Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಂಗಳೂರು, ಉಡುಪಿಗೆ ಸ್ಪೆಷಲ್ ಫೋರ್ಸ್ ; ಗೃಹ ಸಚಿವರು ಹೇಳಿದ್ದೇನು..?

ಸಚಿವ ಪರಮೇಶ್ವರ್
---Advertisement---

ಮಂಗಳೂರು; ಸುಹಾಸ್ ಶೆಟ್ಟಿ ಹ* ಬಳಿಕ ಜಿಲ್ಲೆಯಲ್ಲಿ ತಳಮಳ ಜೋರಾಗಿದೆ. ಆತಂಕವೂ ಹೆಚ್ಚಾಗಿದೆ. ಮಂಗಳೂರನ್ನೇ ಈ ಹತ್ಯೆ ಬೆಚ್ಚಿ ಬೀಳಿಸಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ. ವಿಚಾರಣೆಯನ್ನು ನಡೆಸಲಾಗುತ್ತಿದೆ. ಗೃಹ ಸಚಿವ ಜಿ.ಪರಮೇಶ್ವರ್ ಅವರು ಕೂಡ ಮಂಗಳೂರಿಗೆ ಭೇಟಿ ನೀಡಿ, ಮಹತ್ವದ ಘೋಷಣೆಯೊಂದನ್ನ ಮಾಡಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿಯ ಎರಡು ಜಿಲ್ಲೆಗೆ ಸ್ಪೆಷಲ್ ಫೋರ್ಸ್ ನಿಯೋಜನೆ ಮಾಡಲು ತೀರ್ಮಾನಿಸಲಾಗಿದೆ.

ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್ ಅವರು, ಹಿಂದೂ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಕರಾವಳಿಯಲ್ಲಿ ಸದ್ಯ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಹೀಗಾಗಿ ಸುಹಾಸ್ ಶೆಟ್ಟಿ ಪ್ರಕತಣದ ಬಳಿಕ ಮತ್ತೊಂದು ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅದು ಆಂಟಿ ನಕ್ಸಲ್ ಫೋರ್ಸ್ ಮಾದರಿಯಲ್ಲೇ ಇರಲಿದೆ. ಉಡುಪಿ, ದಕ್ಷಿಣ ಕನ್ನಡ 2 ಜಿಲ್ಲೆಗಳಲ್ಲಿ ಆಂಟಿ ಕಮ್ಯುನಲ್ ಫೋರ್ಸ್ ಸ್ಥಾಪನೆ ಮಾಡಲಾಗುತ್ತಿದೆ.

ಇದಕ್ಕಾಗಿ ಪ್ರತ್ಯೇಕ ಅಧಿಕಾರಿಗಳ ತಂಡವನ್ನ ಇಲ್ಲಿಗೆ ನೇಮಿಸುತ್ತೇವೆ. ಕಾರ್ಕಳದಲ್ಲಿದ್ದ ANF ತರವೇ ಈ ಎರಡು ಜಿಲ್ಲೆಯಲ್ಲಿ ಕಮ್ಯುನಲ್ ಟಾಸ್ಕ್ ಫೋರ್ಸ್ ಇರುತ್ತೆ. ಪ್ರತ್ಯೇಕ ತಂಡವನ್ನು ನಾವೂ ಇಲ್ಲಿ ಇಡುತ್ತೇವೆ. ಎಎನ್ಎಫ್ ನಲ್ಲಿದ್ದ ಕೆಲವರನ್ನು ತಗೊತೀವಿ. ಕೆವರು ಬೇರೆ ಕಡೆಯಿಂದ ಬರ್ತಾರೆ. ಸದ್ಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಫೋರ್ಸ್ ಕೆಲಸ ಮಾಡಲಿದೆ. ಅವರಿಗೆ ಸ್ವತಂತ್ರ ಅಧಿಕಾರ ಕೊಡುತ್ತೇವೆ ಎಂದು ಗೃಹ ಸಚುವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...