ಯತ್ನಾಳ್ ಉಚ್ಛಾಟನೆ ಬಳಿಕ ಎಚ್ಚೆತ್ತ ಶ್ರೀರಾಮುಲು ; ಯುಗಾದಿಗೆ ಯಡಿಯೂರಪ್ಪ ‌- ವಿಜಯೇಂದ್ರ ಭೇಟಿ..!

ಬೆಂಗಳೂರು; ಯಡಿಯೂರಪ್ಪ ಅವರ ವಿರುದ್ಧ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಸದಾ ಕಾಲ ಆಕ್ರೋಶ ಹೊರ ಹಾಕುತ್ತಿದ್ದ ಶಾಸಕ ಯತ್ನಾಳ್ ಅವರನ್ನ ಬಿಜೆಪಿ ಉಚ್ಛಾಟನೆ ಮಾಡಿದೆ. ಯತ್ನಾಳ್ ಜೊತೆಗೇನೆ ಗುರುತಿಸಿಕೊಂಡಿದ್ದರು ಶ್ರೀರಾಮುಲು. ಇದೀಗ ಯತ್ನಾಳ್ ಅವರ ಉಚ್ಛಾಟನೆ ಬಳಿಕ ಶ್ರೀರಾಮುಲು ಬದಲಾಗಿದ್ದಾರೆ ಎನ್ನಲಾಗಿದೆ. ಯುಗಾದಿ ಹಬ್ಬದ ಪ್ರಯುಕ್ತ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಭೇಟಿಯಾಗಿ, ಶುಭಕೋರಿದ್ದಾರೆ.

ಶ್ರೀರಾಮುಲು ಕೂಡ ವಿಜಯೇಂದ್ರ ಅವರ ವಿರುದ್ಧವೇ ಮಾತನಾಡಿದ್ದರು. ಕೇವಲ ಒಂದು ತಿಂಗಳ ಹಿಂದಷ್ಟೇ ವಿಜಯೇಂದ್ರಗೆ ಅನುಭವ ಸಾಲದು ಎಂಬ ಮಾತುಗಳನ್ನ ಆಡಿದ್ದರು. ಅಷ್ಟೇ ಅಲ್ಲ ಬಿಜೆಪು ರಾಜ್ಯಾಧ್ಯಕ್ಷ ಹುದ್ದೆಯ ರೇಸ್ ನಲ್ಲಿಯೂ ಇದ್ದರು. ಈಗ ದಿಢೀರನೇ ವರಸೆ ಬದಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಬೇಕೆಂದು ಹಲವರು ಒಂದೆಡೆ ಸೇರಿದ್ದರು. ಅದರಲ್ಲಿ ಶಾಸಕ ಯತ್ನಾಳದ, ಕುಮಾರ ಬಂಗಾರಪ್ಪ, ಬಿಪಿ ಹರೀಶ್, ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ ಬಳಿಕ ಸೇರ್ಪಡೆಯಾದವರೆ ಶ್ರೀರಾಮುಲು.

 

ಯಾವಾಗ ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿದರೋ ವರಸೆ ಬದಲಿಸಿದಂತೆ ಕಾಣಿಸುತ್ತಿದೆ. ಅದಕ್ಕೆ ಪುಷ್ಠಿ ನೀಡುವಂತೆ ಶ್ರೀರಾಮುಲು ಫೋಟೋ ಒಂದನ್ನ ಹಂಚಿಕೊಂಡಿದ್ದಾರೆ. ಅದಕ್ಕೆ ಕ್ಯಾಪ್ಶನ್ ಕೂಡ ನೀಡಿದ್ದು, ‘ಮಾಜಿ ಮುಖ್ಯಮಂತ್ರಿಗಳು, ಪಕ್ಷದ ಹಿರಿಯರು, ಹುಟ್ಟು ಹೋರಾಟಗಾರರಾದಂತಹ ಯಡಿಯೂರಪ್ಪ ಜೀ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರ ಜೊತೆಗೆ ಭೇಟಿ ಮಾಡಿ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿದೆ. ಈ ವೇಳೆ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತು ಪಕ್ಷ ಸಂಘಟನೆಯ ಬಗ್ಗೆ ಹಲವು ವಿಚಾರಗಳ ಚರ್ಚೆ ಮಾಡಲಾಯ್ತು’ ಎಂದು ಬರೆದುಕೊಂಡಿದ್ದಾರೆ.

suddionenews

Recent Posts

ವಿಧಾನಪರಿಷತ್ ಸ್ಥಾನಕ್ಕೆ ಡಿಮ್ಯಾಂಡ್ ; ಸಿದ್ದರಾಮಯ್ಯ ನೀಡಿದ ಹೆಸರುಗಳು ಯಾವು..?

ಬೆಂಗಳೂರು; ಖಾಲಿ ಇರುವ ವಿಧಾನಪರಿಷತ್ ಸದಸ್ಯ ಸ್ಥಾನ ತುಂಬುವ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದೆಹಲಿಯಲ್ಲಿ…

1 hour ago

ಸರ್ಕಾರಿ ಜಮೀನು ಒತ್ತುವರಿ ಆರೋಪ ; ಸೈಲೆಂಟ್ ಆಗಿದ್ದ ಹೆಚ್ಡಿಕೆ ಸಿಡಿದೆದ್ದು ಹೇಳಿದ್ದೇನು..?

    ಬೆಂಗಳೂರು; ಕೇತಗಾನಹಳ್ಳಿಯಲ್ಲಿ ಸರ್ಕಾರಿ ಒತ್ತುವರಿ ಆರೋಪ ಹೊತ್ತಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸರ್ವೇ ಆದರೂ ಕೂಡ ಸೈಲೆಂಟ್…

2 hours ago

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 05 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ಏಪ್ರಿಲ್. 05)ಹತ್ತಿ ಮಾರುಕಟ್ಟೆ ಇದ್ದು,…

2 hours ago

ಪಿತ್ತ ಬೇಗ ಕಡಿಮೆ ಆಗ್ಬೇಕು ಅಂದ್ರೆ ಹೀಗೆ ಮಾಡಿ

ಸಾಕಷ್ಟು ಜನರಿಗೆ ಪಿತ್ತದ ಸಮಸ್ಯೆ ಇರುತ್ತದೆ.‌ ಪಿತ್ತ ಜಾಸ್ತಿಯಾದಷ್ಟು ಮನುಷ್ಯನಿಗೆ ಕಂಫರ್ಟಬಲ್ ಇರುವುದೇ ಇಲ್ಲ. ಪಿತ್ತ ಹೆಚ್ಚಾದರೆ ತಲೆ ಸುತ್ತು…

10 hours ago

ಈ ರಾಶಿಯ ಮಠದ ಸಾರಥ್ಯ ಹೊಂದಿದವರಿಗೆ ತೊಂದರೆ

ಈ ರಾಶಿಯ ಮಠದ ಸಾರಥ್ಯ ಹೊಂದಿದವರಿಗೆ ತೊಂದರೆ, ಈ ರಾಶಿಯ ಗಂಡ ಹೆಂಡತಿ ಎಷ್ಟುಚೆನ್ನಾಗಿದ್ದರೆ ಗೊತ್ತು, ಶನಿವಾರದ ರಾಶಿ ಭವಿಷ್ಯ…

11 hours ago

ದೇಶದ ಮೊದಲ ಹಿಂದೂ ಗ್ರಾಮಕ್ಕೆ ಶಂಕುಸ್ಥಾಪನೆ : ಈ ಗ್ರಾಮದ ವಿಶೇಷತೆ ಏನು ಗೊತ್ತಾ ?

  ಸುದ್ದಿಒನ್ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿರುವ ಬಾಗೇಶ್ವರ ಧಾಮ ಪೀಠದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ಏಪ್ರಿಲ್ 2 ರಂದು…

18 hours ago