Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ  ಕಲ್ಯಾಣೋತ್ಸವ ಹೋಮ,ವಿಶೇಷ ಪೂಜೆ ಮತ್ತು ಸಮುದಾಯ ಭವನ ಲೋಕಾರ್ಪಣೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ.ಆ.19:  ತುರುವನೂರು ರಸ್ತೆಯಲ್ಲಿರುವ ಶ್ರೀ ಪ್ರಸನ್ನ ವೆಂಕರಮಣ ಸ್ವಾಮಿ ದೇವಸ್ಥಾನವು ಮುಜರಾಯಿ ಅಧಿಸೂಚಿತ ದೇವಸ್ಥಾನವಾಗಿದೆ.

ಭೀಮಾರೆಡ್ಡಿ ಬಿನ್ ಲಕ್ಷ್ಮಣ ಎಂಬ ಭಕ್ತರು ತಮ್ಮ ಸ್ವಂತ ಖರ್ಚಿನಲ್ಲಿ ದೇವಸ್ಥಾನದ ಅವರಣದಲ್ಲಿ ಸಮುದಾಯ ಭವನವನ್ನು ನಿರ್ಮಾಣ ಮಾಡಿದ್ದಾರೆ. ಇದನ್ನು ಭಕ್ತಾದಿಗಳ ಉಪಯೋಗಕ್ಕಾಗಿ ಮುಜರಾಯಿ ಇಲಾಖೆ ವಶಕ್ಕೆ ದೇಣಿಗೆ ರೂಪದಲ್ಲಿ ನೀಡಿದ್ದಾರೆ.

ಈ ಸಮುದಾಯ ಭವನ ಲೋಕಾರ್ಪಣೆ ಸುಸಂದರ್ಭ ಹಾಗೂ ಶಾವಣ ಮಾಸದ ಹಿನ್ನಲೆಯಲ್ಲಿ ಆಗಸ್ಟ್ 27 ಹಾಗೂ 28 ರಂದು ಪ್ರಸನ್ನ ವೆಂಕಟರಮಣ ದೇವಸ್ಥಾನಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಲೊಳ್ಳಲಾಗಿದೆ.

ಆಗಸ್ಟ್ 27 ರಂದು ಹೋಮ ಹಾಗೂ ವಿಶೇಷ ಪೂಜೆ ನಡೆಸಲಾಗುವುದು. ಆಗಸ್ಟ್ 28 ರಂದು ಶ್ರೀ ಪ್ರಸನ್ನ ವೆಂಕರಮಣ ಸ್ವಾಮಿ ಕಲ್ಯಾಣೋತ್ಸವ ನಡೆಯಲಿದೆ. ಭಕ್ತಾಧಿಗಳು ಹಾಗೂ ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕು.

ಆಗಸ್ಟ್ 29 ರಿಂದ ಸಮುದಾಯ ಭವನದಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಸಾರ್ವಜನಿಕರು ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!