ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.18 : ಹೊಳಲ್ಕೆರೆ ರಸ್ತೆಯಲ್ಲಿರುವ ಶ್ರೀಕೃಷ್ಣ ಯಾದವಾನಂದ ಮಠದ ಹತ್ತಿರವಿರುವ ಕೃಷ್ಣ ವೃತ್ತದಲ್ಲಿ ಆಗಸ್ಟ್ 26 ರಂದು ಶ್ರೀ ಕೃಷ್ಣಜನ್ಮಾಷ್ಟಮಿ ನಡೆಯಲಿದೆ ಎಂದು ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಗಸ್ಟ್ 25 ರಂದು ಬೆಳಿಗ್ಗೆ 11 ಕ್ಕೆ ಕೃಷ್ಣ ವೃತ್ತದಿಂದ ಬೈಕ್ ರ್ಯಾಲಿ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. 26 ರಂದು ಬೆಳಿಗ್ಗೆ ಐದು ಗಂಟೆಯಿಂದಲೆ ಪೂಜೆ ವಿವಿಧ ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದ್ದು, ಸ್ಥಳೀಯ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ಯಾದವ ಸಮಾಜದ ಮುಖಂಡರುಗಳು ಹಾಗೂ ಜಿಲ್ಲಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಕೇವಲ ಯಾದವ ಜನಾಂಗವಷ್ಟೆ ಅಲ್ಲ ಎಲ್ಲಾ ಜಾತಿಯವರು ಶ್ರೀಕೃಷ್ಣ ಜನ್ಮಾಷ್ಠಮಿಯಲ್ಲಿ ಭಾಗವಹಿಸಿ ಜಯಂತಿಯನ್ನು ಯಶಸ್ವಿಗೊಳಿಸುವಂತೆ ಸಿ.ಟಿ.ಕೃಷ್ಣಮೂರ್ತಿ ಮನವಿ ಮಾಡಿದರು.
ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ಅಧ್ಯಕ್ಷ ಕದರಪ್ಪ, ಆರ್.ಶಿವಣ್ಣ, ಗರಡಿ ತಿಮ್ಮಣ್ಣ, ಮೈಲಾರಪ್ಪ, ನಗರಸಭೆ ಮಾಜಿ ಸದಸ್ಯ ಡಿ.ಸಿ.ಸುರೇಶ್ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









