Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

SSLC ಪರೀಕ್ಷೆ ವೇಳೆ ಶಿವಮೊಗ್ಗದಲ್ಲಿ ಹೃದಯಸ್ಪರ್ಶಿ ಘಟನೆ : ವಿಡಿಯೋ ಕಾಲ್ ನಲ್ಲಿಯೇ ಅಪ್ಪನ ಅಂತ್ಯ ಸಂಸ್ಕಾರ..!

---Advertisement---

 

 

ಶಿವಮೊಗ್ಗ: ರಾಜ್ಯದೆಲ್ಲೆಡೆ ಎಸ್ಎಸ್ಎಲ್ಸಿ ಎಕ್ಸಾಂ ಶುರುವಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟ ಕೂಡ. ಈ ಸಮಯವನ್ನ ವಿದ್ಯಾರ್ಥಿಗಳು ಮಿಸ್ ಮಾಡಿಕೊಳ್ಳುವ ಹಾಗೆಯೇ ಇಲ್ಲ. ಆದರೆ ಕೆಲವೊಮ್ಮೆ ಪರಿಸ್ಥಿತಿ ಕೆಟ್ಟದಾದಾಗ ಆ ವರ್ಷ ಮಕ್ಕ ಭವಿಷ್ಯವೇ ಹಾಳಾದಂತೆ ಆಗುತ್ತದೆ. ಎಸ್ಎಸ್ಎಲ್ಸಿ ಎಕ್ಸಾಂ ಸಮಯದಲ್ಲಿ ಒಂದು ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.

ಆರ್ಶೀಯಾ ಮನಿಯಾರ್ ಕೊಪ್ಪಳದ‌ ನಿವಾಸಿ. ಆದ್ರೆ ಶಿವಮೊಗ್ಗದ ಹೊಸನಗರ ತಾಲೂಕಿನ ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದಾರೆ. ಇಂದು ಇಂಗ್ಲೀಷ್ ಪರೀಕ್ಷೆ ಇತ್ತು. ಆದರೆ ಪರೀಕ್ಷೆ ಸಮಯದಲ್ಲಿಯೇ ಆಕೆಯ ತಂದೆ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ವಸತಿ ಶಾಲೆಯ ಶಿಕ್ಷಕರು ಆರ್ಶೀಯಾಳನ್ನು ಕೊಪ್ಪಳಕ್ಕೆ‌ ಕರೆದೊಯ್ದರು. ತಂದೆಯ ದರ್ಶನ ಮಾಡಿಸಿ, ಬಳಿಕ ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆದರೆ ಶವಸಂಸ್ಕಾರಕ್ಕೆ ಸಮಯವಾಗಿದ್ದ ಕಾರಣ, ಪರೀಕ್ಷೆ ಮುಗಿದ ಕೂಡಲೇ, ವಿದ್ಯಾರ್ಥಿನಿಗೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...