Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್‌ ಆರ್‌ ಎಸ್‌ ಚಾಣಕ್ಯ -2024 ಫೌಂಡೇಷನ್‌ ತರಗತಿಗಳು ಆರಂಭ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.15 :  ಹತ್ತನೇ ತರಗತಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಮುಂದೆ ಪಿಯುಸಿಯಲ್ಲಿ ಕಲಿಯಬೇಕಾದ ವಿಜ್ಞಾನ ವಿಷಯಗಳ ಬಗ್ಗೆ ಚಿತ್ರದುರ್ಗದ ಎಸ್ ಆರ್ ಎಸ್ ಪಿಯು ಕಾಲೇಜಿನಲ್ಲಿ  ನುರಿತ ಅನುಭವಿ ಉಪನ್ಯಾಸಕರಿಂದ ಬಹು ಆಯ್ಕೆ ಮಾದರಿಯಲ್ಲಿ ನೀಟ್‌, ಜೆಇಇ, ಸಿಇಟಿ ಪರೀಕ್ಷೆಗಳಿಗೆ ಅನುಗುಣವಾಗಿ ಸುಮಾರು 25 ದಿನಗಳ ಕಾಲ ನಡೆಯುವ ಚಾಣಕ್ಯ ಫೌಂಡೇಷನ್‌ ತರಗತಿಗಳ ಬೇಸಿಗೆ ಶಿಬಿರ ಏಪ್ರಿಲ್‌ 15ರಂದು ಉದ್ಘಾಟನೆಯಾಯಿತು.

ಕಾರ್ಯಕ್ರಮದ ಅಧ್ಯಕ್ಷೆತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ. ರವಿ ಟಿ.ಎಸ್‌ ಅವರು ಓರ್ವ ವ್ಯಕ್ತಿ ಜಗತ್ತಿಲ್ಲಿ ಶ್ರೀಮಂತ ಎನಿಸಿಕೊಳ್ಳಬೇಕಾದರೆ ಹಣದಿಂದಲ್ಲ, ಜ್ಞಾನದಲ್ಲಿ ಶ್ರೀಮಂತನಾಗಬೇಕು ಎಂದು ಹೇಳುತ್ತಾ ಸ್ಫೂರ್ತಿದಾಯಕ ಮಾತುಗಳನ್ನಾಡಿದರು.

ನೀಟ್‌, ಜಿಇಇ, ತರಬೆತಿಯ ಸಂಚಾಲಕರಾದ ಶ್ರೀ ಶ್ರೀನಿವಾಸ ಕುಮಾರ್‌ ಡಿ, ಹಾಗೂ ಶ್ರೀ ಅಮಾನ್‌ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಅಂಕಗಳಿಗಿಂತ ಸಂಸ್ಕಾರ ಮುಖ್ಯ ಎಂದು ಹೇಳಿದರು.

ಕನ್ನಡ ಉಪನ್ಯಾಸಕರಾದ ಅಣ್ಣಪ್ಪ  ಎಚ್‌. ಇವರು ಕಾರ್ಯಕ್ರಮವನ್ನು ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಉಪ ಪ್ರಾಂಶುಪಾಲರಾದ ಶ್ರೀ ಮನೋಹರ ಬಿ ಅವರು ನೀಟ್‌, ಜೆಇಇ ಹಾಗೂ ಸಿಇಟಿ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...