Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪಘಾತದಿಂದಾಗಿ ನೋವಾಗಿದೆ : ಇನ್ನು ಮುಂದೆ KSRTC ಬಸ್ ಗಳನ್ನ ಬಿಡಲಾಗುತ್ತೆ : ಸಚಿವ ಶ್ರೀರಾಮುಲು

Facebook
Twitter
Telegram
WhatsApp

ಬೆಂಗಳೂರು: ಇಂದು ತುಮಕೂರು ಜಿಲ್ಲೆಯ ಪಾವಗಡದ ಬಳಿ ಭೀಕರ ಬಸ್ ದುರಂತ ನಡೆದಿದೆ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸಚಿವ ಶ್ರೀರಾಮುಲು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಈ ಘಟನೆ ಬಹಳ ದುರದೃಷ್ಟಕರ. ಇವತ್ತು ಬಸ್ಸು ಅಪಘಾತದಲ್ಲಿ ಸುಮಾರು 8 ಜನ ಪ್ರಾಣ ಕಳೆದುಕೊಂಡಿದ್ದಾರೆ. 25 ಜನ ಗಾಯಾಳುಗಳಾಗಿದ್ದಾರೆ. ಈಗಾಗಲೇ ಅಧಿಕಾರಿಗಳನ್ನ ಕಳುಹಿಸಿಕೊಟ್ಟಿದ್ದೀನಿ. ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಆ ಬಸ್ ಸರಿಯಾಗಿದೆಯಾ ಇಲ್ವಾ, ಫಿಟ್ನೆಸ್ ಇದ್ಯಾ ಇಲ್ವಾ, ಇನ್ಸುರೆನ್ಸ್ ಬಗ್ಗೆನು ಪರಿಶಿಲನೆ ಮಾಡಲಾಗುತ್ತಿದೆ. ಓವರ್ ಲೋಡ್ ಹಾಕಿ ಕ್ರಾಸಿಂಗ್ ನಲ್ಲಿ ಸ್ಪೀಡಾಗಿ ಬರುತ್ತಿದ್ದ ಕಾರಣ ಈ ದುರ್ಘಟನೆ ನಡೆದಿದೆ. ಆ ಬಗ್ಗೆಯೂ ವಿಚಾರಣೆ ಮಾಡಲಾಗುತ್ತಿದೆ.

ಈ ಭಾಗದಲ್ಲಿ ಕೆಎಸ್ಆರ್ಟಿಸಿ ಬಸ್ ಅಡ್ಡಾಡುತ್ತಿಲ್ಲ. ಪ್ರೈವೇಟ್ ಗಾಡಿ ಓಡಾಡುತ್ತಿವೆ ಎಂಬ ದೂರು ಇದೆ. ತಕ್ಷಣವೇ ಪ್ರೈವೇಟ್ ಗಾಡಿಗಳ ಪರ್ಮೀಟ್ ಕ್ಯಾನ್ಸಲ್ ಮಾಡಿ. ತಕ್ಷಣ ಕೆಎಸ್ಆರ್ಟಿಸಿ ಬಸ್ ಗಳ ಸಂಚಾರಕ್ಕೆ ಪರ್ಮಿಟ್ ನೀಡಲಾಗುತ್ತದೆ. ಇಂದು ಈ ಘಟನೆಯಿಂದ ಬಹಳಷ್ಟು ನೋವಾಗಿದೆ. ಮೃತ ಹೊಂದಿರುವವ ಬಗ್ಗೆಯೂ ಸಿಎಂ ಬಳಿ ಚರ್ಚೆ ಮಾಡಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!