Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಏಪ್ರಿಲ್ 1 ರಿಂದ 15 ರವರೆಗೆ ಶ್ರೀ ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ : ಕಾರ್ಯಕ್ರಮಗಳ ವಿವರ ಇಲ್ಲಿದೆ…!

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮಾ. 25 : ಐತಿಹಾಸಿಕ ಚಿತ್ರದುರ್ಗದ ಮೇಲುದುರ್ಗದಲ್ಲಿರುವ ಶ್ರೀ ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವವು ಪ್ರತಿವರ್ಷದ ಮಾಮೂಲು ಪದ್ದತಿಯಂತೆ ಶ್ರೀ ವಿಶ್ವಾವಸುನಾಮ ಸಂವತ್ಸರದಲ್ಲಿ ಏಪ್ರಿಲ್ 1 ರಿಂದ 15 ರವರೆಗೆ ಹಮ್ಮಿಕೊಳ್ಳಲಾಗಿದೆ.

ಏ. 01ರಂದು ಮಂಗಳವಾರ ರಾತ್ರಿ 11-40ಕ್ಕೆ ಅಮ್ಮನವರ ಜಾತ್ರೆಯ ಸಾರು ಹಾಕುವ ಕಾರ್ಯಕ್ರಮ,

ಏ.05 ರಂದು  ಶನಿವಾರ ಕಂಕಣಧಾರಣೆ, ಅಮ್ಮನವರಿಗೆ ಭಂಡಾರ ಪೂಜೆ ಮತ್ತು ರುದ್ರಾಭಿಷೇಕ,

ಏ.06ರಂದು  ಭಾನುವಾರ ರಾತ್ರಿ 8-00 ಗಂಟೆಯಿಂದ ರಾಜಬೀದಿಗಳಲ್ಲಿ ಸಿಂಹವಾಹಿನಿ ಉತ್ಸವ,

ಏ.07ರಂದು  ಸೋಮ ವಾರ ರಾತ್ರಿ 8-00 ಗಂಟೆಯಿಂದ ರಾಜಬೀದಿಗಳಲ್ಲಿ ಸರ್ಪೋತ್ಸವದೊಂದಿಗೆ ಭಕ್ತರ ಮನೆಗಳಲ್ಲಿ ಪೂಜಾ ಕಾರ್ಯಕ್ರಮ ರಾತ್ರಿ 8-00 ಗಂಟೆಯಿಂದ ರಾಜಬೀದಿಗಳಲ್ಲಿ ಮಯುರೋತ್ಸವ(ನವಿಲು ಉತ್ಸವ)

ಏ.08ರಂದು  ಮಂಗಳವಾರ ರಾತ್ರಿ ಶ್ರೀ ಅಮ್ಮನವರಿಗೆ ಭಂಡಾರ ಪೂಜಾ ಕಾರ್ಯಕ್ರಮ  ಏ.09ರಂದು  ಬುಧವಾರ ಬೆಳಗ್ಗೆ ಭಂಡಾರದ ಪೂಜೆ 9-00 ಗಂಟೆಗೆ ಅಮ್ಮನವರು ಕೆಳಗೆ ಇಳಿಯುವ ಕಾರ್ಯಕ್ರಮ. ಅರ್ಚಕರ ಮನೆಯಿಂದ ಮಕ್ಕಳಿಗೆ ಬೇವಿನ ಉಡಿಗೆ ಸೇವಾ ಅಶೋತ್ಸವದಲ್ಲಿ ಕಾಮನಬಾವಿ ಹೊಂಡದಲ್ಲಿ ಗಂಗಾಪೂಜೆಗೆ ಆಗಮಿಸಿ, ಇದೇ ರಾತ್ರಿ 9-00 ಗಂಟೆಯಿಂದ ಶ್ರೀ ಅಮ್ಮನವರ ಉತ್ಸವ ಜಿಲ್ಲಾಧಿಕಾರಿಗಳವರ ಬಂಗಲೆಗೆ ಬಿಜಯುಂಗೈಯುವುದು. ಮಂಗಳಾರತಿ ಕೆಳಗೋಟೆ ಭಕ್ತಾದಿಗಳಿಂದ.

ಏ.10ರಂದು  ಗುರುವಾರ ಸಾಯಂಕಾಲ 7-00 ಗಂಟೆಗೆ ಇದೇ ಕರುವಿನಕಟ್ಟೆ ಭಕ್ತಾಧಿಗಳಿಂದ ಸೇವೆ, ರಾಜಬೀದಿಗಳಲ್ಲಿ ಉತ್ಸವ. ಏ.11ರಂದು  ಶುಕ್ರವಾರ ಬೆಳಗ್ಗೆ 8-00 ಗಂಟೆಯಿಂದ ರಾಜ ಬೀದಿಗಳಲ್ಲಿ ಅಕ್ಟೋತ್ಸವ ಮತ್ತು ಹೂವಿನ ಉತ್ಸವ ಮಹಾ ಮಂಗಳಾರತಿ. ಏ.12ರಂದು  ಸಂಜೆ 5-30ಕ್ಕೆ ಜಾತ್ರಾ ಬಯಲಿನ ಪಾದಗಟ್ಟೆಯಲ್ಲಿ ‘ಸಿಡಿ ಉತ್ಸವ’ ಅಮ್ಮನವರಿಗೆ ಮಹಾಮಂಗಳಾರತಿ ಕಾರ್ಯಕ್ರಮ ಏ.13ರಂದು  ಭಾನುವಾರ ಸಾಯಂಕಾಲ 6-30ಕ್ಕೆ ಬೆಟ್ಟದ ಮೇಲೆ ಓಕಳಿ ಉತ್ಸವ ಜೋಗತಿ ಮತ್ತು ಜೋಗಪ್ಪ ಇವರಿಂದ. ಏ.15ರಂದು ಬೆಳಗ್ಗೆ 10-30ಕ್ಕೆ ಕಂಕಣ ವಿಸರ್ಜನೆ ಮತ್ತು ಗಂಗಾಪೂಜೆಯೊಂದಿಗೆ ಜಾತ್ರೆ ಮುಕ್ತಾಯವಾಗಲಿದೆ.

 

ದಿನಾಂಕ: 11-04-2025ನೇ ಶುಕ್ರವಾರ ಬೆಳಗ್ಗೆ 09:30ಕ್ಕೆ ಶ್ರೀ ಏಕನಾಥೇಶ್ವರಿ ಅಮ್ಮನವರ ಪಾದಗುಡಿಯ ಜಾತ್ರೆ ಬಯಲಿನ ದ್ವಾರಬಾಗಿಲಿನ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಮೇಲ್ಕಂಡ ಎಲ್ಲಾ ಸಕಲ ಕಾರ್ಯಕ್ರಮಗಳಿಗೂ ಭಕ್ತಾಧಿಗಳು ಭಾಗವಹಿಸಿ, ತನು, ಮನ, ಧನಗಳಿಂದ ಸಹಕರಿಸಿ, ಶ್ರೀ ಏಕನಾಥೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವವು ವಿನಂತಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...