Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಗಸ್ಟ್ 26 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ : ಮುಖಂಡರ ಪೂರ್ವಭಾವಿ ಸಭೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್,ಚಿತ್ರದುರ್ಗ, ಆಗಸ್ಟ್.21 : ಹೊಳಲ್ಕೆರೆ ರಸ್ತೆಯಲ್ಲಿರುವ ಕೃಷ್ಣಯಾದವಾನಂದ ಮಠದ ಸಮೀಪವಿರುವ ಶ್ರೀಕೃಷ್ಣ ವೃತ್ತದಲ್ಲಿ ಆ.26 ರಂದು ಶ್ರೀಕೃಷ್ಣ ಜನ್ಮಾಷ್ಠಮಿ ಆಚರಿಸುವ ಕುರಿತು ತಾಲ್ಲೂಕು ಗೊಲ್ಲ ಸಮಾಜದಿಂದ ಇತ್ತೀಚೆಗೆ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು.

ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ಅಧ್ಯಕ್ಷ ಈರಜ್ಜನಹಟ್ಟಿ ಕೆ.ಕದುರಪ್ಪ ಮಾತನಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.25 ರಂದು ಶ್ರೀಕೃಷ್ಣ ವೃತ್ತದಿಂದ ಬೈಕ್‍ರ್ಯಾಲಿ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಆ.26 ರಂದು ಬೆಳಗಿನಿಂದಲೇ ವಿವಿಧ ಪೂಜಾ ಕಾರ್ಯಕ್ರಮಗಳ ನಡೆಯಲಿದ್ದು, ಸಮಸ್ತ ಗೊಲ್ಲ ಜನಾಂಗದವರು ಹಾಗೂ ಸಹೋದರ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಗೊಲ್ಲ ಸಮಾಜದ ಮುಖಂಡ ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಮಾತನಾಡಿ ಜನಾಂಗದ ಅನೇಕ ಮುಖಂಡರುಗಳು ಶಾಸಕರು, ಸಂಸದರು ಹಾಗೂ ಜಿಲ್ಲಾಧಿಕಾರಿ ಇವರುಗಳು ಶ್ರೀಕೃಷ್ಣ ಜನ್ಮಾಷ್ಠಮಿಯಲ್ಲಿ ಭಾಗವಹಿಸಲಿದ್ದಾರೆ. ಇದು ಕೇವಲ ಗೊಲ್ಲ ಜನಾಂಗಕ್ಕೆ ಮಾತ್ರ ಸೀಮಿತವಲ್ಲ. ಎಲ್ಲಾ ಜಾತಿ ಧರ್ಮದವರು ಪಾಲ್ಗೊಳ್ಳಬೇಕೆಂದು ವಿನಂತಿಸಿದರು.

ಜಿಲ್ಲಾ ಗೊಲ್ಲರ ಸಂಘದ ಪ್ರಧಾನ ಕಾರ್ಯದರ್ಶಿ ಆನಂದ್, ಗ್ಯಾರೆಂಟಿ ಅನುಷ್ಠಾನ ಸಮಿತಿಗಳ ಅಧ್ಯಕ್ಷ ಆರ್.ಶಿವಣ್ಣ, ನಾಗರಾಜ್, ಗ್ರಾಮ ಪಂಚಾಯಿತಿ ಸದಸ್ಯ ಟಿ.ಜಗದೀಶ್, ಗರಡಿ ತಿಮ್ಮಣ್ಣ, ನಗರಸಭೆ ಮಾಜಿ ಸದಸ್ಯ ಡಿ.ಸುರೇಶ್, ಸಂಪತ್‍ಕುಮಾರ್, ಗೌಡಪ್ಪ, ನಿಂಗೇಶ್, ಮಹಾಂತೇಶ್, ಅವಳೇಶ್, ಅವಳಿಹಟ್ಟಿ ಬಂಗಿ ಜಗ್ಗಣ್ಣ, ಗೋವಿಂದಪ್ಪ, ಜಿ.ಪಿ.ಕೆ.ಜನಾರ್ಧನ್, ಮಹಲಿಂಗಪ್ಪ, ವಿರುಪಾಕ್ಷಪ್ಪ ಯಾದವ್, ಹರೀಶ್, ಮಂಜುನಾಥ, ಲೋಕೇಶ್, ಮಂಜುನಾಥ, ತಿಮ್ಮರಾಯಪ್ಪ, ಮೈಲಾರಪ್ಪ, ಸಂತೋಷ್‍ಕುಮಾರ್, ಕೃಷ್ಣ ವೃತ್ತ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಗೊಲ್ಲ ಸಮಾಜದ ಅನೇಕ ಮುಖಂಡರುಗಳು ಪೂರ್ವಭಾವಿ ಸಭೆಯಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!