Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀಗುರು ತಿಪ್ಪೇರುದ್ರಸ್ವಾಮಿ ನೂತನ ಶಿಲಾ ದೇವಸ್ಥಾನ ನಿರ್ಮಾಣ : ಆ. 16 ರಂದು ಸಲಹಾ ಸಮಿತಿ ಸಭೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

 

ಸುದ್ದಿಒನ್, ಚಿತ್ರದುರ್ಗ ಆ. 14 :
ನಗರದ ಕೆಳಗೋಟೆಯ ತುರುವನೂರು ರಸ್ತೆಯಲ್ಲಿನ ಶ್ರೀ ತಿಪ್ಪೇರುದ್ರಸ್ವಾಮಿ ಟ್ರಸ್ಟ್ (ರಿ) ವತಿಯಿಂದ ಶ್ರೀಗುರು ತಿಪ್ಪೇರುದ್ರಸ್ವಾಮಿ ನೂತನ ಶಿಲಾ ದೇವಸ್ಥಾನ ನಿರ್ಮಾಣ ಮಾಡಲು ಸಲಹಾ ಸಮಿತಿ ರಚಿಸಲು ಚರ್ಚಿಸುವ ಸಲುವಾಗಿ ಆ. 16ರ ಭಾನುವಾರ ಬೆಳಿಗ್ಗೆ 10.30ಕ್ಕೆ ಸಲಹಾ ಸಮಿತಿ ರಚಿಸುವ ಸಲುವಾಗಿ ಸಭೆಯನ್ನು ಶ್ರೀ ತಿಪ್ಪೇರುದ್ರಸ್ವಾಮಿ ಟ್ರಸ್ಟ್ ಆವರಣದಲ್ಲಿ ಕರೆಯಲಾಗಿದೆ ಎಂದು ಕಾರ್ಯದರ್ಶಿ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೆಸರಾಂತ ಕಾಯಕಯೋಗಿ ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಚಿತ್ರದುರ್ಗ ನಗರದ ತುರುವನೂರು ರಸ್ತೆ ಕೆಳಗೋಟೆಯಲ್ಲಿ ಹಳೆಯ ಹೆಂಚಿನ ಮತ್ತು ಶೀಟ್‍ನಿಂದ ಇದ್ದ ದೇವಸ್ಥಾನವು ಶಿಥಿಲವಾಗಿ ದ್ದರಿಂದ ಈ ಜಾಗದಲ್ಲಿ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಶಿಲಾ ದೇವಸ್ಥಾನ ನಿರ್ಮಿಸಲು 1ಕೋಟಿ ಹಣವು ಬೇಕಾಗಿರುವುದರಿಂದ ಧನ ಸಂಗ್ರಹಣೆ ಮಾಡಲು ಸಲಹಾ ಸಮಿತಿ ರಚಿಸುವ ಸಲುವಾಗಿ ಆ. 16ರ ಭಾನುವಾರ ಬೆಳಿಗ್ಗೆ 10.30ಕ್ಕೆ ಸಭೆಯನ್ನು ಕರೆಯಲಾಗಿದೆ ಈ ಸಭೆಯ ಸಾನಿಧ್ಯವನ್ನು ಕರುವಿನಕಟ್ಟೆಯ ಶ್ರೀಸದ್ಗುರು ಕಬೀರಾನಂದಾಶ್ರಮದ ಶ್ರೀಸದ್ಗುರು ಶಿವಲಿಂಗಾನಂದಸ್ವಾಮೀಜಿಯವರ ವಹಿಸಲಿದ್ದಾರೆ. ತಾವುಗಳು ಸಭೆಗೆ ಆಗಮಿಸಿ ಸಲಹೆ ಮತ್ತು ಮಾರ್ಗದರ್ಶನ ನೀಡಲು ಮನವಿ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now