Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

SSLC ಪೂರ್ವ ಸಿದ್ಧತಾ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ : ಶಿಕ್ಷಕರ ಬಂಧನ..!

---Advertisement---

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ಮಕ್ಕಳನ್ನ ಸಿದ್ಧ ಮಾಡಲು ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯೂ ಬಹಳ ಮುಖ್ಯ. ಮಕ್ಕಳಲ್ಲಿ ಧೈರ್ಯ, ಸ್ಪೂರ್ತಿಯನ್ನ ಈ ಪರೀಕ್ಷೆಯಿಂದಾನೇ ತುಂಬ ಬೇಕಾದ ಶಿಕ್ಷಕರೇ ಇಲ್ಲಿಯೇ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ, ಸಿಕ್ಕಿ ಬಿದ್ದಿದ್ದಾರೆ. ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಅಪರಾಧ ಪೊಲೀಸರು 10ನೇ ತರಗತಿ ಪೂರ್ವ ಸಿದ್ಧತಾ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ 6 ಜನ ಶಿಕ್ಷಕರೇ ಆರೋಪಿಗಳಾಗಿದ್ದಾರೆ.

ತುಮಕೂರು ಶಾಲೆಯೊಂದರ ಮುಖ್ಯೋಪಾಧ್ಯಾಯ ಗಿರೀಶ್ ವಿ.ಡಿ, ರಾಮನಗರ ಶಾಲೆಯ ಸಹಾಯಕ ಶಿಕ್ಷಕರಾದ ಅಹ್ಮದ್ ಖಾನ್, ಶಾಹಿದಾ ಬೇಗಂ, ಶಿಕ್ಷಕಿ ಫಹ್ಮಿದಾ, ಶಿಕ್ಷಕ ಮೊಹಮ್ಮದ್ ಸಿರಾಜುದ್ದಿನ್, ಕೆ ಫರ್ಜಾನಾ ಬೇಗಂ ಅವರು ಬಂಧಿತರು. ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದೆ ಇವರ ಕೈವಾಡವಿದೆ ಎನ್ನಲಾಗಿದ್ದು, ತನಿಖೆ ನಡೆಸುತ್ತಿದ್ಸಾರೆ.

ಖಾಸಗಿ ಸಂದೇಶಗಳ ಮೂಲಕ 200 ರಿಂದ 500 ರೂ.ಗಳವರೆಗೆ ಪ್ರಶ್ನೆ ಪತ್ರಿಕೆ ಮಾರಾಟ ಮಾಡಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಕೇವಲ 200, 300 ರೂಪಾಯಿಗೆಲ್ಲಾ ಮಕ್ಕಳ ಭವಿಷ್ಯದ ಜೊತೆಗೆ ಶಿಕ್ಷಕರೇ ಆಟವಾಡಿರುವುದು ವಿಪರ್ಯಾಸವೇ ಸರಿ. ಸೋಷಿಯಲ್ ಮೀಡಿಯಾದಲ್ಲಿಯೇ ನಮ್ಮ ಬಳಿ ಪತ್ರಿಕೆಗಳು ಸಿಗಲಿವೆ ಎಂಬ ಪೋಸ್ಟ್ ಅನ್ನ ಹಾಕಿಕೊಂಡಿದ್ದರು. ಸಂಪರ್ಕಿಸಿದ ವಿದ್ಯಾರ್ಥಿಗಳ ಬಳಿ ಇಂತಿಷ್ಟು ಹಣ ಎಂದು ಡಿಮ್ಯಾಂಡ್ ಮಾಡಿದ್ದಾರೆ. ಹಣ ಕೊಟ್ಟ ವಿದ್ಯಾರ್ಥಿಗಳಿಗೆ ಪತ್ರಿಕೆಗಳನ್ನ ನೀಡಲಾಗಿದೆ. ಸದ್ಯ ಆರೋಪಿಗಳನ್ನ ಬಂಧಿಸಿದ್ದು, ತನಿಖೆ ನಡೆಸಲಿದ್ದಾರೆ. ಮಕ್ಕಳ ಭವಿಷ್ಯಕ್ಕೆ ಬುನಾದಿಯಾಗಬೇಕಾದ ಶಿಕ್ಷಕರೇ ಈ ರೀತಿ ಮಾಡಿದರೆ ಹೇಗೆ ಎಂಬ ಪ್ರಶ್ನೆ ಮೂಡಿದೆ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now