ಇಂದಿನಿಂದ ಶ್ರೀ ಗಾದ್ರಿಪಾಲನಾಯಕ ಸ್ವಾಮಿಯ ಮಿಂಚೇರಿ ಮಹೋತ್ಸವ : ಮಧ್ಯ ಕರ್ನಾಟಕದ ಹೆಮ್ಮೆಯ ಹಬ್ಬ  : ಮಾದಾರ ಚನ್ನಯ್ಯ ಸ್ವಾಮೀಜಿ

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಡಿ. 23 :  ಬುಡಕಟ್ಟು ಜನಾಂಗದ ಜನಕ, ಗೋರಕ್ಷಕ, ದಾಸರ ದಂಡಿನ ಒಡೆಯ ಶ್ರೀ ಗಾದ್ರಿಪಾಲನಾಯಕ ಸ್ವಾಮಿಯ ಸಾಲು ಎತ್ತಿನ ಗಾಡಿಗಳ 2023ರ ಮಿಂಚೇರಿ ಮಹೋತ್ಸವಕ್ಕೆ ಇಂದು ನಗರದ ತುರುವನೂರು ರಸ್ತೆಯಲ್ಲಿನ ವೆಂಕಟರಮಣ ದೇವಾಲಯದ ಬಳಿ ಮಠಾಧೀಶರು, ಸಮಾಜದ ಮುಖಂಡರು ಪುಷ್ಟ ವೃಷ್ಟಿಯನ್ನು ಮಾಡುವುದರ ಮೂಲಕ ಸ್ವಾಗತ ಮಾಡಿದರು.

ಡಿಸೆಂಬರ್. 23ರ ಇಂದಿನಿಂದ ಪ್ರಾರಂಭವಾದ  2023ರ ಮಿಂಚೇರಿ ಮಹೋತ್ಸವ ಡಿ.28ರವರೆಗೆ ನಡೆಯಲಿದೆ. ಹಲವಾರು ವರ್ಷಗಳಿಂದ ಈ ಮಿಂಚೇರಿ ಉತ್ಸವವೂ ನಡೆಯುತ್ತಾ ಬಂದಿದೆ ಇದು ಬುಡಕಟ್ಟು ಜನಾಂಗದ ಸಂಸ್ಕøತಿಯಾಗಿದೆ. ಇಂದು ಬಚ್ಚಬೋರಯ್ಯಹಟ್ಟಿಯಿಂದ ನಿರ್ಗಮಿಸಿ, ಕಕ್ಕಲು ಬೆಂಚಿಲ್ಲಿ ಪೂಜೆಯನ್ನು ಸಲ್ಲಿಸಿ ಸಂಜೆ 7 ಗಂಟೆಗೆ ಕ್ಯಾಸಪುರದ ಬಯಲಿನಲ್ಲಿ ಬೀಡು ಬೀಡಲಾಗುವುದು.

ಡಿಸೆಂಬರ್.24 ರಂದು ಯಾತ್ರೆ ಮುಂದುವರೆದು ಮಧ್ಯಾಹ್ನ 12ಕ್ಕೆ ಸಿರಿಗೆರೆ ಡಿ.ಮದಕರಿಪುರ ವರತಿನಾಯಕ ಕರೆಯ ದಂಡೆಯಲ್ಲಿ ವಿಶ್ರಾಂತಿ ಪಡೆದು, ಅಲ್ಲಿಂದ ಮಿಚೇರಿಗೆ ಪಯಣ ಸಂಜೆ 5 ಗಂಟೆಗೆ ಸ್ವಾಮಿಯ ಮೀಸಲು ಹಾಲಿನ ಕಂಬಿಯ ಪೂಜೆ ನಡೆಯಲಿದೆ.

ಡಿಸೆಂಬರ್.25 ರಂದು ಬೆಳಿಗ್ಗೆ 5 ಕ್ಕೆ ಹುಲಿರಾಯನ ಮತ್ತು ನಾಯಕರ ಸಮಾದಿಗೆ ಪೂಜೆ, ಮದ್ಯಾಹ್ನ 2ಕ್ಕೆ ಸ್ವಾಮಿಯ ಸನ್ನಿಧಿಯಲ್ಲಿ ಬಸವಂತರಿಗೆ ಹಾಗೂ ಚೌಕು ಮಣಿವು ಕಾರ್ಯಕ್ರಮ, ಸಂಜೆ 4ಕ್ಕೆ ಕಣಿವೆ ಮಾರಮ್ಮ ಮಲ್ಲಿಯಮ್ಮ ಹಾಗೂ ಕೊಲ್ಲಪುರದಮ್ಮನವರ ಗಂಗಾಪೂಜೆ, .

ಡಿಸೆಂಬರ್.26ರಂದು ಬೆಳಿಗ್ಗೆ 7ಕ್ಕೆ ಭಿಕ್ಷೆ ಸ್ವೀಕಾರ, 11ಕ್ಕೆ ಸ್ವಾಮಿಯ ಸನ್ನಿಧಿಯಲ್ಲಿ ಪ್ರಸಾದ ಸ್ವೀಕಾರ, ಮದ್ಯಾಹ್ನ 2ಕ್ಕೆ ಮೀಚೇರಿಯಿಂದ ಸುಕ್ಷೇತ್ರದಿಂದ ನಿರ್ಗಮನ, ರಾತ್ರಿ 7ಕ್ಕೆ ಕಡ್ಲೇಗುದ್ದು ಬಿಳಿಯ ಸಿದ್ದರ ಗುಂಡಿಗೆ ಆಗಮನ

ಡಿಸೆಂಬರ್. 27 ರಂದು ಕ್ಯಾಸಾಪುರದ ಬಳಿಯ ಜನಿಗಿ ಹಳ್ಳಕ್ಕೆ ಗಂಗಾಪೂಜೆ, ಮಧ್ಯಾಹ್ನ 2ಕ್ಕೆ ಚಿತ್ರದುರ್ಗಕ್ಕೆ ಮಿಂಚೇರಿ ಯಾತ್ರೆಯ ಆಗಮನ ರಾಜಾ ಬೀದಿಗಳಲ್ಲಿ ಮೆರವಣಿಗೆ, ಸಂಜೆ ಕಕ್ಕಲು ಬೆಂಚಿಯಲ್ಲಿ ಬೀಡು ಬಿಡಲಾಗುವುದು. ಡಿ.28ರಂದು ಸಂಜೆ 7ಕ್ಕೆ ಗ್ರಾಮದ ಹೊಸ್ತಿಲು ಪೂಜೆಯೊಂದಿಗೆ ಸ್ವಸ್ಥಾನಕ್ಕೆ ಮರಳಲಾಗುವುದು, ಗುರು-ಹಿರಿಯರೊಂದಿಗೆ ದೇವರು ಮುತ್ತಯ್ಯಗಳ ಬೀಳ್ಕೂಡುಗೆ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮಾದರ ಚನ್ನಯ್ಯ ಗುರುಪೀಠದ ಶ್ರೀ ಬಸವ ಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು,ಗಾದ್ರಿಪಾಲ ನಾಯಕರು ನಮ್ಮ ಬುಡಕಟ್ಟು ಸಂಸ್ಕøತಿಯ ನಾಯಕರಾಗಿದ್ದಾರೆ. ಅವರ ಸ್ಮರಣೆಯನ್ನು ಪ್ರತಿ ಐದು ವರ್ಷಕ್ಕೊಮ್ಮೆ ಮಾಡಲಾಗುತ್ತದೆ. ಇದು ಈ ಭಾಗದ ಸಾಂಸ್ಕøತಿಕ ಹಬ್ಬವಾಗಿ ಭಾವಿಸಿಕೊಂಡು ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ನೂರಾರು ಜನತೆ ಸಹಕಾರವನ್ನು ನೀಡಿದ್ದಾರೆ. ಇದರಲ್ಲಿ ಎಲ್ಲರು ಭಾಗವಹಿಸಿ ಸಂಭ್ರಮ ಪಡಲಾಗುತ್ತಿದೆ ಇದು ಮಧ್ಯ ಕರ್ನಾಟಕದ ಹೆಮ್ಮೆಯ ಹಬ್ಬವಾಗಿದೆ ಎಂದರು.

ಡಿ. 27ರಂದು ಚಿತ್ರದುರ್ಗವನ್ನು ಪ್ರವೇಶ ಮಾಡಲಿರುವ ಮಿಂಚೇರಿ ಯಾತ್ರೆಯಲ್ಲಿ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಶ್ರೀಗಳು, ಬಸವಪ್ರಭು ಶ್ರೀಗಳು, ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು, ಯಾದಾವನಂದ ಶ್ರೀಗಳು, ಶಿವಲಿಂಗಾನಂದ ಶ್ರೀಗಳು, ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಕೇತೇಶ್ವರ ಶ್ರೀಗಳು, ಬಸವ ಮಾಚಿದೇವ ಶ್ರೀಗಳು, ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಬಿ.ನಾಗೇಂದ್ರ, ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಮಾಜಿ ಶಾಸಕರುಗಳು, ಅಧಿಕಾರಿಗಳು, ಭಾಗವಹಿಸಲಿದ್ದಾರೆ.

ಮೆರವಣಿಗೆಯಲ್ಲಿ ನೂರಾರು ಎತ್ತಿನಗಾಡಿಗಳು ಟ್ರಾಕ್ಟರ್ ಹಾಗೂ ಟಾಟಾ ಎಸಿಗಳಲ್ಲಿ ಜನತೆ ದಿನ ನಿತ್ಯದ ಬಳಕೆಯ ಸಾಮಾನುಗಳೊಂದಿಗೆ ಸಾಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಇಲ್ಲಿ ಎತ್ತುಗಳಿಗೆ ಶೃಂಗಾರವನ್ನು ಮಾಡುವುದರ ಮೂಲಕ ಅತಿ ಉತ್ಸಾಹದಿಂದ ಗಾಡಿಗಳನ್ನು ಓಡಿಸಿಕೊಂಡು ಹೋಗುತ್ತಿದ್ದು ಮತ್ತೇ ಕೆಲವರು ತಮ್ಮ ಮಕ್ಕಳ, ಹಿರಿಯರ ಭಾವಚಿತ್ರಗಳನ್ನು ಹಾಕಿ ಫ್ಲಕ್ಸ್‍ಗಳನ್ನು ಮಾಡಿಸಿ ಹಾಕಿದ್ದರು.

ಈ ಯಾತ್ರೆಯೂ ಸೀಬಾರ, ಗೂಳಯ್ಯನಹಟ್ಟಿ, ಕ್ಯಾಸಪುರ, ಕಡ್ಲೇಗುದ್ದು, ಕೋಣನೂರು, ಚುಕ್ಕೇನಹಳ್ಳಿ, ಸಿರಿಗೆರೆ, ದಡ್ಡಿಗೆನಹಾಳ್, ಮದಕರಿಪುರ, ಮೀಂಚೇರಿಪುರ ತಲುಪಲಿದೆ.
ಗೋಷ್ಟಿಯಲ್ಲಿ ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷರಾದ ಹೆಚ್.ಜೆ.ಕೃಷ್ಣಮೂರ್ತಿ, ನಗರಸಭೆ ಮಾಜಿ ಅಧ್ಯಕ್ಷ, ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್, ಸಮಾಜದ ಮುಖಂಡರಾದ ಗೋಪಾಲಸ್ವಾಮಿ ನಾಯಕ್, ಅಂಜನಪ್ಪ, ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಬೋರಯ್ಯ, ನೆಲಗೆತನ ಬೋರಯ್ಯ, ಬಿ.ಬೋರಯ್ಯ, ಸಣ್ಣ ಬೋರಯ್ಯ, ರಮೇಶ್, ಬಸವರಾಜು, ಪಾಲಯ್ಯ, ಪ್ರಹ್ಲಾದ್, ಪಾಪಣ್ಣ, ಮೂರ್ತಿ, ದೀಪು, ಕಾಟಹಳ್ಳಿ ಕರಿಯಣ್ಣ, ಸಣ್ಣ ಹನುಮಂತಸ್ವಾಮಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

47 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago