Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಕಾದಶಿಯಂದೇ ಲಿಂಗೈಕ್ಯರಾದ ಸಿದ್ದೇಶ್ವರ ಸ್ವಾಮೀಜಿ : ಸ್ಮಾರಕ‌ ಮಾಡದಂತೆ 2014ರಲ್ಲೇ ವಿಲ್..!

Facebook
Twitter
Telegram
WhatsApp

 

ವಿಜಯಪುರ : ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಇಂದು ಸಂಜೆ 6.05 ನಿಮಿಷಕ್ಕೆ ಲಿಂಗೈಕ್ಯರಾಗಿದ್ದು, ರಾತ್ರಿ 10 ಗಂಟೆಗೆ ಡಿಸಿ ವಿಜಯಮಾಂತೇಶ ದಾನಮ್ಮ ಅವರು ಸುದ್ದಿಗೋಷ್ಟಿ ನಡೆಸಿ ಅಧಿಕೃತ ಮಾಹಿತಿ ತಿಳಿಸಿದ್ದಾರೆ.

ಸರ್ಕಾರಿ ಗೌರವಗಳೊಂದಿಗೆ, ಅಂತಿಮ ವಿಧಿ ವಿಧಾನಗಳ ಮೂಲನ ಅಂತಿಮ ಸಂಸ್ಕಾರ ನಡೆಸಲು ಸಿಎಂ ಬಸವೆಅಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ನಾಳೆ ವಿಜಯಪುರದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಸುಕಿನ ಜಾವ 5 ಗಂಟೆಗೆ ಮಠದ ಆವರಣದಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇನ್ನು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3ರ ತನಕ ಸೈನಿಕ ಶಾಲೆಯಲ್ಲಿ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ವೇಳೆಗೆ ಸರ್ಕಾರಿ ಗೌರವ ಸಲ್ಲಿಸಿ 5 ಗಂಟೆಗೆ ಮಠದ ಆವರಣದಲ್ಲಿಯೇ ಅಂತ್ಯ ಸಂಸ್ಕಾರ ನಡೆಯಲಿದೆ. ನಾಳಿನ ಸ್ವಾಮೀಜಿ ಅಂತಿಮ ಸಂಸ್ಕಾರದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಜಗದೀಶ್ ಶೆಟ್ಟರ್ ಭಾಗಿಯಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇನ್ನು ಸ್ವಾಮೀಜಿಗಳು ತಾವೂ ಲಿಂಗೈಕ್ಯರಾದ ಬಳಿಕ ಏನು ಮಾಡಬೇಕು, ಮಾಡಬಾರದು ಎಂಬುದನ್ನು ಮಠದವರ ಬಳಿ 2014ರಲ್ಲಿಯೇ ಚರ್ಚೆ ನಡೆಸಿದ್ದಾರೆ. ಈ ಸಂಬಂಧ ವಿಲ್ ಕೂಡ ಬರೆದಿಟ್ಟಿದ್ದಾರೆ. ದೇಹವನ್ನು ಮಣ್ಣು ಮಾಡುವಂತಿಲ್ಲ ಅಗ್ನಿ ಸ್ಪರ್ಶ ಮಾಡಬೇಕು. ಚೀತಾ ಭಸ್ಮವನ್ನು ನದಿ ಅಥವಾ ಸಮುದ್ರದಲ್ಲಿ ಬಿಡಬೇಕು. ಸ್ಮಾರಕವನ್ನು ಕಟ್ಟುವಂತಿಲ್ಲ ಎಂದು ವಿಲ್ ಬರೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!