Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೈಸೂರು ದಸರಾ ಉತ್ಸವದಲ್ಲಿ ಚಿತ್ರದುರ್ಗದ ಶ್ರೀ ವಿಜಯ ಮಹಾಂತೇಶ್ವರ ಕಲಾ ಬಳಗ ಭಾಗಿ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 13 : 2024 ನೇ ಸಾಲಿನ ವಿಶ್ವ ವಿಖ್ಯಾತ ಮೈಸೂರು ದಸರಾ ಸಾಂಸ್ಕೃತಿಕ ಮಹೋತ್ಸವದ ವೇದಿಕೆಗಳೊಂದಾದ ಗಾನ ಭಾರತಿ ಸಭಾಂಗಣದ ವೇದಿಕೆಯಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ಸಿದ್ದಯ್ಯನಕೋಟೆ ಗ್ರಾಮದ ಅಪ್ಪಟ ಗ್ರಾಮೀಣ ದೇಸಿ ಪ್ರತಿಭೆ ಎಂ. ನುಂಕೇಶ್ ಸಾರಥ್ಯದ ಶ್ರೀ ವಿಜಯ ಮಹಾಂತೇಶ್ವರ ಕಲಾ ಬಳಗ ವಿವಿಧ ಗೀತೆಗಳೊಂದಿಗೆ ಯಶಸ್ವಿ ಗಾಯನ ನೆರವೇರಿಸಿ ಸೈ ಎನಿಸಿಕೊಂಡಿತು.

ಈ ಕಲಾ ತಂಡಕ್ಕೆ ಸದಾ ಬೆನ್ನೆಲುಬಾಗಿ ಭೋವಿ ಗುರುಪೀಠದ ಪರಮ ಪೂಜ್ಯ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿಯವರು ಹರಸಿ ಹಾರೈಸಿ ಪೋಷಿಸುತ್ತಿದ್ದಾರೆ. ಈಗಾಗಲೇ ಈ ತಂಡವು ರಾಜ್ಯ ಮತ್ತು ಹೊರ ರಾಜ್ಯದ ಮುಖ್ಯ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಲಾ ಪ್ರದರ್ಶನ ನೀಡಿ ಯಶಸ್ವಿಯಾಗಿರುತ್ತಾರೆ. ಕಲಾ ತಂಡವನ್ನು ಯಶಸ್ವಿಯಾಗಿ ಮುನ್ನಡಿಸಿಕೊಂಡು ಹೋಗುತ್ತಿರುವ ಎಂ. ನುಂಕೇಶ್ ರವರ ಕಲಾ ಸೇವೆ ಶ್ಲಾಘ ನೀಯವಾದುದ್ದು ಎಂದು ಕೆ.ಪಿ.ಸಿ.ಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಪ್ಪ ನೇರಲಗುಂಟೆ ರವರು ಅಭಿನಂದಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...