Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : 620 ಅಂಕಗಳೊಂದಿಗೆ ನಾಲ್ವರು ವಿದ್ಯಾರ್ಥಿಗಳು ಪ್ರಥಮ : ಜಿಲ್ಲೆಯ ಸಂಪೂರ್ಣ ಮಾಹಿತಿ ಇಲ್ಲಿದೆ….!

Facebook
Twitter
Telegram
WhatsApp

ಚಿತ್ರದುರ್ಗ. ಮೇ.09:  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಶೇ.72.85 ಫಲಿತಾಂಶ ಲಭಿಸಿದೆ. ಜಿಲ್ಲೆಯ 14 ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ.

ಚಿತ್ರದುರ್ಗ ನಗರದ ವಿದ್ಯಾವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅಭಯ್.ಸಿ.ಐ, ಹಿರಿಯೂರಿನ ರಾಷ್ಟೀಯ ಅಕಾಡೆಮಿ ಇಂಗ್ಲೀಷ್ ಶಾಲೆಯ ಹಿರಣ್ಯಮಯೈ.ಎಂ.ಎಸ್, ತನುಶ್ರೀ.ಟಿ. ಮೊಳಕಾಲ್ಮೂರಿನ ಸರ್.ಎಂ.ವಿ ಆಂಗ್ಲ ಮಾಧ್ಯಮ ಶಾಲೆಯ ಅಸರ್ ಮಹೀನ್.ಎಂ 625 ಅಂಕಗಳಿಗೆ 620 ಅಂಕ ಗಳಿಸಿದ್ದಾರೆ.

ಚಿತ್ರದುರ್ಗ ನಗರದ ಡಾನ್ ಬಾಸ್ಕೋ ಶಾಲೆಯ ಭುವನೇಶ್ವರಿ ಜಿ.ಎಸ್. ಹಿರಿಯೂರಿನ ರಾಷ್ಟೀಯ ಅಕಾಡೆಮಿ ಇಂಗ್ಲೀಷ್ ಶಾಲೆಯ ಪೂಜಿತಾ.ಎಸ್, ಶ್ರೀ ಮೋಕ್ಷಗುಂಡ ವಿಶ್ವೇಶ್ವರಯ್ಯ ಶಾಲೆಯ ಎಸ್.ಪ್ರೀತಿ, ಹೊಳಲ್ಕೆರೆಯ ಎಸ್.ಜೆ.ಎಂ.ಇಂಗ್ಲೀಷ್ ಮೀಡಿಯಂ ಶಾಲೆಯ ನಂದನ್.ಸಿ.ಕೆ 625 ಅಂಕಗಳಿಗೆ 618 ಅಂಕ ಗಳಿಸಿದ್ದಾರೆ.

ಚಿತ್ರದುರ್ಗ ನಗರದ ವಿದ್ಯಾ ವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಅಭಿನವ್.ಕೆ.ಆರ್, ಭರಮಸಾಗರದ ಡಿ.ವಿ.ಎಸ್ ಇಂಗ್ಲೀಷ್ ಮೀಡಯಂ ಶಾಲೆಯ ಭಾವನ.ಹೆಚ್.ಎಂ, ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಅಕಾಡಮಿ ಶಾಲೆಯ ಸೃಜನ್ ಸಾಗರ್ ಆರ್.ಕೆ., ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯ ನವ್ಯಶ್ರೀ.ಆರ್. ಮೊರಾರ್ಜಿ ದೇಸಾಯಿ ಶಾಲೆಯ ಸಂಜಯ್.ಎಸ್ ಹಾಗೂ ಹಿರಿಯೂರು ನಗರದ ಪ್ರೆಸಿಡೆನ್ಸಿ ಇಂಗ್ಲೀಷ್ ಶಾಲೆಯ ಮನೋಜ್ಞ.ಜಿ.ಪಿ 625 ಅಂಕಗಳಿಗೆ 616 ಅಂಕ ಗಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ 22,275 ವಿದ್ಯಾರ್ಥಿಗಳಲ್ಲಿ 16,227 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.72.85 ಫಲಿತಾಂಶದೊAದಿಗೆ ಚಿತ್ರದುರ್ಗ ಜಿಲ್ಲೆಯು 21ನೇ ಸ್ಥಾನ ಪಡೆದುಕೊಂಡಿದೆ. 11107 ಬಾಲಕರು, 11168 ಬಾಲಕಿಯರು ಸೇರಿದಂತೆ ಒಟ್ಟು 22, 275 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದರು.

ಈ ಪೈಕಿ 7207 ಬಾಲಕರು, 9020 ಬಾಲಕಿಯರು ಸೇರಿದಂತೆ ಒಟ್ಟು 16,227 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು ಪಲಿತಾಂಶದಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದು, ಚಿತ್ರದುರ್ಗ ಜಿಲ್ಲೆಯು ಈ ಬಾರಿ ರಾಜ್ಯದ ಜಿಲ್ಲೆಗಳ ಪೈಕಿ 21ನೇ ಸ್ಥಾನ ಪಡೆದಿದೆ.

ಚಳ್ಳಕೆರೆ ತಾಲ್ಲೂಕಿನಲ್ಲಿ 1753 ಬಾಲಕರು, 1932 ಬಾಲಕಿಯರು ಸೇರಿದಂತೆ ಒಟ್ಟು 3685 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 1830 ಬಾಲಕರು, 2349 ಬಾಲಕಿಯರು ಸೇರಿದಂತೆ ಒಟ್ಟು 4179 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಹಿರಿಯೂರು ತಾಲ್ಲೂಕಿನಲ್ಲಿ 1140 ಬಾಲಕರು, 1496 ಬಾಲಕಿಯರು ಸೇರಿದಂತೆ ಒಟ್ಟು 2636 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 900 ಬಾಲಕರು, 1174 ಬಾಲಕಿಯರು ಸೇರಿದಂತೆ ಒಟ್ಟು 2074 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಹೊಸದುರ್ಗ ತಾಲ್ಲೂಕಿನಲ್ಲಿ 917 ಬಾಲಕರು, 1231 ಬಾಲಕಿಯರು ಸೇರಿದಂತೆ ಒಟ್ಟು 2148 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ 667 ಬಾಲಕರು, 838 ಬಾಲಕಿಯರು ಸೇರಿದಂತೆ 1505 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಹೊಳಲ್ಕೆರೆ ಫಸ್ಟ್: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಹೊಳಲ್ಕೆರೆ ತಾಲ್ಲೂಕು ಶೇ.81.21 ಫಲಿತಾಂಶ ಪಡೆಯುವ ಮೂಲಕ ಮೊದಲ ಸ್ಥಾನಗಳಿಸಿದೆ. ಉಳಿದಂತೆ ಚಿತ್ರದುರ್ಗ ಶೇ.68.27, ಹಿರಿಯೂರು-75.04, ಹೊಸದುರ್ಗ-70.06, ಮೊಳಕಾಲ್ಮುರು ತಾಲ್ಲೂಕು ಶೇ.71.91ರಷ್ಟು ಫಲಿತಾಂಶ ಪಡೆದಿದೆ.

ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈ : ಚಿತ್ರದುರ್ಗ ಜಿಲ್ಲೆಯ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿ ಮೇಲುಗೈ ಸಾಧಿಸಿದ್ದಾರೆ. ಒಟ್ಟು 15927 ಗ್ರಾಮೀಣ ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು, ಈ ಪೈಕಿ 11900 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಶೇ.74.71 ರಷ್ಟು ಉತ್ತೀರ್ಣತೆಯ ಸಾಧನೆ ಮೆರೆದಿದ್ದಾರೆ.
ನಗರ ಪ್ರದೇಶದಲ್ಲಿ 6348 ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು, 4327 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಶೇ.68.16 ರಷ್ಟು ಸಾಧನೆ ತೋರಿದ್ದಾರೆ.

ಜಿಲ್ಲೆಯ 157 ಸರ್ಕಾರಿ ಶಾಲೆಯ 8377 ವಿದ್ಯಾರ್ಥಿಗಳ ಪೈಕಿ 6174 ವಿದ್ಯಾರ್ಥಿಗಳು, 180 ಅನುದಾನಿತ ಶಾಲೆಗಳ 8860 ವಿದ್ಯಾರ್ಥಿಗಳ ಪೈಕಿ 5866 ವಿದ್ಯಾರ್ಥಿಗಳು, 137 ಅನುದಾನರಹಿತ ಶಾಲೆಗಳ 5038 ವಿದ್ಯಾರ್ಥಿಗಳ ಪೈಕಿ 4187 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎಂ.ನಾಸಿರುದ್ದೀನ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

ಬೆಂಗಳೂರಿನಲ್ಲಿ ನಟ-ನಟಿಯರ ರೇವ್ ಪಾರ್ಟಿಯಲ್ಲಿ ಸಿಕ್ಕಿದ್ದೇನು..?

  ಬೆಂಗಳೂರು: ಇಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ತೆಲುಗು

ಸವಾಲುಗಳ ನಡುವೆಯೇ ಜಯಭೇರಿ ಬಾರಿಸಿದ ಸಿದ್ದರಾಮಯ್ಯ ಸರ್ಕಾರ : ಇಂದಿಗೆ ಒಂದು ವರ್ಷ

  2023 ಮೇ 20ರಂದು ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿತ್ತು, ಸಿದ್ದರಾಮಯ್ಯ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು. ಇಂದಿಗೆ ಆ ಸಂಭ್ರಮದ ದಿನಕ್ಕೆ ವರ್ಷದ ಸಂಭ್ರಮ. ಸಿದ್ದರಾಮಯ್ಯ ಸರ್ಕಾರ

error: Content is protected !!