ಈ ಕಾರಣಕ್ಕಾಗಿ ಶೃಂಗೇರಿ ಕಾಂಗ್ರೆಸ್ ಶಾಸಕ ಟಿ ಡಿ‌ ರಾಜೇಗೌಡ ಕಣ್ಣೀರು

1 Min Read

ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಕಣ್ಣೀರಿಟ್ಟಿದ್ದಾರೆ. ತಮ್ಮ ಕುಟುಂಬವನ್ನು ಬೀದಿಗೆ ತಂದು ನಿತ್ಯ ಕೋರ್ಟ್ಗೆ ಅಲೆದಾಡುವ ಸ್ಥಿತಿ ನಿರ್ಮಿಸಿದ್ದಾರೆ ಎಂದು ಆರೋಪಿಸಿ ಶಾಸಕರು ಕಣ್ಣೀರಿಟ್ಟಿದ್ದಾರೆ.

ನನ್ನ ಮನೆಯನ್ನು ಹಾಳು ಮಾಡಿದ್ದೀರಿ, ಅನ್ಯಾಯ ಮಾಡಿದ್ದೀರಿ , ನಾನು ಸಾಲ ಮಾಡಿದ್ದೇನೆ, ನಾನು ಜನಕ್ಕೆ ಅನ್ಯಾಯವನ್ನು ಮಾಡಿಲ್ಲ, ನಾನು ಈ ಸಭೆ ಮೂಲಕ ಒಂದು ಘೋಷಣೆ ಮಾಡುತ್ತೇನೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ, ಯಾರಾದರೂ ನಿಲ್ಲಲಿ ಆದರೆ ಕೆಟ್ಟ ಮನಸ್ಥಿತಿಯ ವ್ಯಕ್ತಿ ಮತ್ತೆ ಶಾಸಕನಾಗಬಾರದು ಶಾಸಕರಾದರೆ ಈ ಕ್ಷೇತ್ರಕ್ಕೆ ದೊಡ್ಡ ಮಾರಕ, ಯಾರ ಮನೆ ಹೆಣ್ಣು ಮಕ್ಕಳನ್ನು ಏನ್ ಮಾಡ್ತಾರೋ ಗೊತ್ತಿಲ್ಲ ಎಂದು ಮಾಜಿ ಶಾಸಕ ಡಿ ಎನ್ ಜೀವರಾಜ್ ಹೆಸರು ಹೇಳದೆಯೇ ಹಾಲಿ ಶಾಸಕ ರಾಜೇಗೌಡ ಕಣ್ಣೀರು ಹಾಕಿದ್ದಾರೆ.

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡುತ್ತಿದ್ದಾರೆ, ನಾನು ಈ ಸಮಾವೇಶದ ಮೂಲಕ ಒಂದು ಘೋಷಣೆ ಮಾಡುತ್ತಿದ್ದೇನೆ, ಈ ಕ್ಷೇತ್ರದಲ್ಲಿ ಜನರಿಗೆ ವಿನಾಕಾರಣ ತೊಂದರೆ ಕೊಡುತ್ತಾ, ಮಹಿಳೆಯರಿಗೆ ತೊಂದರೆ ಕೊಟ್ಟಿರುವುದನ್ನು ಮನದಟ್ಟು ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸಲ್ಲ ಅಂತ ಘೋಷಣೆ ಮಾಡಲಿ ಎಂದು ಜೀವರಾಜ್ ಹೆಸರು ಹೇಳದೇ ಶಾಸಕ ರಾಜೇಗೌಡ ಸವಾಲು ಹಾಕಿದ್ದಾರೆ.

Share This Article
Enable Notifications OK No thanks