ ಸೇವಕ, ಕಾರ್ಯಕರ್ತ. ಬಿಜೆಒಇಯ ಜಿಲ್ಲಾಧ್ಯಕ್ಷನಾಗಿದ್ದೆ. ಯಾರೇ ಅಭ್ಯರ್ಥಿಯಾಗಬೇಕು ಅಂದ್ರೆ ಬೂತ್ ಮಟ್ಟದಿಂದ ಮಾಹಿತಿ ಸಂಗ್ರಹ ಮಾಡಿ, ಆಯ್ಕೆ ಮಾಡುತ್ತಿದ್ದರು. ಆದರೆ ಇತ್ತಿಚೆಗೆ ಆ ರೀತಿ ಇಲ್ಲ. ಕೇಂದ್ರದಿಂದ ಪ್ರಭಾವ ಇರುವವರಿಗೆ ಟಿಕೆಟ್ ಸಿಕ್ತಾ ಇದೆ. ನಾನೀಗ ನಿಲ್ತಾ ಇರುವುದು ನಾನೊಬ್ಬ ಸಕ್ರಿಯ ರಾಜಕಾರಣಿ. ಶಾಸಕನಾಗಿದ್ದಾಗ ಕುಟುಂಬವನ್ನು ನೋಡದೆ ಕೆಲಸ ಮಾಡಿದ್ದೀನಿ. ಹೀಗಾಗಿ ನಾನು ನಿಲ್ಲುತ್ತಿದ್ದೇನೆ ಎಂದಿದ್ದಾರೆ. ಈ ಮೂಲಕ ಪದವೀಧರ ಕ್ಷೇತ್ರದ ಚುನಾವಣೆಯಿಂದಾನು ಬಿಜೆಪಿಗೆ ಬಂಡಾಯದ ಬಿಸಿ ತಟ್ಟಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

INDIA Vs ZIMBABWE : 13 ರನ್‌ಗಳ ಅಂತರದಿಂದ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಸೋಲು

  ಸುದ್ದಿಒನ್ : ಟಿ20 ವಿಶ್ವಕಪ್ ಗೆದ್ದ ಭಾರತ ಆ ಬಳಿಕ ಮೊದಲ ಸರಣಿಯನ್ನು ಸೋಲಿನೊಂದಿಗೆ ಆರಂಭಿಸಿದೆ.  ಜಿಂಬಾಬ್ವೆ ವಿರುದ್ಧ 13 ರನ್‌ಗಳಿಂದ ಸೋತಿತು. ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್

ಹೆಚ್ಡಿಕೆ ಜನತಾ ದರ್ಶನಕ್ಕೆ 3 ಸಾವಿರ ಜನ ಬಂದಿದ್ರು..ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಯೋಜನೆಗಳನ್ನ ಕೊಡಿಸಲಿ ನೋಡೋಣಾ : ಚೆಲುವರಾಯಸ್ವಾಮಿ

ಬೆಂಗಳೂರು: ಮೊನ್ನೆಯಷ್ಟೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಜನತಾ ದರ್ಶನ ನಡೆಸಿದ್ದರು‌. ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗಿದ್ದಕ್ಕೆ ಸರ್ಕಾರದ ಮೇಲೆ ಕಿಡಿಕಾರಿದ್ದರು. ಇದೀಗ ಜನತಾ ದರ್ಶನದ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಅವರು ಆಕ್ರೋಶ

ಚಿತ್ರದುರ್ಗ | ಪಿ.ಸಿ.ಪಿ.ಎನ್.ಡಿ.ಟಿ ಸಲಹಾ ಸಮಿತಿಯ ಅಧ್ಯಕ್ಷರಾಗಿ ಡಾ. ಸೌಮ್ಯ ನೇಮಕ

ಚಿತ್ರದುರ್ಗ. ಜುಲೈ.06:  ಪಿ.ಸಿ.ಪಿ.ಎನ್.ಡಿ.ಟಿ (ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರ ವಿಧಾನಗಳು (ಲಿಂಗ ಆಯ್ಕೆ ನಿಷೇಧ) ಕಾಯ್ದೆ ಅನುಸಾರ ಸಲಹಾ ಸಮಿತಿಯನ್ನು ಪುನರ್ ರಚಿಸಲಾಗಿದ್ದು, ಸಲಹಾ ಸಮಿತಿ ಅಧ್ಯಕ್ಷರಾಗಿ ಚಿತ್ರದುರ್ಗದ ಖಾಸಗಿ ನರ್ಸಿಂಗ್

error: Content is protected !!