ಏಪ್ರಿಲ್ 1 ರಿಂದ 15 ರವರೆಗೆ ಶ್ರೀ ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ : ಕಾರ್ಯಕ್ರಮಗಳ ವಿವರ ಇಲ್ಲಿದೆ…!

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮಾ. 25 : ಐತಿಹಾಸಿಕ ಚಿತ್ರದುರ್ಗದ ಮೇಲುದುರ್ಗದಲ್ಲಿರುವ ಶ್ರೀ ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವವು ಪ್ರತಿವರ್ಷದ ಮಾಮೂಲು ಪದ್ದತಿಯಂತೆ ಶ್ರೀ ವಿಶ್ವಾವಸುನಾಮ ಸಂವತ್ಸರದಲ್ಲಿ ಏಪ್ರಿಲ್ 1 ರಿಂದ 15 ರವರೆಗೆ ಹಮ್ಮಿಕೊಳ್ಳಲಾಗಿದೆ.

ಏ. 01ರಂದು ಮಂಗಳವಾರ ರಾತ್ರಿ 11-40ಕ್ಕೆ ಅಮ್ಮನವರ ಜಾತ್ರೆಯ ಸಾರು ಹಾಕುವ ಕಾರ್ಯಕ್ರಮ,

ಏ.05 ರಂದು  ಶನಿವಾರ ಕಂಕಣಧಾರಣೆ, ಅಮ್ಮನವರಿಗೆ ಭಂಡಾರ ಪೂಜೆ ಮತ್ತು ರುದ್ರಾಭಿಷೇಕ,

ಏ.06ರಂದು  ಭಾನುವಾರ ರಾತ್ರಿ 8-00 ಗಂಟೆಯಿಂದ ರಾಜಬೀದಿಗಳಲ್ಲಿ ಸಿಂಹವಾಹಿನಿ ಉತ್ಸವ,

ಏ.07ರಂದು  ಸೋಮ ವಾರ ರಾತ್ರಿ 8-00 ಗಂಟೆಯಿಂದ ರಾಜಬೀದಿಗಳಲ್ಲಿ ಸರ್ಪೋತ್ಸವದೊಂದಿಗೆ ಭಕ್ತರ ಮನೆಗಳಲ್ಲಿ ಪೂಜಾ ಕಾರ್ಯಕ್ರಮ ರಾತ್ರಿ 8-00 ಗಂಟೆಯಿಂದ ರಾಜಬೀದಿಗಳಲ್ಲಿ ಮಯುರೋತ್ಸವ(ನವಿಲು ಉತ್ಸವ)

ಏ.08ರಂದು  ಮಂಗಳವಾರ ರಾತ್ರಿ ಶ್ರೀ ಅಮ್ಮನವರಿಗೆ ಭಂಡಾರ ಪೂಜಾ ಕಾರ್ಯಕ್ರಮ  ಏ.09ರಂದು  ಬುಧವಾರ ಬೆಳಗ್ಗೆ ಭಂಡಾರದ ಪೂಜೆ 9-00 ಗಂಟೆಗೆ ಅಮ್ಮನವರು ಕೆಳಗೆ ಇಳಿಯುವ ಕಾರ್ಯಕ್ರಮ. ಅರ್ಚಕರ ಮನೆಯಿಂದ ಮಕ್ಕಳಿಗೆ ಬೇವಿನ ಉಡಿಗೆ ಸೇವಾ ಅಶೋತ್ಸವದಲ್ಲಿ ಕಾಮನಬಾವಿ ಹೊಂಡದಲ್ಲಿ ಗಂಗಾಪೂಜೆಗೆ ಆಗಮಿಸಿ, ಇದೇ ರಾತ್ರಿ 9-00 ಗಂಟೆಯಿಂದ ಶ್ರೀ ಅಮ್ಮನವರ ಉತ್ಸವ ಜಿಲ್ಲಾಧಿಕಾರಿಗಳವರ ಬಂಗಲೆಗೆ ಬಿಜಯುಂಗೈಯುವುದು. ಮಂಗಳಾರತಿ ಕೆಳಗೋಟೆ ಭಕ್ತಾದಿಗಳಿಂದ.

ಏ.10ರಂದು  ಗುರುವಾರ ಸಾಯಂಕಾಲ 7-00 ಗಂಟೆಗೆ ಇದೇ ಕರುವಿನಕಟ್ಟೆ ಭಕ್ತಾಧಿಗಳಿಂದ ಸೇವೆ, ರಾಜಬೀದಿಗಳಲ್ಲಿ ಉತ್ಸವ. ಏ.11ರಂದು  ಶುಕ್ರವಾರ ಬೆಳಗ್ಗೆ 8-00 ಗಂಟೆಯಿಂದ ರಾಜ ಬೀದಿಗಳಲ್ಲಿ ಅಕ್ಟೋತ್ಸವ ಮತ್ತು ಹೂವಿನ ಉತ್ಸವ ಮಹಾ ಮಂಗಳಾರತಿ. ಏ.12ರಂದು  ಸಂಜೆ 5-30ಕ್ಕೆ ಜಾತ್ರಾ ಬಯಲಿನ ಪಾದಗಟ್ಟೆಯಲ್ಲಿ ‘ಸಿಡಿ ಉತ್ಸವ’ ಅಮ್ಮನವರಿಗೆ ಮಹಾಮಂಗಳಾರತಿ ಕಾರ್ಯಕ್ರಮ ಏ.13ರಂದು  ಭಾನುವಾರ ಸಾಯಂಕಾಲ 6-30ಕ್ಕೆ ಬೆಟ್ಟದ ಮೇಲೆ ಓಕಳಿ ಉತ್ಸವ ಜೋಗತಿ ಮತ್ತು ಜೋಗಪ್ಪ ಇವರಿಂದ. ಏ.15ರಂದು ಬೆಳಗ್ಗೆ 10-30ಕ್ಕೆ ಕಂಕಣ ವಿಸರ್ಜನೆ ಮತ್ತು ಗಂಗಾಪೂಜೆಯೊಂದಿಗೆ ಜಾತ್ರೆ ಮುಕ್ತಾಯವಾಗಲಿದೆ.

 

ದಿನಾಂಕ: 11-04-2025ನೇ ಶುಕ್ರವಾರ ಬೆಳಗ್ಗೆ 09:30ಕ್ಕೆ ಶ್ರೀ ಏಕನಾಥೇಶ್ವರಿ ಅಮ್ಮನವರ ಪಾದಗುಡಿಯ ಜಾತ್ರೆ ಬಯಲಿನ ದ್ವಾರಬಾಗಿಲಿನ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಮೇಲ್ಕಂಡ ಎಲ್ಲಾ ಸಕಲ ಕಾರ್ಯಕ್ರಮಗಳಿಗೂ ಭಕ್ತಾಧಿಗಳು ಭಾಗವಹಿಸಿ, ತನು, ಮನ, ಧನಗಳಿಂದ ಸಹಕರಿಸಿ, ಶ್ರೀ ಏಕನಾಥೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವವು ವಿನಂತಿಸಿದೆ.

suddionenews

Recent Posts

ಸಾರ್ವಜನಿಕರಿಗೆ ಮಹತ್ವದ ಮಾಹಿತಿ : ಚಿತ್ರದುರ್ಗದಲ್ಲಿಂದು ನಾಣ್ಯಗಳ ಮೇಳ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28 : ನಗರದ ಐ.ಯು.ಡಿ.ಪಿ. ಲೇಔಟ್ ನ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಕರೆನ್ಸಿ ಚೆಸ್ಟ್ ಶಾಖೆಯಲ್ಲಿ…

3 hours ago

ಚಿತ್ರದುರ್ಗದಲ್ಲಿ ಏಪ್ರಿಲ್‌ 01 ರಿಂದ ಬೇಸಿಗೆ ಶಿಬಿರ : ಇಲ್ಲಿದೆ ಮಾಹಿತಿ… !

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ಎಲ್ಲೆಡೆ ಪರೀಕ್ಷೆಗಳು ಮುಗಿಯುವ ಹಂತಕ್ಕೆ ಬಂದಿವೆ. ಇನ್ನೇನೂ ಸದ್ಯದಲ್ಲೇ ಶಾಲಾ-ಕಾಲೇಜು ರಜೆ ಘೋಷಣೆ…

3 hours ago

ತಲೆನೋವು ಸದಾ ಕಾಡುತ್ತಾ..? ಈ ಮನೆ ಮದ್ದನ್ನ ಟ್ರೈ ಮಾಡಿ ಸಾಕು

ಹಲವರಿಗೆ ಇದ್ದಕ್ಕಿದ್ದ ಹಾಗೇ ತಲೆ ನೋವು ಬರುತ್ತೆ. ಮಾತ್ರೆಗಳಿಗೆ ಅಂತವರು ಅಡಿಕ್ಟ್ ಆಗಿರುತ್ತಾರೆ. ಆದರೆ ಮಾತ್ರೆ ತೆಗೆದುಕೊಳ್ಳುವುದು ಸದಾ ಕಾಲ…

4 hours ago

ಈ ರಾಶಿಯವರು ಕ್ಯಾಂಟೀನ್ ಬೇಕರಿ ಅಂತಹ ಸಣ್ಣ ಪುಟ್ಟ ವ್ಯಾಪಾರ ಪ್ರಾರಂಭಿಸಿ

ಈ ರಾಶಿಯವರು ಕ್ಯಾಂಟೀನ್ ಬೇಕರಿ ಅಂತಹ ಸಣ್ಣ ಪುಟ್ಟ ವ್ಯಾಪಾರ ಪ್ರಾರಂಭಿಸಿ, ಶುಕ್ರವಾರದ ರಾಶಿ ಭವಿಷ್ಯ 28 ಮಾರ್ಚ್ 2025…

6 hours ago

ಐಮಂಗಲ ಪೊಲೀಸರಿಂದ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾಗಿದ್ದ ಇಬ್ಬರ ಬಂಧನ

ಸುದ್ದಿಒನ್, ಹಿರಿಯೂರು, ಮಾರ್ಚ್. 27 : ಅಕ್ರಮ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ಐಮಂಗಲ ಪೊಲೀಸರು…

13 hours ago

ಬೆಂಗಳೂರಲ್ಲಿ ಬೆಚ್ಚಿಬೀಳಿಸಿದ ಕೊಲೆ ; ಪತ್ನಿಯನ್ನ ಕೊಂದು ಸೂಟ್ ಕೇಸ್ ಗೆ ತುಂಬಿದ ಗಂಡ..!

ಬೆಂಗಳೂರು; ಇತ್ತೀಚೆಗಂತೂ ಕೊಲೆ ಕೇಸದ ಗಳನ್ನೇ ಹೆಚ್ಚಾಗಿ‌ಕೇಳ್ತಾ ಇದ್ದೀವಿ. ಅದರಲ್ಲೂಈ ರೀತಿಯ ಕೊಲೆಗಳು ಕೂಡ ಜಾಸ್ತಿ ಆಗ್ತಾ ಇದಾವೆ. ಇಂದು…

13 hours ago