Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೌದ್ಧ ಧರ್ಮದಂತೆ ಇಂದು ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ : ಚಾಮರಾಜನಗರ ಜಿಲ್ಲೆಯಾದ್ಯಂತ ಶಾಲೆಗೆ ರಜೆ..!

Facebook
Twitter
Telegram
WhatsApp

ಚಾಮರಾಜನಗರ: ಹೃದಯಾಘಾತದಿಂದ ನಿನ್ನೆ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನರಾಗಿದ್ದಾರೆ. ದಲಿತ ಸೂರ್ಯ ಎಂದೇ ಖ್ಯಾತರಾಗಿದ್ದವರು ಶ್ರೀನಿವಾಸ್ ಪ್ರಸಾದ್. ಇವರ ದಿಢೀರ್ ನಿಧನ ರಾಜಕೀಯ ವಲಯಕ್ಕೆ ದಿಗ್ಬ್ರಮೆಗೊಳಿಸಿದೆ. ಯಾಕಂದ್ರೆ ಇತ್ತಿಚೆಗಷ್ಟೇ ಲೋಕಸಭಾ ಚುನಾವಣೆಗೂ ಮುನ್ನ ಬೆಂಬಲ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ಅವರನ್ನು ಮಾತನಾಡಿಸಿಕೊಂಡು ಬಂದಿದ್ದರು. ಮಗನ ರಾಜಕೀಯ ಭವಿಷ್ಯದ ಭರವಸೆ ನೀಡಿದ್ದರು. ಆದರೆ ಇದ್ದಕ್ಕಿದ್ದ ಹಾಗೇ ಶ್ರೀನಿವಾಸ್ ಪ್ರಸಾದ್ ಎಲ್ಲರನ್ನು ಬಿಟ್ಟು ದೂರ ಹೋದರೆ ಯಾರಿಗೆ ತಾನೇ ನಂಬಲು ಸಾಧ್ಯ, ಅರಗಿಸಿಕೊಳ್ಳಲು ಸಾಧ್ಯ.

 

ಶ್ರೀನಿವಾಸ್ ಪ್ರಸಾದ್ ದಲಿತರ ಧೀಮಂತ ನಾಯಕರಾಗಿದ್ದವರು. ಚಾಮರಾಜನಗರದ ಸಂಸದರಾಗಿ, ನಂಜನಗೂಡಿನ ಶಾಸಕರಾಗಿ ಸೇವೆ ಸಲ್ಲಿಸಿದವರು. ಆದರೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಅವರ ಅಂತ್ಯಕ್ರಿಯೆ ಮೈಸೂರಿನಲ್ಲಿ ನಡೆಯಲಿದೆ. ಬೌದ್ಧ ಧರ್ಮದ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ. ಮಾನಂದವಾಡಿಯಲ್ಲಿರುವ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಶ್ರೀನಿವಾಸ್ ನಿಧನದ ಹಿನ್ನೆಲೆ ಮೈಸೂರು, ಚಾಮರಾಜನಗರ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಂತ್ಯಕ್ರಿಯೆಗೂ ಮುನ್ನ ಮೈಸೂರಿನ ಅಶೋಕಪುರಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಂತಿಮ ದರ್ಶನ ಪಡೆದಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಬ್ಬ ಸ್ನೇಹಿತನನ್ನು ಕಳೆದುಕೊಂಡು ದುಃಖವಾಗಿದೆ ಎಂದರು. ಯಾಕಂದ್ರೆ ಬಹಳ ವರ್ಷಗಳ ಸ್ನೇಹಿತರು ಸಿಎಂ ಸಿದ್ದರಾಮಯ್ಯ ಹಾಗೂ ಶ್ರೀನಿವಾಸ್ ಪ್ರಸಾದ್. ಆದರೆ ಯಾವುದೋ ಕಾರಣಕ್ಕೋ ದೂರವಿದ್ದರು. ಇತ್ತಿಚೆಗಷ್ಟೇ ಮುನಿಸು ಮರೆತು ಮಾತನಾಡಿದ್ದರು. ಆದರೆ ಇಂದು ಸ್ನೇಹಿತನೇ ಇಲ್ಲ. ಇದು ಸಿಎಂ ಸಿದ್ದರಾಮಯ್ಯ ಅವರಿಗೆ ಅತೀವ ದುಃಖ ತಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

High Blood Pressure : ಅಧಿಕ ರಕ್ತದೊತ್ತಡ ಎಷ್ಟು ಅಪಾಯಕಾರಿ ಗೊತ್ತಾ ?

ಸುದ್ದಿಒನ್ : ಅಧಿಕ ರಕ್ತದೊತ್ತಡ ಎನ್ನುವುದು ಒಂದು ರೀತಿಯ ಸೈಲೆಂಟ್ ಕಿಲ್ಲರ್ ಇದ್ದಂತೆ. ಈ ಸಮಸ್ಯೆ ಇದ್ದರೆ ಪ್ರತಿದಿನ ವೈದ್ಯರ ಸಲಹೆಯಂತೆ ಔಷಧಿ ತೆಗೆದುಕೊಳ್ಳಬೇಕು. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು?

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು? ಮಂಗಳವಾರ ರಾಶಿ ಭವಿಷ್ಯ -ಮೇ-21,2024 ನರಸಿಂಹ ಜಯಂತಿ ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!