ಚಿತ್ರದುರ್ಗ, ಮಾರ್ಚ್ 21: ಮಾರ್ಚ್ 21ರಂದು ನಡೆದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1ರ ಕನ್ನಡ ವಿಷಯದ ಪರೀಕ್ಷೆಗೆ ಒಟ್ಟು 22,229 ವಿದ್ಯಾರ್ಥಿಗಳು ಹಾಜರಾಗಿದ್ದು, 943 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಜಿಲ್ಲೆಯಲ್ಲಿ ಕನ್ನಡ ವಿಷಯದ ಪರೀಕ್ಷೆಗೆ 23,172 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ಚಳ್ಳಕೆರೆ ತಾಲ್ಲೂಕಿನಲ್ಲಿ 4,911 ವಿದ್ಯಾರ್ಥಿಗಳು, ಚಿತ್ರದುರ್ಗ-6,276, ಹಿರಿಯೂರು-3,389, ಹೊಳಲ್ಕೆರೆ-2,596, ಹೊಸದುರ್ಗ-2,865 ಹಾಗೂ ಮೊಳಕಾಲ್ಮುರು-2,192 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 22,229 ವಿದ್ಯಾರ್ಥಿಗಳು ಹಾಜರಾಗಿ, 943 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯ 82 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆಯಿತು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ತಿಳಿಸಿದ್ದಾರೆ.


